Get Updates
Get notified of breaking news, exclusive insights, and must-see stories!

Cyclone Biparjoy Flights Canceled: ಬಿಪರ್‌ಜಾಯ್ ಚಂಡಮಾರುತದಿಂದಾಗಿ ಮುಂಬೈನಲ್ಲಿ ವಿಮಾನಗಳ ಹಾರಾಟ ರದ್ದು

ಬಿಪರ್‌ಜಾಯ್ ಚಂಡಮಾರುತ ತೀವ್ರಗೊಂಡಿದ್ದು ಮುಂಬೈ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಹಾರಾಟ ರದ್ದುಗೊಳಿಸಲಾಗಿದೆ. ಬಲವಾದ ಗಾಳಿ ಹಾಗೂ ಮಳೆಯಿಂದಾಗಿ ಮುಂಬೈ ವಿಮಾನ ನಿಲ್ದಾಣದ ರನ್‌ವೇ 09/27 ಅನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಪರಿಣಾಮ ಕೆಲವು ವಿಮಾನಗಳ ವಿಳಂಬವಾಗಿದ್ದು ಇನ್ನೂ ಕೆಲವು ವಿಮಾನಗಳ ಹಾರಾಟ ರದ್ದಾಗಿದೆ. 'ನಮ್ಮ ಪ್ರಯಾಣಿಕರಿಗೆ ಉಂಟಾದ ಅನಾನುಕೂಲತೆಗಾಗಿ ನಾವು ವಿಷಾದಿಸುತ್ತೇವೆ, ಏಕೆಂದರೆ ಅಡೆತಡೆಗಳನ್ನು ಕಡಿಮೆ ಮಾಡಲು ನಾವು ಎಲ್ಲಾ ಪ್ರಯತ್ನಗಳನ್ನು ಮಾಡುತ್ತೇವೆ' ಎಂದು ಏರ್ ಇಂಡಿಯಾ ಟ್ವೀಟ್ ಮಾಡಿದೆ.

ಗುಜರಾತ್ ಕರಾವಳಿಯಲ್ಲಿ ಎತ್ತರದ ಅಲೆಗಳು ಅಪ್ಪಳಿಸುತ್ತಿದ್ದು ಚಂಡಮಾರುತದ ತೀವ್ರತೆ ಕಾಣಿಸುತ್ತಿದೆ. ಅರಬ್ಬಿ ಸಮುದ್ರದಲ್ಲಿ ಚಂಡಮಾರುತ ಅತ್ಯಂತ ಶಕ್ತಿಯುತವಾಗಿದೆ. ಅಂದಾಜಿನ ಪ್ರಕಾರ ಇದು ಗುಜರಾತ್‌ನ 6 ಜಿಲ್ಲೆಗಳಲ್ಲಿ ವಿನಾಶವನ್ನು ಉಂಟುಮಾಡುವ ಸಾಧ್ಯತೆ ಇದೆ. ಈ ಕಾರಣಕ್ಕಾಗಿ ಇಲ್ಲಿ ಹಳದಿ ಎಚ್ಚರಿಕೆಯನ್ನು ನೀಡಲಾಗಿದೆ.

Cyclone Biparjoy

ಬಿಪರ್‌ಜೋಯ್ ಚಂಡಮಾರುತದಿಂದಾಗಿ ಗುಜರಾತ್‌ನ ಪೋರಬಂದರ್, ಜಾಮ್‌ನಗರ, ರಾಜ್‌ಕೋಟ್, ಜುನಾಗಡ್, ಕಚ್, ದ್ವಾರಕಾ ಮತ್ತು ಮೋರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಎಚ್ಚರಿಕೆಯನ್ನು ನೀಡಲಾಗಿದೆ. ಈ ಚಂಡಮಾರುತವು ಗುಜರಾತ್‌ನ ಕರಾವಳಿ ಪ್ರದೇಶಗಳಿಗೆ ಅಪ್ಪಳಿಸುವ ಸಮಯದಲ್ಲಿ ಗಂಟೆಗೆ 150 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಅಪಾಯಕಾರಿ ಸ್ಥಳಗಳಲ್ಲಿ NDRF ಮತ್ತು SDRF ಅನ್ನು ನಿಯೋಜಿಸಲಾಗಿದೆ. ಪ್ರಸ್ತುತ, ಚಂಡಮಾರುತ ಪೋರಬಂದರ್ ಜಿಲ್ಲೆಯಿಂದ ಸುಮಾರು 870 ಕಿಮೀ ನೈಋತ್ಯ ಸ್ಥಾನದಲ್ಲಿ ಸ್ಥಿರವಾಗಿದೆ ಮತ್ತು ವೇಗವಾಗಿ ಚಲಿಸುತ್ತಿದೆ. ಇದರಿಂದಾಗಿ ಗುಜರಾತ್, ಮುಂಬೈ, ಗೋವಾ, ಕರ್ನಾಟಕ, ತಮಿಳುನಾಡಿನಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ.

Cyclone Biparjoy: Severe Cyclone Biparjoy: Flights canceled in Mumbai

ಜೂನ್ 15 ರವರೆಗೆ ಕಚ್, ದ್ವಾರಕಾ, ಪೋರಬಂದರ್, ಜಾಮ್‌ನಗರ, ರಾಜ್‌ಕೋಟ್, ಜುನಾಗಢ್ ಮತ್ತು ಮೋರಿಯಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಗುಜರಾತಿನ ಸ್ಥಿತಿ ಹೀಗಿದ್ದರೆ, ಮತ್ತೊಂದೆಡೆ ಮುಂಬೈನಲ್ಲೂ ಇದರ ಪರಿಣಾಮ ಗೋಚರಿಸುತ್ತಿದೆ. IMD ಪ್ರಕಾರ, ಥಾಣೆ, ರಾಯಗಢ, ಮುಂಬೈ ಮತ್ತು ಪಾಲ್ಘರ್ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಗಂಟೆಗೆ 45-55 ಕಿಮೀ ವೇಗದಲ್ಲಿ ಗಾಳಿಯ ವೇಗದೊಂದಿಗೆ ಮಳೆಯಾಗುವ ಸಾಧ್ಯತೆಯಿದೆ.

ಈ ಚಂಡಮಾರುತ ಅತ್ಯಂತ ಶಕ್ತಿಯುತವಾಗಿದೆ. ಇದರಿಂದಾಗಿ ಪೀಡಿತ ಪ್ರದೇಶಗಳಲ್ಲಿ ಭಾರೀ ಮಳೆ ಮತ್ತು ಬಲವಾದ ಗಾಳಿಯ ಸಾಧ್ಯತೆಯಿದೆ. ಈ ಕಾರಣಕ್ಕಾಗಿ ಗುಜರಾತ್, ಮುಂಬೈ-ಗೋವಾ, ಕರ್ನಾಟಕ-ಕೇರಳ ಮತ್ತು ಲಕ್ಷದ್ವೀಪದ ಮೀನುಗಾರರಿಗೆ ಜೂನ್ 15 ರವರೆಗೆ ಸಮುದ್ರಕ್ಕೆ ಇಳಿಯದಂತೆ ತಿಳಿಸಲಾಗಿದೆ.

ಕರ್ನಾಟಕದಲ್ಲಿ ಬಿಪರ್‌ಜೋಯ್ ಚಂಡಮಾರುತ

ಬಿಪರ್‌ಜೋಯ್ ಚಂಡಮಾರುತದ ಹಿನ್ನೆಲೆಯಲ್ಲಿ ಅರಬ್ಬಿ ಸಮುದ್ರದಲ್ಲಿ ಅಲೆಗಳ ಗಾತ್ರ ದೊಡ್ಡದಾಗುತ್ತಿವೆ. ಇದರಿಂದಾಗಿ ಕರ್ನಾಟಕ ಕರಾವಳಿಯಲ್ಲಿ ಕಡಲ ಕೊರೆತ ಆರಂಭವಾಘಿದೆ. ಅಲೆಗಳು ವೇಗವಾಗಿ ದಡಕ್ಕೆ ಅಪ್ಪಳಿಸುತ್ತಿದ್ದು, ಎರಡೇ ದಿನದಲ್ಲಿ ಐದು ಮೀಟರ್ ಭೂಮಿ ಸಮುದ್ರದ ಪಾಲಾಗಿದೆ. ಮುಂಗಾರು ಆರಂಭದ ಹಂತದಲ್ಲಿಯೇ ಅಲೆಗಳು ತೀವ್ರತೆ ಜಾಸ್ತಿಯಾಗುತ್ತಿರುವ ಕಾರಣ ಮನೆಗಳು ಧರೆಗುರುಳಿವೆ. ಇದಕ್ಕಾಗಿ ಶಾಶ್ವತ ಪರಿಹಾರ ನೀಡಬೇಕು ಎಂದು ಜನ ಆಗ್ರಹಿಸಿದ್ದಾರೆ.

ತೌಕ್ತೆ ಚಂಡಮಾರುತದ ಬಳಿಕ ಇದು ತೀವ್ರ ಸ್ವರೂಪದ ಚಂಡಮಾರುತ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಈಗಾಗಲೇ ಕೇರಳದ ಮೂಲಕ ಕರ್ನಾಟಕಕ್ಕೆ ಮುಂಗಾರು ಪ್ರವೇಶವಾಗಿದೆ. ಈಗಾಗಲೇ ಕರಾವಳಿಯಲ್ಲಿ ಅಲೆಗಳ ಅಬ್ಬರ ಜೋರಾಗಿದೆ. ಇದರ ಬೆನ್ನಲ್ಲೇ ಬಿಪರ್‌ಜೋಯ್ ಚಂಡಮಾರುತವು ಮತ್ತಷಟ್ಉ ಗಂಭೀರ ಸ್ವರೂಪ ಪಡೆಯುತ್ತಿರುವುದು ಆತಂಕ ಮೂಡಿಸಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+