Cyclone Remal: ಪಶ್ಚಿಮ ಬಂಗಾಳದಲ್ಲಿ ಮಳೆ ಆರ್ಭಟಕ್ಕೆ ಎರಡು ಬಲಿ, ಮೆಟ್ರೋ ಸೇವೆ ಅಸ್ತವ್ಯಸ್ತ
ಕೋಲ್ಕತ್ತಾ, ಮೇ. 27: ಭಾನುವಾರ ಪಶ್ಚಿಮ ಬಂಗಾಳ ಮತ್ತು ಬಾಂಗ್ಲಾದೇಶದ ಕರಾವಳಿಯಲ್ಲಿ ಸುರಿದ ಮಳೆಯಿಂದ ಪಶ್ಚಿಮ ಬಂಗಾಳದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ರೆಮಲ್ ಚಂಡಮಾರುತದ ಪ್ರಭಾವ ಹೆಚ್ಚಾಗಿದ್ದು, ಕೋಲ್ಕತ್ತಾ ವಿಮಾನ ನಿಲ್ದಾಣದಲ್ಲಿ ಭಾನುವಾರ ಮಧ್ಯಾಹ್ನ ವಿಮಾನ ಹಾರಾಟವನ್ನು ಸ್ಥಗಿತಗೊಳಿಸಿ ನಂತರ ಪುನರಾರಂಭಿಸಲಾಗಿದೆ.
ಪಶ್ಚಿಮ ಬಂಗಾಳ ಮತ್ತು ನೆರೆಯ ಬಾಂಗ್ಲಾದೇಶದಲ್ಲಿ ರೆಮಲ್ ಚಂಡಮಾರುತ ಭಾರೀ ವಿನಾಶಕ್ಕೆ ಕಾರಣವಾಗಿದೆ. ಕೋಲ್ಕತ್ತಾದ ಹಲವಾರು ಭಾಗಗಳಲ್ಲಿ ಮರಗಳು ಧರೆಗೆ ಉರುಳಿವೆ. ಮರ ಬಿದ್ದು ಮೂವರು ಗಾಯಗೊಂಡಿದ್ದಾರೆ. ಇದರಿಂದ ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ಸದರ್ನ್ ಅವೆನ್ಯೂ, ಲೇಕ್ ಪ್ಲೇಸ್, ಚೆಟ್ಲಾ, ಡಿಎಲ್ ಖಾನ್ ರಸ್ತೆ, ಡಫರಿನ್ ರಸ್ತೆ, ಬ್ಯಾಲಿಗುಂಜ್ ರಸ್ತೆ, ನ್ಯೂ ಅಲಿಪೋರ್, ಬೆಹಾಲಾ, ಜಾದವ್ಪುರ್, ಗೋಲ್ಪಾರ್ಕ್, ಹತಿಬಗನ್, ಜಗತ್ ಮುಖರ್ಜಿ ಪಾರ್ಕ್ ಮತ್ತು ಕಾಲೇಜ್ ಸ್ಟ್ರೀಟ್ ಹಾಗೂ ನಗರದ ವಿವಿಧೆಡೆ ಮರಗಳು ಉರುಳಿದ ವರದಿಗಳು ಬಂದಿವೆ. ಕೋಲ್ಕತ್ತಾದಲ್ಲಿ ಸುಮಾರು 68 ಮರಗಳು ಮತ್ತು ಸಮೀಪದ ಸಾಲ್ಟ್ ಲೇಕ್ ಮತ್ತು ರಾಜರಹತ್ ಪ್ರದೇಶದಲ್ಲಿ 75 ಮರಗಳು ಉರುಳಿವೆ
"ಸದರ್ನ್ ಅವೆನ್ಯೂ, ಲೇಕ್ ವ್ಯೂ ರಸ್ತೆ, ಪ್ರತಾಪಾದಿತ್ಯ ರಸ್ತೆ, ಟಾಲಿಗಂಜ್ ಫರಿ, ಅಲಿಪೋರ್ ಮತ್ತು ಸೆಂಟ್ರಲ್ ಅವೆನ್ಯೂ ಸೇರಿದಂತೆ ವಿವಿಧ ಸ್ಥಳಗಳಲ್ಲಿ ನೀರು ನಿಂತಿರುವುದರಿಂದ ಸಂಚಾರ ವ್ಯತ್ಯಯವಾಗಿದೆ. ಚಂಡಮಾರುತ ಅಪ್ಪಳಿಸಿದ ನಂತರ ಮಾಣಿಕ್ಟಾಲಾ ಪ್ರದೇಶದಲ್ಲಿ ಮೂವರು ಗಾಯಗೊಂಡಿದ್ದಾರೆ" ಎಂದು ಕೋಲ್ಕತ್ತಾ ಟ್ರಾಫಿಕ್ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಪೂರ್ವ ರೈಲ್ವೆಯ ಸೀಲ್ಡಾ ದಕ್ಷಿಣ ವಿಭಾಗದಲ್ಲಿ ರೈಲು ಸೇವೆಗಳು ಬೆಳಗ್ಗೆ ಮೂರು ಗಂಟೆಗಳ ಕಾಲ ಸ್ಥಗಿತಗೊಂಡಿತ್ತು. ನಂತರ ಬೆಳಗ್ಗೆ 9 ಗಂಟೆಗೆ ಪುನರಾರಂಭಗೊಂಡಿವೆ. ಚಂಡಮಾರುತದ ಹಿನ್ನೆಲೆಯಲ್ಲಿ 21 ಗಂಟೆಗಳ ಕಾಲ ಸ್ಥಗಿತಗೊಂಡಿದ್ದ ನಂತರ ಕೋಲ್ಕತ್ತಾ ವಿಮಾನ ನಿಲ್ದಾಣದಿಂದ ವಿಮಾನ ಸೇವೆಗಳು ಸೋಮವಾರ ಬೆಳಗ್ಗೆ ಪುನರಾರಂಭಗೊಂಡಿವೆ ಎಂದು ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ (ಎಎಐ) ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮೆಟ್ರೋ ಕಾರ್ಯಾಚರಣೆ ಅಸ್ತವ್ಯಸ್ತ
ಇನ್ನು, ಪಾರ್ಕ್ ಸ್ಟ್ರೀಟ್ ಮತ್ತು ಎಸ್ಪ್ಲೇನೇಡ್ ನಿಲ್ದಾಣಗಳಲ್ಲಿ ಹಳಿಗಳ ಮೇಲೆ ನೀರು ನಿಂತಿದ್ದರಿಂದ ಗಿರೀಶ್ ಪಾರ್ಕ್ ಮತ್ತು ಮಹಾನಾಯಕ್ ಉತ್ತಮ್ ಕುಮಾರ್ ನಿಲ್ದಾಣಗಳ ನಡುವೆ ಕೋಲ್ಕತ್ತಾ ಮೆಟ್ರೋದ ಕಾರ್ಯಾಚರಣೆ ಅಸ್ತವ್ಯಸ್ತವಾಗಿದೆ. ದಕ್ಷಿಣೇಶ್ವರದಿಂದ ಗಿರೀಶ್ ಪಾರ್ಕ್ವರೆಗೆ ಮತ್ತು ಕಬಿ ಸುಭಾಸ್ನಿಂದ ಮಹಾನಾಯಕ್ ಉತ್ತಮ್ಕುಮಾರ್ವರೆಗೆ ಮೆಟ್ರೋ ಸೇವೆ ನೀಡುತ್ತಿವೆ.
-
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ












Click it and Unblock the Notifications