ಮಾಂಡೌಸ್ ಚಂಡಮಾರುತ: ತಮಿಳುನಾಡು, ಆಂಧ್ರ, ಪುದುಚೇರಿಗೆ IMD ಮಳೆ, ಗಾಳಿ ಎಚ್ಚರಿಕೆ
ದೆಹಲಿ ಡಿಸೆಂಬರ್ 9: ಬುಧವಾರ ಸಂಜೆ ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ರೂಪುಗೊಂಡ ಮಾಂಡೌಸ್ ಚಂಡಮಾರುತ ಇಂದು ತೀವ್ರಗೊಳ್ಳುವ ಸಾಧ್ಯತೆ ಇದೆ. ಇದರಿಂದ ಶುಕ್ರವಾರ ಬೆಳಿಗ್ಗೆ ತಮಿಳುನಾಡು, ಆಂಧ್ರಪ್ರದೇಶ, ಪುದುಚೇರಿಯಲ್ಲಿ ಮಳೆಯೊಂದಿಗೆ ಗಂಟೆಗೆ 105 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ. ಶುಕ್ರವಾರ ಮಧ್ಯರಾತ್ರಿಯ ಸುಮಾರಿಗೆ ಮಹಾಬಲಿಪುರಂ ಬಳಿ ತಮಿಳುನಾಡು ಕರಾವಳಿಯನ್ನು ತಲುಪುವ ಚಂಡಮಾರುತ ಕ್ರಮೇಣ ದುರ್ಬಲಗೊಳ್ಳುತ್ತದೆ ಎಂದು ಐಎಂಡಿ ತಿಳಿಸಿದೆ.
"ಸಮುದ್ರ ಮೇಲ್ಮೈ ತಾಪಮಾನ, ಸಮುದ್ರದ ಶಾಖ ಹಾಗೂ ಸಾಗರದ ಪರಿಸ್ಥಿತಿಗಳು ಚಂಡಮಾರುತ ರಚನೆಗೆ ಅವಕಾಶಿಸುತ್ತವೆ. ಇದು ಇಂದು ರಾತ್ರಿ ತೀವ್ರತೆಯನ್ನು ಪಡೆಯುತ್ತದೆ. ಶುಕ್ರವಾರ ಭೂ ಮೇಲ್ಮೈಗೆ ಹತ್ತಿರವಾಗುತ್ತಿದ್ದಂತೆ ಮಾಂಡೌಸ್ ಚಂಡಮಾರುತ ಶನಿವಾರ ಕ್ರಮೇಣ ದುರ್ಬಲಗೊಳ್ಳುತ್ತದೆ. ಈ ವೇಳೆ ವೇಗವಾಗಿ ಗಾಳಿ ಬೀಸುವುದನ್ನು ಕಾಣಬಹುದು "ಎಂದು ಐಎಂಡಿ ಮಹಾನಿರ್ದೇಶಕ ಎಂ ಮೊಹಪಾತ್ರ (Mohapatra) ಹೇಳಿದರು.

ಇಂದು ತೀವ್ರಗೊಳ್ಳಲಿರುವ ಮಾಂಡೌಸ್
ನೈಋತ್ಯ ಬಂಗಾಳ ಕೊಲ್ಲಿಯಲ್ಲಿನ ಮಾಂಡೌಸ್ ಚಂಡಮಾರುತ ಮೊದಲು ಪಶ್ಚಿಮ-ವಾಯುವ್ಯಕ್ಕೆ ಚಲಿಸಿತು. ಗುರುವಾರ ಮಧ್ಯಾಹ್ನ ಶ್ರೀಲಂಕಾದ ಟ್ರಿಂಕೋಮಲಿಯ ಪೂರ್ವ-ಈಶಾನ್ಯಕ್ಕೆ 250 ಕಿಮೀ, ಜಾಫ್ನಾದಿಂದ 350 ಕಿಮೀ ಪೂರ್ವಕ್ಕೆ, ಪುದುಚೇರಿಯ ಕಾರೈಕಲ್ನಿಂದ 390 ಕಿಮೀ ಪೂರ್ವ-ಆಗ್ನೇಯಕ್ಕೆ ಮತ್ತು ಚೆನ್ನೈನ ಆಗ್ನೇಯಕ್ಕೆ 480 ಕಿಮೀ ಕೇಂದ್ರೀಕೃತವಾಗಿತ್ತು.

