Cyclone Michaung: ಮಿಚುವಾಂಗ್ ಚಂಡಮಾರುತ- ಮಳೆಯ ನಡುವೆ ತಿರುಮಲ ಬೆಟ್ಟದಲ್ಲಿ ಆವರಿಸಿದ ಕತ್ತಲು
ಮಿಚುವಾಂಗ್ ಚಂಡಮಾರುತದಿಂದಾಗಿ ಹಲವೆಡೆ ಭಾರೀ ಮಳೆಯಾಗುತ್ತಿದ್ದು ತಿರುಪತಿಯಲ್ಲೂ ಇದರ ಎಫೆಕ್ಟ್ ಕಾಣಿಸಿಕೊಂಡಿದೆ. ಕಳೆದ ಕೆಲ ದಿನಗಳಿಂದ ಚೆನ್ನೈ ಸೇರಿದಂತೆ ಹಲವೆಡೆ ಭಾರೀ ಮಳೆಯಾಗುತ್ತಿದ್ದು ತಿರುಪತಿಯಲ್ಲೂ ವರುಣ ಅರ್ಭಟಿಸುತ್ತಿದ್ದಾನೆ. ಇಂದು ಬೆಳಿಗ್ಗೆಯಿಂದ ಮೋಡ ಕವಿದ ವಾತಾವರಣವಿದ್ದು ಅಧಿಕ ಚಳಿ ಆವರಿಸಿದೆ. ತಿರುಪತಿಯಲ್ಲಿ ಕತ್ತಲಾದಂತೆ ಮೋಡ ಕವಿದಿದ್ದು ಮಳೆಯಾಗು ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮಾಹಿತಿ ನೀಡಿದೆ.
ಮಿಚುವಾಂಗ್ ಚಂಡಮಾರುತ ಕರಾವಳಿ ಸಮೀಪಿಸುತ್ತಿದ್ದಂತೆ ಚಂಡಮಾರುತದ ಪ್ರಭಾವದಿಂದ ತಮಿಳುನಾಡಿನ ದಕ್ಷಿಣ ಕರಾವಳಿ ಮತ್ತು ಉತ್ತರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಈ ವೇಳೆ ಬಲವಾದ ಗಾಳಿ ಬೀಸಲಿದೆ. ಜೊತೆಗೆ ರಾಯಲಸೀಮಾ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಕೇಂದ್ರ ತಿಳಿಸಿದೆ. ಮಾತ್ರವಲ್ಲದೆ ತೆಲಂಗಾಣದಲ್ಲೂ ಅತಿ ಹೆಚ್ಚು ಮಳೆಯಾಗಲಿದೆ ಎಂದು ಹೇಳಲಾಗುತ್ತಿದೆ. ಮುಂದಿನ 48 ಗಂಟೆಗಳ ಕಾಲ ನಿರಂತರ ಮಳೆಯಾಗಲಿದ್ದು, ಈಗಾಗಲೇ 204.4 ಮಿ.ಮೀ ಮಳೆಯಾಗಿದೆ. ಹೀಗಾಗಿ ಎಪಿ ಮತ್ತು ತಮಿಳುನಾಡಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಪ್ರದೇಶಗಳು ಮತ್ತು ಅಕ್ಕಪಕ್ಕದ ಜಿಲ್ಲೆಗಳಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಎಚ್ಚರಿಕೆ ನೀಡಲಾಗಿದೆ.

ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ ಎಪಿಯಲ್ಲಿ ಭಾರೀ ಮಳೆ ದಾಖಲಾಗಿದೆ. ಮಿಚುವಾಂಗ್ ಚಂಡಮಾರುತವು ಕರಾವಳಿಯನ್ನು ಸಮೀಪಿಸುವ ಮೊದಲು ಮಳೆ ಅರ್ಭಟ ಹೆಚ್ಚಾಗಲಿದೆ. ಇದರಿಂದಾಗಿ ತಿರುಪತಿಯಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಈಗಾಗಲೇ ತಿರುಮಲದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು ಭಕ್ತರಿಗೆ ಈ ಬಗ್ಗೆ ಎಚ್ಚರಿಕೆಯಿಂದಿರುವಂತೆ ಸೂಚಿಸಲಾಗಿದೆ.
