Cyclone Remal: ಪಶ್ಚಿಮ ಬಂಗಾಳದಲ್ಲಿ ಮಳೆ ಆರ್ಭಟಕ್ಕೆ ಎರಡು ಬಲಿ, ಮೆಟ್ರೋ ಸೇವೆ ಅಸ್ತವ್ಯಸ್ತ
ಕೋಲ್ಕತ್ತಾ, ಮೇ. 27: ಭಾನುವಾರ ಪಶ್ಚಿಮ ಬಂಗಾಳ ಮತ್ತು ಬಾಂಗ್ಲಾದೇಶದ ಕರಾವಳಿಯಲ್ಲಿ ಸುರಿದ ಮಳೆಯಿಂದ ಪಶ್ಚಿಮ ಬಂಗಾಳದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ರೆಮಲ್ ಚಂಡಮಾರುತದ ಪ್ರಭಾವ ಹೆಚ್ಚಾಗಿದ್ದು, ಕೋಲ್ಕತ್ತಾ ವಿಮಾನ ನಿಲ್ದಾಣದಲ್ಲಿ ಭಾನುವಾರ ಮಧ್ಯಾಹ್ನ ವಿಮಾನ ಹಾರಾಟವನ್ನು ಸ್ಥಗಿತಗೊಳಿಸಿ ನಂತರ ಪುನರಾರಂಭಿಸಲಾಗಿದೆ.
ಪಶ್ಚಿಮ ಬಂಗಾಳ ಮತ್ತು ನೆರೆಯ ಬಾಂಗ್ಲಾದೇಶದಲ್ಲಿ ರೆಮಲ್ ಚಂಡಮಾರುತ ಭಾರೀ ವಿನಾಶಕ್ಕೆ ಕಾರಣವಾಗಿದೆ. ಕೋಲ್ಕತ್ತಾದ ಹಲವಾರು ಭಾಗಗಳಲ್ಲಿ ಮರಗಳು ಧರೆಗೆ ಉರುಳಿವೆ. ಮರ ಬಿದ್ದು ಮೂವರು ಗಾಯಗೊಂಡಿದ್ದಾರೆ. ಇದರಿಂದ ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ಸದರ್ನ್ ಅವೆನ್ಯೂ, ಲೇಕ್ ಪ್ಲೇಸ್, ಚೆಟ್ಲಾ, ಡಿಎಲ್ ಖಾನ್ ರಸ್ತೆ, ಡಫರಿನ್ ರಸ್ತೆ, ಬ್ಯಾಲಿಗುಂಜ್ ರಸ್ತೆ, ನ್ಯೂ ಅಲಿಪೋರ್, ಬೆಹಾಲಾ, ಜಾದವ್ಪುರ್, ಗೋಲ್ಪಾರ್ಕ್, ಹತಿಬಗನ್, ಜಗತ್ ಮುಖರ್ಜಿ ಪಾರ್ಕ್ ಮತ್ತು ಕಾಲೇಜ್ ಸ್ಟ್ರೀಟ್ ಹಾಗೂ ನಗರದ ವಿವಿಧೆಡೆ ಮರಗಳು ಉರುಳಿದ ವರದಿಗಳು ಬಂದಿವೆ. ಕೋಲ್ಕತ್ತಾದಲ್ಲಿ ಸುಮಾರು 68 ಮರಗಳು ಮತ್ತು ಸಮೀಪದ ಸಾಲ್ಟ್ ಲೇಕ್ ಮತ್ತು ರಾಜರಹತ್ ಪ್ರದೇಶದಲ್ಲಿ 75 ಮರಗಳು ಉರುಳಿವೆ
"ಸದರ್ನ್ ಅವೆನ್ಯೂ, ಲೇಕ್ ವ್ಯೂ ರಸ್ತೆ, ಪ್ರತಾಪಾದಿತ್ಯ ರಸ್ತೆ, ಟಾಲಿಗಂಜ್ ಫರಿ, ಅಲಿಪೋರ್ ಮತ್ತು ಸೆಂಟ್ರಲ್ ಅವೆನ್ಯೂ ಸೇರಿದಂತೆ ವಿವಿಧ ಸ್ಥಳಗಳಲ್ಲಿ ನೀರು ನಿಂತಿರುವುದರಿಂದ ಸಂಚಾರ ವ್ಯತ್ಯಯವಾಗಿದೆ. ಚಂಡಮಾರುತ ಅಪ್ಪಳಿಸಿದ ನಂತರ ಮಾಣಿಕ್ಟಾಲಾ ಪ್ರದೇಶದಲ್ಲಿ ಮೂವರು ಗಾಯಗೊಂಡಿದ್ದಾರೆ" ಎಂದು ಕೋಲ್ಕತ್ತಾ ಟ್ರಾಫಿಕ್ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಪೂರ್ವ ರೈಲ್ವೆಯ ಸೀಲ್ಡಾ ದಕ್ಷಿಣ ವಿಭಾಗದಲ್ಲಿ ರೈಲು ಸೇವೆಗಳು ಬೆಳಗ್ಗೆ ಮೂರು ಗಂಟೆಗಳ ಕಾಲ ಸ್ಥಗಿತಗೊಂಡಿತ್ತು. ನಂತರ ಬೆಳಗ್ಗೆ 9 ಗಂಟೆಗೆ ಪುನರಾರಂಭಗೊಂಡಿವೆ. ಚಂಡಮಾರುತದ ಹಿನ್ನೆಲೆಯಲ್ಲಿ 21 ಗಂಟೆಗಳ ಕಾಲ ಸ್ಥಗಿತಗೊಂಡಿದ್ದ ನಂತರ ಕೋಲ್ಕತ್ತಾ ವಿಮಾನ ನಿಲ್ದಾಣದಿಂದ ವಿಮಾನ ಸೇವೆಗಳು ಸೋಮವಾರ ಬೆಳಗ್ಗೆ ಪುನರಾರಂಭಗೊಂಡಿವೆ ಎಂದು ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ (ಎಎಐ) ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮೆಟ್ರೋ ಕಾರ್ಯಾಚರಣೆ ಅಸ್ತವ್ಯಸ್ತ
ಇನ್ನು, ಪಾರ್ಕ್ ಸ್ಟ್ರೀಟ್ ಮತ್ತು ಎಸ್ಪ್ಲೇನೇಡ್ ನಿಲ್ದಾಣಗಳಲ್ಲಿ ಹಳಿಗಳ ಮೇಲೆ ನೀರು ನಿಂತಿದ್ದರಿಂದ ಗಿರೀಶ್ ಪಾರ್ಕ್ ಮತ್ತು ಮಹಾನಾಯಕ್ ಉತ್ತಮ್ ಕುಮಾರ್ ನಿಲ್ದಾಣಗಳ ನಡುವೆ ಕೋಲ್ಕತ್ತಾ ಮೆಟ್ರೋದ ಕಾರ್ಯಾಚರಣೆ ಅಸ್ತವ್ಯಸ್ತವಾಗಿದೆ. ದಕ್ಷಿಣೇಶ್ವರದಿಂದ ಗಿರೀಶ್ ಪಾರ್ಕ್ವರೆಗೆ ಮತ್ತು ಕಬಿ ಸುಭಾಸ್ನಿಂದ ಮಹಾನಾಯಕ್ ಉತ್ತಮ್ಕುಮಾರ್ವರೆಗೆ ಮೆಟ್ರೋ ಸೇವೆ ನೀಡುತ್ತಿವೆ.
-
ಐಪಿಎಲ್ 2026ಕ್ಕೆ ಮುಹೂರ್ತ ಫಿಕ್ಸ್: ಇಲ್ಲಿದೆ ಮಾಹಿತಿ -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
ಎಲ್ಪಿಜಿ ಸಿಲಿಂಡರ್ ದರ 60 ರೂ ಏರಿಕೆ: ಮೋದಿ ಸರ್ಕಾರದ ವಿರುದ್ಧ ತೀವ್ರ ಟೀಕೆ -
ಧುರಂಧರ್ 2 ಟ್ರೈಲರ್ ಔಟ್: ರಕ್ತ ಚರಿತ್ರೆ ಬರೆಯಲಿದೆ ಸಿನಿಮಾ, ಭರ್ಜರಿ ಕಲೆಕ್ಷನ್ ನಿರೀಕ್ಷೆ -
International Women's Day 2026: ಸ್ತ್ರೀ ಶಕ್ತಿಗೊಂದು ಗೌರವದ ನಮನ: ಮಹಿಳಾ ದಿನಾಚರಣೆಯ ಇತಿಹಾಸ, ಮಹತ್ವ ತಿಳಿಯಿರಿ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ












Click it and Unblock the Notifications