ತಮಿಳುನಾಡು, ಪುದುಚೇರಿ, ಆಂದ್ರದಲ್ಲಿ ಮಳೆ
ಆದರಿಂದು ಇದು ಉತ್ತರ ತಮಿಳುನಾಡು, ಪುದುಚೇರಿ ಮತ್ತು ಪಕ್ಕದ ದಕ್ಷಿಣ ಆಂಧ್ರಪ್ರದೇಶವನ್ನು ಪುದುಚೇರಿ ಮತ್ತು ಶ್ರೀಹರಿಕೋಟಾ ನಡುವೆ ದಾಟುವ ಸಾಧ್ಯತೆಯಿದೆ. ಇದರಿಂದ ಮಹಾಬಲಿಪುರಂ ಸುತ್ತಮುತ್ತ ಶುಕ್ರವಾರ ಮಧ್ಯರಾತ್ರಿಯ ಸುಮಾರಿಗೆ ಗಂಟೆಗೆ 75 ಕಿಮೀನಿಂದ 85 ಕಿಮೀ ವೇಗದಲ್ಲಿ ಗಾಳಿ ಬೀಸುತ್ತದೆ. "ಶುಕ್ರವಾರದಂದು ತಮಿಳುನಾಡು, ಪುದುಚೇರಿ ಮತ್ತು ಪದುಚೇರಿಯಲ್ಲಿ ಭಾರೀ ಮಳೆಯೊಂದಿಗೆ ಬಲವಾದ ಗಾಳಿ ಬೀಸಲಿದೆ" ಎಂದು ಮೊಹಪಾತ್ರ ಹೇಳಿದರು.
ಕರಾವಳಿ ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್ನಲ್ಲಿ ಹೆಚ್ಚಿನ ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕರಾವಳಿ ಆಂಧ್ರಪ್ರದೇಶ ಮತ್ತು ರಾಯಲಸೀಮಾದ ಪಕ್ಕದ ಪ್ರದೇಶಗಳಲ್ಲಿಯೂ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಶನಿವಾರದವರೆಗೂ ಮಳೆಯೊಂದಿಗೆ ಗಾಳಿ
ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ಗಂಟೆ 75-85ಕಿಮೀ ವೇಗದಲ್ಲಿ ಗಾಳಿ ಬೀಸುತ್ತದೆ. ಇದು ಗುರುವಾರ ರಾತ್ರಿಯ ವೇಳೆಗೆ 100ಕಿಮೀಗೆ ಹೆಚ್ಚಾಗಿತ್ತು. ಶುಕ್ರವಾರ ಬೆಳಿಗ್ಗೆ 95ಕಿಮೀಗೆ ಕ್ರಮೇಣ ಕಡಿಮೆಯಾಗುತ್ತದೆ.
ಗುರುವಾರದಿಂದ ತಮಿಳುನಾಡು, ಪುದುಚೇರಿ, ದಕ್ಷಿಣ ಆಂಧ್ರಪ್ರದೇಶ ಮತ್ತು ಉತ್ತರ ಶ್ರೀಲಂಕಾ ಕರಾವಳಿಯಲ್ಲಿ 40ರಿಂದ 60 ಕಿಮೀ ವೇಗದಲ್ಲಿ ಚಂಡಮಾರುತ ಪ್ರಾರಂಭವಾಗಿ, ಶುಕ್ರವಾರ ಬೆಳಿಗ್ಗೆ ಗಂಟೆಗೆ 85 ಕಿಮೀ ವೇಗದಲ್ಲಿ ಹಾಗೂ ಶನಿವಾರದ ಮುಂಜಾನೆಯವರೆಗೆ ಗಂಟೆಗೆ 50-60 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ. ನಂತರ ಕ್ರಮೇಣ ಕಡಿಮೆಯಾಗುವ ಸಾಧ್ಯತೆ ಇದೆ.

ರಾಜ್ಯಗಳಲ್ಲಿ ಭೂಕುಸಿತ- ತಗ್ಗು ಪ್ರದೇಶಗಳಿಗೆ ನೀರು
ನೈಋತ್ಯ ಬಂಗಾಳ ಕೊಲ್ಲಿಯ ಮೇಲೆಯಲ್ಲಿ ಮಾಂಡೌಸ್ ಚಂಡಮಾರುತ ತೀವ್ರಗೊಂಡಿದ್ದು ಶನಿವಾರದ ಮುಂಜಾನೆ ತನಕ ಪಶ್ಚಿಮ-ಮಧ್ಯ ಮತ್ತು ಆಗ್ನೇಯ ಬಂಗಾಳ ಕೊಲ್ಲಿಯ ಅಕ್ಕಪಕ್ಕದ ಪ್ರದೇಶಗಳಲ್ಲಿ ವೇಗವಾಗಿ ಗಾಳಿ ಬೀಸುವ ಸಾಧ್ಯತೆಯಿದೆ. ಗುರುವಾರ, ಶುಕ್ರವಾರ ಮತ್ತು ಶನಿವಾರದಂದು ದಕ್ಷಿಣ ಆಂಧ್ರಪ್ರದೇಶ, ತಮಿಳುನಾಡು, ಪುದುಚೇರಿ ಮತ್ತು ಶ್ರೀಲಂಕಾ ಕರಾವಳಿಯುದ್ದಕ್ಕೂ ಸಮುದ್ರದ ಪರಿಸ್ಥಿತಿಗಳು ತುಂಬಾ ಒರಟಾಗಿರುತ್ತವೆ. ಚಂಡಮಾರುತದ ಉಲ್ಬಣ ಉತ್ತರ ಕರಾವಳಿ ತಮಿಳುನಾಡು ಮತ್ತು ಪುದುಚೇರಿಯ ತಗ್ಗು ಪ್ರದೇಶಗಳನ್ನು ಮುಳುಗಿಸುವ ಹಾಗೂ ಭೂಕುಸಿತ ಉಂಟು ಮಾಡುವ ಸಾಧ್ಯತೆಯಿದೆ.
-
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ












Click it and Unblock the Notifications