ಮುಂದಿನ ಐದಾರು ಗಂಟೆಗಳಲ್ಲಿ ಗುಲಾಬ್ ಚಂಡಮಾರುತ ಪ್ರಭಾವ ಹೇಗಿರಲಿದೆ?

ಒಡಿಶಾ, ಸೆಪ್ಟೆಂಬರ್ 27: ಮುಂದಿನ ಐದಾರು ಗಂಟೆಗಳಲ್ಲಿ ಗುಲಾಬ್ ಚಂಡಮಾರುತ ತೀವ್ರತೆ ಸ್ವಲ್ಪ ಕಡಿಮೆಯಾಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ಗುಲಾಬ್ ಚಂಡಮಾರುತವು ಭಾನುವಾರ ರಾತ್ರಿ ಒಡಿಶಾ-ಆಂಧ್ರಪ್ರದೇಶ ಗಡಿಭಾಗಕ್ಕೆ ತಲುಪಿದ್ದು ತೀವ್ರ ಅನಾಹುತ ಸೃಷ್ಟಿಸಿದೆ.

ಚಂಡಮಾರುತ ಆಗಮನದಿಂದ ಒಡಿಶಾ ಹಾಗೂ ಆಂಧ್ರಪ್ರದೇಶ ಎರಡೂ ಕಡೆಯೂ ಮಳೆಯಾಗಿದೆ. ಒಡಿಶಾ, ಆಂಧ್ರಪ್ರದೇಶ ಮತ್ತು ಪಶ್ಚಿಮ ಬಂಗಾಳದಲ್ಲಿ ಪ್ರವಾಹ ಸ್ಥಿತಿ ಎದುರಿಸುವ ಅಪಾಯವಿದ್ದ ಪ್ರದೇಶಗಳಿಂದ ಒಂದು ಲಕ್ಷಕ್ಕೂ ಅಧಿಕ ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ.

Cyclone Gulab Crossed Andhra -Odisha coasts, lLkely To Weaken Into Deep Depression In Next 6 Hours

ಈ ಚಂಡಮಾರುತ ಕಳಿಂಗಪಟ್ಟಣಂ ಮತ್ತು ಗೋಪಾಲಪುರ ನಡುವೆ ಉತ್ತರ ಆಂಧ್ರಪ್ರದೇಶ ಹಾಗೂ ದಕ್ಷಿಣ ಒಡಿಶಾವನ್ನು ದಾಟಲಿದ್ದು ಕಳಿಂಗಪಟ್ಟಣಂ ನಲ್ಲಿ ಹೆಚ್ಚಿನ ಗಾಳಿ ಬೀಸುತ್ತಿದೆ.

ಗುಲಾಬ್ ಚಂಡಮಾರುತದ ಪ್ರಭಾವದಡಿಯಲ್ಲಿ ಮಹಾರಾಷ್ಟ್ರದ ಎಲ್ಲಾ 36 ಜಿಲ್ಲೆಗಳಿಗೆ ಸೋಮವಾರ ಮತ್ತು ಮಂಗಳವಾರ ಭಾರೀ ಮಳೆಯ ಎಚ್ಚರಿಕೆ ನೀಡಲಾಗಿದೆ.

ಮುನ್ಸೂಚನೆಯಂತೆ ಚಂದ್ರಪುರವು ಸೋಮವಾರ ರೆಡ್ ಅಲರ್ಟ್‌ನಲ್ಲಿದೆ. ಅದೇ ವೇಳೆ ಮುಂಬೈ ಮತ್ತು ನೆರೆಯ ಜಿಲ್ಲೆಗಳಾದ ಥಾಣೆ, ಪಾಲ್ಘರ್ ಮತ್ತು ಇತರ 17 ಜಿಲ್ಲೆಗಳಲ್ಲಿ ಘಾಟ್ ಪ್ರದೇಶದಲ್ಲಿ ಬಿರುಗಾಳಿ, ಗುಡುಗು ಮತ್ತು ಮಿಂಚಿನೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಸೋಮವಾರ ರಾಯಗಢ, ರತ್ನಗಿರಿ, ಪುಣೆ, ಸತಾರ, ನಾಸಿಕ್, ಪರಭಾನಿ, ಲಾತೂರ್, ಹಿಂಗೋಲಿ, ನಾಂದೇಡ್, ಯಾವತ್ಮಲ್, ಗಡ್ಚಿರೋಲಿಯಲ್ಲಿ ಆರೆಂಜ್ ಅಲರ್ಟ್‌ ಘೋಷಿಸಿದೆ.

ಸಂಜೆ 6 ಗಂಟೆಗೆ ಆರಂಭವಾದ ಭೂಕುಸಿತ ಪ್ರಕ್ರಿಯೆ ಮುಂದಿನ 2-3 ಗಂಟೆಗಳ ಕಾಲ ಉತ್ತರ ಕರಾವಳಿ ಆಂಧ್ರಪ್ರದೇಶ ಮತ್ತು ಪಕ್ಕದ ದಕ್ಷಿಣ ಕರಾವಳಿ ಒಡಿಶಾದಲ್ಲಿ ಮುಂದುವರಿಯುತ್ತದೆ ಎಂದು ಐಎಂಡಿ ಹೇಳಿತ್ತು.

