Get Updates
Get notified of breaking news, exclusive insights, and must-see stories!

Cyclone Hamoon: ಕೇರಳ, ತಮಿಳುನಾಡಿನಲ್ಲಿ ಭಾರೀ ಮಳೆ- ಕರ್ನಾಟಕಕ್ಕೆ ಹವಾಮಾನ ಇಲಾಖೆ ನೀಡಿದ ಮುನ್ಸೂಚನೆ ಏನು?

ಹಮೂನ್‌ ಚಂಡಮಾರುತ ತೀವ್ರ ಸ್ವರೂಪ ಪಡೆದುಕೊಂಡಿದೆ. ಈ ಹಿನ್ನೆಲೆಯಲ್ಲಿ ಕೇರಳ ಹಾಗೂ ತಮಿಳುನಾಡಿನಲ್ಲಿ ಭಾರೀ ಮಳೆ ಹಾಗೂ ಗಾಳಿ ಬೀಸುತ್ತಿದೆ. ಕೇರಳದ ನಾಲ್ಕು ಜಿಲ್ಲೆಗಳಲ್ಲಿ ಭಾರತೀಯ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್‌ ಘೋಷಣೆ ಮಾಡಿದೆ.

ಕೇರಳದ ಪಾಲಕ್ಕಾಡ್, ಇಡುಕ್ಕಿ, ಕೊಟ್ಟಾಯಂ ಮತ್ತು ಪತ್ತನಂತಿಟ್ಟ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಕೇರಳದ ಪ್ರತ್ಯೇಕ ಸ್ಥಳಗಳಲ್ಲಿ ಮಂಗಳವಾರ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಗುಡುಗು, ಮಿಂಚು ಮತ್ತು ಗಾಳಿಯ ವೇಗ ಗಂಟೆಗೆ 30 ರಿಂದ 40 ಕಿಮೀ ತಲುಪುತ್ತದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

Cyclones Hamoon intensify further, heavy rain alert in THESE states

ಹವಾಮಾನ ಇಲಾಖೆಯು ಯಾವುದೇ ಮುನ್ನೆಚ್ಚರಿಕೆ ನೀಡದಿದ್ದರೂ, ತಿರುವನಂತಪುರಂ ಮತ್ತು ಕೋಝಿಕ್ಕೋಡ್ ಜಿಲ್ಲೆಗಳಲ್ಲಿ ಮಂಗಳವಾರ ನಿರಂತರ ಮಳೆಯಾಗಿದೆ.

ಕೇರಳ ರಾಜ್ಯದ ಗುಡ್ಡಗಾಡು ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದೆ. ರಾಜ್ಯ ರಾಜಧಾನಿ ತಿರುವನಂತಪುರಂನಲ್ಲಿ ಹಲವಾರು ಮನೆಗಳು ಜಲಾವೃತಗೊಂಡಿವೆ.

ಏತನ್ಮಧ್ಯೆ, ಬಂಗಾಳಕೊಲ್ಲಿಯಲ್ಲಿನ ಆಳವಾದ ಕುಳಿಯು ಸೋಮವಾರ ಚಂಡಮಾರುತವಾಗಿ ಬದಲಾಗಿದೆ. ಈ ಸೈಕ್ಲೋನಿಕ್ ಚಂಡಮಾರುತಕ್ಕೆ 'ಹಮೂನ್' ಎಂದು ನಾಮಕರಣ ಮಾಡಲಾಗಿದೆ. ಇದು ಇರಾನಿಯನ್‌ ಭಾಷೆಯ ಹೆಸರಾಗಿದೆ.

