Cyclone Mocha: ಮೋಚಾ ಚಂಡಮಾರುತ, ಈ ರಾಜ್ಯಗಳಲ್ಲಿ ತೀವ್ರ ಮಳೆ
ಬಂಗಾಳಕೊಲ್ಲಿಯಲ್ಲಿ ತೀವ್ರವಾದ ಮೋಚಾ ಚಂಡಮಾರುತವು ಭಾರತದ ಹಲವಾರು ಪ್ರದೇಶಗಳ ಮೇಲೆಯೂ ಪ್ರಭಾವ ಉಂಟು ಮಾಡಿದೆ. ಪ್ರಮುಖವಾಗಿ ಬಾಂಗ್ಲಾದೇಶದಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಇನ್ನು ಭಾರತದ ಪಶ್ಚಿಮ ಬಂಗಾಳದ ಮೇಲೆಯೂ ಈ ಚಂಡಮಾರುತ ಪ್ರಭಾವ ಬೀರಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್ಡಿಆರ್ಎಫ್) ಒಟ್ಟಾಗಿ 8 ರಕ್ಷಣಾ ತಂಡವನ್ನು ಪಶ್ಚಿಮ ಬಂಗಾಳದ ದಿಘಾದಲ್ಲಿ ನಿಯೋಜಿಸಿದೆ.
ಭಾರತದ ಹವಾಮಾನ ಇಲಾಖೆ (ಐಎಂಡಿ) ಪ್ರಕಾರ ಇದು ಅತೀ ತೀವ್ರವಾದ ಚಂಡಮಾರುತವಾಗಿದೆ. ಬಂಗಾಳದ ಮೇಲೆ ಈ ಚಂಡಮಾರುತವು ಭಾರೀ ಪ್ರಭಾವ ಉಂಟು ಮಾಡಲಿದೆ. "ಬಾಂಗ್ಲಾದೇಶದ ಉತ್ತರ ಭಾಗವನ್ನು ಮತ್ತು ಮಯನ್ಮಾರ್ನ ದಕ್ಷಿಣ ಕರಾವಳಿ ಭಾಗವನ್ನು ಈ ಚಂಡಮಾರುತವು ಕಾಕ್ಸ್ ಬಜಾರ್ (ಬಾಂಗ್ಲಾದೇಶ) ಮತ್ತು ಕ್ಯೌಕ್ಪಿಯು (ಮಯನ್ಮಾರ್) ಮೂಲಕ ಮೇ 14ರಂದು ದಾಟಲಿದೆ," ಎಂದು ಐಎಂಡಿ ಅಂದಾಜು ಮಾಡಿದೆ.

ಭಾರತದಲ್ಲಿ ಯಾವೆಲ್ಲ ರಾಜ್ಯಗಳಲ್ಲಿ ತೀವ್ರ ಮಳೆ?
ಅಂಡಮಾನ್ ಮತ್ತು ನಿಕೋಬರ್ ದ್ವೀಪ: ಭಾರತದ ದ್ವೀಪ ಪ್ರದೇಶವಾದ, ಕೇಂದ್ರಾಡಳಿತ ಪ್ರದೇಶ ಅಂಡಮಾನ್ ಮತ್ತು ನಿಕೋಬರ್ ದ್ವೀಪದಲ್ಲಿ ಮೇ 13ರಂದು ತೀವ್ರ, ಗುಡುಗು ಮಿಂಚು ಸಹಿತ ಮಳೆಯಾಗಲಿದೆ.
ತ್ರಿಪುರಾ & ಮಿಜೋರಾಂ: ಮೇ 13ರಂದು ಹಲವಾರು ಪ್ರದೇಶಗಳಲ್ಲಿ ತೀವ್ರ ಮಳೆಯಾಗಲಿದೆ ಮತ್ತು ಮೇ 14ರಂದು 13ರಂದು ಸುರಿದ ಮಳೆಗಿಂತ ಅಗಾಧ ಪ್ರಮಾಣದಲ್ಲಿ ಮಳೆಯಾಗಲಿದೆ.
ನಾಗಾಲ್ಯಾಂಡ್, ಮಣಿಪುರ & ದಕ್ಷಿಣ ಅಸ್ಸಾಂ: ಮೇ 14ರಂದು ನಾಗಾಲ್ಯಾಂಡ್, ಮಣಿಪುರ & ದಕ್ಷಿಣ ಅಸ್ಸಾಂ ಭಾಗಗಳಲ್ಲಿ ಭಾರೀ ಮಳೆಯಾಗಲಿದೆ.