ತಿರುಪತಿಯಲ್ಲಿ ನಾಲ್ಕು ವರ್ಷದ ಮಗು ಸಾವು
ಭಾರೀ ಮಳೆಗೆ ತಿರುಪತಿ ಜಿಲ್ಲೆಯ ಎರ್ಪಾಡು ಮಂಡಲದ ಚಿಂದೇಪಲ್ಲಿ ಎಸ್ಟಿ ಕಾಲೋನಿಯಲ್ಲಿ ನಾಲ್ಕು ವರ್ಷದ ಬಾಲಕ ಯಶವಂತ್ ಮೃತಪಟ್ಟಿದ್ದಾನೆ. ನೆಲ್ಲೂರು, ಅನ್ನಮಯ್ಯ ರಾಯಚೋಟಿ, ಚಿತ್ತೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಶನಿವಾರದಿಂದಲೂ ಈ ಜಿಲ್ಲೆಗಳಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ಚಂಡಮಾರುತ ಕರಾವಳಿಯನ್ನು ಸಮೀಪಿಸಿದ ನಂತರ ಮಳೆಯ ತೀವ್ರತೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ತಿರುಪತಿಯಲ್ಲಿ ಮಳೆಯಿಂದಾಗಿ ಆಹ್ಲಾದಕರ ವಾತಾವರಣವಿದೆ. ಈ ಹೊಸ ಅನುಭವದಿಂದ ಭಕ್ತರು ಸಂತಸಗೊಂಡಿದ್ದಾರೆ. ಬೆಳಗಿನ ಸುಪ್ರಭಾತ ಸೇವೆಯ ಸಮಯದಲ್ಲಿ ಬೆಟ್ಟದ ಮೇಲೆ ಮತ್ತು ದೇವಾಲಯದ ಸುತ್ತಮುತ್ತಲಿನ ಪ್ರದೇಶಗಳು ವಿಶೇಷ ಅನುಭವವನ್ನು ನೀಡುತ್ತಿವೆ. ತಿರುಪತಿಯಲ್ಲಿ ಇತ್ತೀಚಿಗೆ ಸುರಿದ ಧಾರಾಕಾರ ಮಳೆಯಿಂದಾಗಿ ಮೋಡ ಕವಿದ ವಾತಾವರಣ ಹಾಗೂ ಮಂಜಿನಿಂದಾಗಿ ಹಿಮದ ಹೊದಿಕೆಯಂತೆ ಕಣಿವೆಗಳು ಗೋಚರಿಸುತ್ತಿದೆ. ಇಂತಹ ಅದ್ಬುತ ನೋಟವನ್ನು ಕಣ್ತುಂಬಿಕೊಳ್ಳುತ್ತಾ ಭಕ್ತರು ಮಳೆ ನೀರಿನಲ್ಲಿಯೇ ಸ್ವಾಮಿಯ ದರ್ಶನ ಮುಗಿಸಿ ಸಂತಸದಿಂದ ಹೊರ ಬರುತ್ತಿದ್ದಾರೆ. ಜೊತೆಗೆ ಹಿಂದೆಂದೂ ಕಾಣದ ಇಂತಹ ಆಹ್ಲಾದಕರ ವಾತಾವರಣವನ್ನು ನೋಡಿ ಸಂತೋಷಗೊಂಡಿದ್ದಾರೆ. ಹೀಗಾಗಿ ಭಕ್ತರು ತಿರುಪತಿಗೆ ತೆರಳಲು ಇದು ಸೂಕ್ತ ಸಮಯವಾಗಿದೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ












Click it and Unblock the Notifications