Cyclones Hamoon intensify further, heavy rain alert in THESE states

ಚಂಡಮಾರುತವು ಅಕ್ಟೋಬರ್ 25 ರಂದು ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಬಾಂಗ್ಲಾದೇಶ ಕರಾವಳಿಯನ್ನು ದಾಟುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಚಂಡಮಾರುತವು ಭಾರತದ ಕರಾವಳಿಯಲ್ಲಿ ಯಾವುದೇ ದೊಡ್ಡ ಪರಿಣಾಮ ಬೀರದಿದ್ದರೂ, ಒಡಿಶಾದಲ್ಲಿ ಇಂದು ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಹಮೂನ್‌ ಚಂಡಮಾರುತದಿಂದ ಈ ರಾಜ್ಯಗಳಲ್ಲಿ ಮಳೆ ಎಚ್ಚರಿಕೆ

ಹವಾಮಾನ ಇಲಾಖೆಯ ಪ್ರಕಾರ, ಈಶಾನ್ಯ ರಾಜ್ಯಗಳಾದ ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ದಕ್ಷಿಣ ಅಸ್ಸಾಂ ಮತ್ತು ಮೇಘಾಲಯದಲ್ಲಿ ಅಕ್ಟೋಬರ್ 26 ರ ವರೆಗೆ ಪ್ರತ್ಯೇಕವಾಗಿ ಭಾರೀ ಮಳೆಯಾಗಲಿದೆ.

Cyclones Hamoon intensify further, heavy rain alert in THESE states

ಯಾವುದೇ ಅಪಾಯಕ್ಕೆ ಸಿದ್ಧರಾಗಿರಲು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಒಡಿಶಾ ಸರ್ಕಾರ ಸೂಚಿಸಿದೆ. ಭಾರೀ ಮಳೆಯ ಸಂದರ್ಭದಲ್ಲಿ ತಗ್ಗು ಪ್ರದೇಶಗಳಿಂದ ಜನರನ್ನು ಸ್ಥಳಾಂತರಿಸಲು ಆಡಳಿತಕ್ಕೆ ನಿರ್ದೇಶನ ನೀಡಲಾಗಿದೆ.

ಈ ಚಂಡಮಾರುತವು ಒಡಿಶಾ ಕರಾವಳಿಯಿಂದ ಸುಮಾರು 200 ಕಿಮೀ ಸಮುದ್ರದ ಮೇಲೆ ಚಲಿಸಲಿದೆ ಎಂದು ಹವಾಮಾನ ವಿಜ್ಞಾನಿ ಯು ಎಸ್ ಡ್ಯಾಶ್ ಹೇಳಿದ್ದಾರೆ. ಇದರ ಪ್ರಭಾವದಿಂದ ಸೋಮವಾರ ಒಡಿಶಾದ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ. ಇದು ಮುಂದಿನ ಎರಡು ದಿನಗಳ ಕಾಲ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ.

ಬಂಗಾಳಕೊಲ್ಲಿಯಲ್ಲಿ ಗಾಳಿಯ ವೇಗವು ಕ್ರಮೇಣವಾಗಿ ಗಂಟೆಗೆ 80-90 ಕಿಲೋಮೀಟರ್‌ಗೆ ಏರಿಕೆಯಾಗಲಿದ್ದು, ಮಂಗಳವಾರ ಬೆಳಿಗ್ಗೆ ಗಂಟೆಗೆ 100 ಕಿಮೀ ವೇಗಕ್ಕೆ ಏರಲಿದೆ ಎಂದು ಐಎಂಡಿ ಮಹಾನಿರ್ದೇಶಕ ಮೃತ್ಯುಂಜಯ್ ಮೊಹಾಪಾತ್ರ ತಿಳಿಸಿದ್ದಾರೆ.

ಸೋಮವಾರ ಮತ್ತು ಮಂಗಳವಾರದಂದು ಪಶ್ಚಿಮ ಬಂಗಾಳದ ಪುರ್ಬಾ ಮೇದಿನಿಪುರ್, ಕೋಲ್ಕತ್ತಾ ಮತ್ತು ದಕ್ಷಿಣ 24 ಪರಗಣ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ಚಂಡಮಾರುತವು ಕರ್ನಾಟಕದ ಕರಾವಳಿಯ ಮೇಲೆ ಯಾವುದೇ ಪರಿಣಾಮ ಬೀರದೇ ಇದ್ದರೂ, ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯನ್ನು ಅಲ್ಲಗಳೆಯುವಂತಿಲ್ಲ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+