ಮಯನ್ಮಾರ್ನಲ್ಲಿ ಸಾವಿರಾರು ಜನರ ಸ್ಥಳಾಂತರ
ಮೇ 14ರಂದು ಮಯನ್ಮಾರ್ ಮೇಲೆ ಮೋಚಾ ಚಂಡಮಾರುತವು ತೀವ್ರ ಪ್ರಭಾವ ಉಂಟು ಮಾಡಲಿದೆ ಎಂದು ಈಗಾಗಲೇ ಹವಾಮಾನ ಇಲಾಖೆಗಳು ಮಾಹಿತಿ ನೀಡಿದೆ. ಈ ಬೆನ್ನಲ್ಲೇ ಮಯನ್ಮಾರ್ನಲ್ಲಿ ಸಾವಿರಾರು ಮಂದಿಯನ್ನು ಸ್ಥಳಾಂತರ ಮಾಡಲಾಗಿದೆ.
ಕರ್ನಾಟಕದಲ್ಲಿ ಹವಾಮಾನ ಹೇಗಿದೆ?
ಕರಾವಳಿಯ ಮತ್ತು ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ, ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಪ್ರಮುಖವಾಗಿ ಪುತ್ತೂರು, ಮಾಣಿ, ಕೃಷ್ಣರಾಜಸಾಗರ, ಬಾಳೆಹೊನ್ನೂರು, ಉಡುಪಿ, ಶಿವಮೊಗ್ಗ, ಮಂಗಳೂರಯ, ಹೊಸಕೋಡೆ, ಮದ್ದೂರು, ಟಿ ನರಸೀಪುರ, ವಿರಾಜಪೇಟೆ, ಶ್ರೀರಂಗಪಟ್ಟಣ, ಬಂಕಾಪುರ, ರಾಮನಗರ ಮೊದಲಾದ ಪ್ರದೇಶದಲ್ಲಿ ಮಳೆಯಾಗಿದೆ.
ಇನ್ನು ಮುಂದಿನ 24 ಗಂಟೆಗಳಲ್ಲಿ ಕರಾವಳಿಯ ಎಲ್ಲ ಜಿಲ್ಲೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗದಲ್ಲಿ, ಧಾರವಾಡ, ಗದಗ, ಹಾವೇರಿ, ಬೆಳಗಾವಿಯಲ್ಲಿ ಮಳೆಯಾಗಲಿದೆ. ಕೆಲವೆಡೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಐಎಂಡಿ ಹೇಳಿದೆ. ಆದರೆ ರಾಜ್ಯದ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆ ಇಲ್ಲ ಎಂದು ತಿಳಿಸಿದೆ.
-
Rain Alert: ಬೇಸಿಗೆ ಮಳೆಗೆ ಬೆಂಗಳೂರಿನ ಕೆಲವೆಡೆ ಸಂಚಾರ ಅಸ್ತವ್ಯಸ್ತ, ಮಾ.21ರವರೆಗೂ ಮಳೆ -
Heavy Rain: ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಆಲಿಕಲ್ಲು ಸಹಿತ ಧಾರಾಕಾರ ಮಳೆ: ಐಎಂಡಿ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ? -
ಆಲಿಕಲ್ಲು ಮಳೆಗೆ ನೆಲಕಚ್ಚಿದ ಮಾವು, ಹಲಸು, ಕಲ್ಲಂಗಡಿ; ಕೈಗೆ ಬಂದ ತುತ್ತು ಬಾಯಿಗಿಲ್ಲ -
Bengaluru Rain: ಬೆಂಗಳೂರಿನ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ: ಯುಗಾದಿಗೆ ಮೊದಲ ಮಳೆ; ರಾಜ್ಯಕ್ಕೆ ಶುಭಸೂಚಕ -
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ: 13,712 ಪುಟಗಳ ಚಾರ್ಜ್ಶೀಟ್ ಸಲ್ಲಿಸಿದ ಎಸ್ಐಟಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
Viral Video: 'ಓಂಕಾರ' ಚಿತ್ರದ ಬೀಡಿ ಜಲೈಲೆ ಹಾಡಿಗೆ ಸಖತ್ ಸ್ಟೆಪ್ಸ್ ಹಾಕಿದ ಬ್ರೆಜಿಲ್ ಬೆಡಗಿಯರು -
Gold Rate Today: ಮತ್ತೆ ಏರಿಕೆ ಕಂಡ ಚಿನ್ನದ ದರ: ಇಂದು 10 ಗ್ರಾಂ ಬಂಗಾರದ ಬೆಲೆ 1,58,620 ರೂಪಾಯಿ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ











Click it and Unblock the Notifications