ಗುಲಾಬ್ ಚಂಡಮಾರುತವು ಭೂಕುಸಿತವನ್ನು ಮುಂದುವರಿಸುತ್ತಿದ್ದಂತೆ ಕಳಿಂಗಪಟ್ಟಣದಲ್ಲಿ ಹೆಚ್ಚಿನ ಗಾಳಿ ಬೀಸುತ್ತಿದೆ. ಗುಲಾಬ್ ಚಂಡಮಾರುತವು ಉತ್ತರ ಕರಾವಳಿ ಆಂಧ್ರಪ್ರದೇಶದಲ್ಲಿ ತನ್ನ ಭೂಕುಸಿತವನ್ನು ಪ್ರಾರಂಭಿಸುವ ಮೊದಲು ಗುಲಾಬ್ ಚಂಡಮಾರುತವು ಪಶ್ಚಿಮಕ್ಕೆ ಚಲಿಸುವ ನಿರೀಕ್ಷೆಯಿದೆ.

ಐಎಂಡಿಯ ಇತ್ತೀಚಿನ ಬುಲೆಟಿನ್ ಪ್ರಕಾರ, ಸಂಜೆ 6 ಗಂಟೆಗೆ ತನ್ನ ಭೂಕುಸಿತವನ್ನು ಆರಂಭಿಸಿದ ಚಂಡಮಾರುತವು ಮುಂದಿನ 2-3 ಗಂಟೆಗಳಲ್ಲಿ ದಕ್ಷಿಣ ಕರಾವಳಿ ಒಡಿಶಾ ಮತ್ತು ಉತ್ತರ ಕರಾವಳಿ ಆಂಧ್ರಪ್ರದೇಶದಲ್ಲಿ ಮುಂದುವರಿಯುತ್ತದೆ.

ಮೀನುಗಾರರು ನಾಪತ್ತೆಯಾಗಿರುವ ಘಟನೆ ಶ್ರೀಕಾಕುಳಂ ನಲ್ಲಿ ವರದಿಯಾಗಿದ್ದು, ಗಾಳಿಯ ಅಬ್ಬರಕ್ಕೆ ದೋಣಿ ಅಸ್ತವ್ಯಸ್ತಗೊಂಡು ಆರು ಮೀನುಗಾರರ ಪೈಕಿ ಇಬ್ಬರು ಸಾವನ್ನಪ್ಪಿದ್ದಾರೆ. ಓರ್ವ ಮೀನುಗಾರ ನಾಪತ್ತೆಯಾಗಿದ್ದು ಇನ್ನಿಬ್ಬರು ಈಜಿ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಚಂಡಮಾರುತ ಭೂಸ್ಪರ್ಶದ ಸಂದರ್ಭದಲ್ಲಿ ಕಳಿಂಗಪಟ್ಟಣಂ ನಲ್ಲಿ ಗಾಳಿಯ ವೇಗ ಗಂಟೆಗೆ 90 ಕಿ.ಮೀ ನಷ್ಟಿತ್ತು. ಒಡಿಶಾದ ಗೋಪಾಲ್ ಪುರದಲ್ಲಿ ಗಂಟೆಗೆ 30 ಕಿ.ಮೀ ವೇಗದಲ್ಲಿದೆ. ಯಾಸ್ ಚಂಡಮಾರುತದ ಬಳಿಕ ಎದುರಾಗಿರುವ ಎರಡನೇ ಚಂಡಮಾರುತ ಇದಾಗಿದೆ.

ಮುನ್ನೆಚ್ಚರಿಕಾ ಕ್ರಮವಾಗಿ ಪೂರ್ವ ಕರಾವಳಿ ರೈಲ್ವೆಯು 34 ರೈಲುಗಳ ಸಂಚಾರವನ್ನು ರದ್ದುಪಡಿಸಿದೆ. ಚಂಡಮಾರುತ ತುರ್ತು ಪರಿಸ್ಥಿತಿಯನ್ನು ಎದುರಿಸಲು ನೌಕಾಪಡೆಯ ಎರಡು ವಿಮಾನವಾಹಕ ನೌಕೆಗಳನ್ನು ಸಿದ್ಧವಾಗಿ ಇರಿಸಲಿದೆ. ಚೆನ್ನೈಗೆ ಸಮೀಪದಲ್ಲಿ ಐಎನ್‌ಎಸ್ ದೇಗಾ ಹಾಗೂ ಐಎನ್‌ಎಸ್ ರಾಜಾಲಿ ನೌಕೆಗಳನ್ನು ಸಜ್ಜಾಗಿ ಇರಿಸಲಾಗಿದೆ.

ತುರ್ತು ಸಂದರ್ಭವನ್ನು ಎದುರಿಸಲು ಮತ್ತು ಜನರನ್ನು ತೆರವು ಮಾಡಲುಅನುಕೂಲವಾಗುವಂತೆ ಹೆಲಿಕಾಪ್ಟರ್‌ಗಳನ್ನು ಸಜ್ಜಾಗಿ ಇರಿಸಲಾಗಿದೆ. ಅಗತ್ಯ ವಸ್ತುಗಳನ್ನು ಪೂರೈಕೆ ಮಾಡಲು ಈಗಾಗಲೇ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ನೌಕಾಪಡೆ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+