TTD Alert Devotees On Cyclone: ತಿರುಮಲಕ್ಕೆ ಹೋಗುವ ಶ್ರೀವಾರಿ ಭಕ್ತರಿಗೆ ಪ್ರಮುಖ ಸೂಚನೆ.. ಈ ಸ್ಥಳಗಳಿಗೆ ಹೋಗದಂತೆ ತಡೆ!
ಮಿಚುವಾಂಗ್ ಚಂಡಮಾರುತದ ಪರಿಣಾಮ ತಿರುಮಲದಲ್ಲಿಯೂ ಗೋಚರಿಸುತ್ತಿದೆ. ಚಂಡಮಾರುತದ ಪ್ರಭಾವದಿಂದ ಕಳೆದ ಮೂರು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಗೆ ತಿರುಮಲದಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ನಿತ್ಯ ಸಾವಿರಾರು ಜನ ಭೇಟಿ ನೀಡುವ ಈ ಪವಿತ್ರ ಸ್ಥಳದಲ್ಲಿ ವರುಣನ ಅರ್ಭಟ ಜೋರಾಗಿದ್ದು ಭಕ್ತರಿಗೆ ತೊಂದರೆಯನ್ನುಂಟು ಮಾಡಿದೆ.
ಎಎನ್ಸಿಯ 412 ಕಾಟೇಜ್ ಹಾಗೂ ಬಿಎಸ್ಎನ್ಎಲ್ ಕಚೇರಿ ಬಳಿ ದೊಡ್ಡ ಮರಗಳು ಧರೆಗುರುಳಿವೆ. ಈ ಸಮಯದಲ್ಲಿ ಭಕ್ತರು ಯಾರೂ ಇಲ್ಲದ ಕಾರಣ ಭಾರೀ ಅನಾಹುತ ತಪ್ಪಿದಂತಾಗಿದೆ. ಚಂಡಮಾರುತದ ಅಬ್ಬರಕ್ಕೆ ತಿರುಮಲದ ತಗ್ಗು ಪ್ರದೇಶಗಳು ಸಂಪೂರ್ಣ ಜಲಾವೃತಗೊಂಡಿವೆ.

ತಿರುಪತಿಗೆ ಹೋಗುವ ಹಾದಿಯಲ್ಲಿ ಹಲವೆಡೆ ಮರಗಳು ಧರೆಗುರುಳಿರುವ ಹಿನ್ನೆಲೆಯಲ್ಲಿ ಹಲವೆಡೆ ಭಕ್ತರ ಅನುಮತಿಯನ್ನು ಟಿಟಿಡಿ ರದ್ದುಗೊಳಿಸಿದೆ. ಇವುಗಳ ಜೊತೆಗೆ ಶ್ರೀಪಾದಲು, ಶಿಲಾತೋರಣ ಮುಂತಾದ ಸ್ಥಳಗಳ ದರ್ಶನಕ್ಕೆ ಭಕ್ತರಿಗೆ ಅವಕಾಶ ಕಲ್ಪಿಸಲಾಗಿದೆ. ಆದರೆ ಈ ವಿಷಯವನ್ನು ಭಕ್ತರು ಗಮನಿಸಬೇಕು ಎಂದು ಸಲಹೆ ಟಿಟಿಡಿ ಸಲಹೆ ನೀಡಿದೆ.
ಮತ್ತೊಂದೆಡೆ ಭಾರಿ ಮಳೆಯ ಹಿನ್ನೆಲೆಯಲ್ಲಿ ಕಪಿಲತೀರ್ಥದಲ್ಲಿ ನೀರು ರಭಸವಾಗಿ ಹರಿಯುತ್ತಿದ್ದು, ಇದರಿಂದ ಟಿಟಿಡಿ ಮುಂಜಾಗ್ರತಾ ಕ್ರಮ ಕೈಗೊಳ್ಳುತ್ತಿದೆ. ಭಕ್ತರ ಸುರಕ್ಷತೆ ದೃಷ್ಟಿಯಿಂದ ಕಪಿಲತೀರ್ಥ ನೀರಿನಲ್ಲಿ ಪುಣ್ಯಸ್ನಾನ ಮಾಡಲು ಭಕ್ತರಿಗೆ ಅನುಮತಿ ನೀಡುವುದನ್ನು ಸ್ಥಗಿತಗೊಳಿಸಲಾಗಿದೆ. ಮಳೆ ತಗ್ಗಿದ ನಂತರ ಮತ್ತೆ ಭಕ್ತರಿಗೆ ಅವಕಾಶ ನೀಡಲಾಗುವುದು ಎಂದು ಟಿಟಿಡಿ ಹೇಳಿದೆ. ಭಕ್ತರು ಈ ವಿಷಯವನ್ನು ಗಮನಿಸಿ ಸಹಕರಿಸಬೇಕಾಗಿ ವಿನಂತಿ ಎಂದು ಟಿಟಿಡಿ ಮನವಿ ಮಾಡಿದೆ.
ಮುಂದಿನ 48 ಗಂಟೆಗಳ ಕಾಲ ನಿರಂತರ ಮಳೆಯಾಗಲಿದ್ದು, ಈಗಾಗಲೇ 204.4 ಮಿ.ಮೀ ಮಳೆಯಾಗಿದೆ. ಹೀಗಾಗಿ ಎಪಿ ಮತ್ತು ತಮಿಳುನಾಡಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಪ್ರದೇಶಗಳು ಮತ್ತು ಅಕ್ಕಪಕ್ಕದ ಜಿಲ್ಲೆಗಳಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಎಚ್ಚರಿಕೆ ನೀಡಲಾಗಿದೆ.
ತಿರುಪತಿಯಲ್ಲಿ ನಾಲ್ಕು ವರ್ಷದ ಮಗು ಸಾವು
ಭಾರೀ ಮಳೆಗೆ ತಿರುಪತಿ ಜಿಲ್ಲೆಯ ಎರ್ಪಾಡು ಮಂಡಲದ ಚಿಂದೇಪಲ್ಲಿ ಎಸ್ಟಿ ಕಾಲೋನಿಯಲ್ಲಿ ನಾಲ್ಕು ವರ್ಷದ ಬಾಲಕ ಯಶವಂತ್ ಮೃತಪಟ್ಟಿದ್ದಾನೆ. ನೆಲ್ಲೂರು, ಅನ್ನಮಯ್ಯ ರಾಯಚೋಟಿ, ಚಿತ್ತೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಶನಿವಾರದಿಂದಲೂ ಈ ಜಿಲ್ಲೆಗಳಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ಚಂಡಮಾರುತ ಕರಾವಳಿಯನ್ನು ಸಮೀಪಿಸಿದ ನಂತರ ಮಳೆಯ ತೀವ್ರತೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
-
Gold Rate Today: ಮತ್ತೆ ಏರಿಕೆ ಕಂಡ ಚಿನ್ನದ ದರ: ಇಂದು 10 ಗ್ರಾಂ ಬಂಗಾರದ ಬೆಲೆ 1,58,620 ರೂಪಾಯಿ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ: 13,712 ಪುಟಗಳ ಚಾರ್ಜ್ಶೀಟ್ ಸಲ್ಲಿಸಿದ ಎಸ್ಐಟಿ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ












Click it and Unblock the Notifications