20 ವರ್ಷಗಳ ನಂತರ ಸತ್ಯಕ್ಕೆ ಗೆಲುವು: ಸ್ವಾಮಿ
ಸುಮಾರು 20 ವರ್ಷಗಳ ಕಾನೂನು ಸಮರದಲ್ಲಿ ಕೊನೆಗೂ ಸತ್ಯಕ್ಕೆ ಗೆಲುವಾಗಿದೆ. ಇನ್ನೂ ಅನೇಕ ಮುಖಂಡರು ಜೈಲು ಸೇರಬೇಕಾಗುತ್ತದೆ ಎಂದು ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ಟ್ವೀಟ್ ಮಾಡಿದ್ದಾರೆ
ಬೆಂಗಳೂರು, ಫೆಬ್ರವರಿ 14: ಸುಮಾರು 20 ವರ್ಷಗಳ ಕಾನೂನು ಸಮರದಲ್ಲಿ ಕೊನೆಗೂ ಸತ್ಯಕ್ಕೆ ಗೆಲುವಾಗಿದೆ. ಇನ್ನೂ ಅನೇಕ ಮುಖಂಡರು ಜೈಲು ಸೇರಬೇಕಾಗುತ್ತದೆ ಎಂದು ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ಟ್ವೀಟ್ ಮಾಡಿದ್ದಾರೆ. ಅಕ್ರಮ ಆಸ್ತಿ ಪ್ರಕರಣದ ಬಗ್ಗೆ ಸ್ವಾಮಿ ನೀಡಿರುವ ಪ್ರತಿಕ್ರಿಯೆಗಳ ರೌಂಡಪ್ ಇಲ್ಲಿದೆ.
ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ 1991 ರಿಂದ 1996 ರ ತನಕ ತಮಿಳುನಾಡಿನ ಮುಖ್ಯಮಂತ್ರಿಯಾಗಿದ್ದ ಜೆ.ಜಯಲಲಿತಾ ಅವರು 1996ರಿಂದ 2014ರ ತನಕ ಕಾನೂನು ಸಮರ ನಡೆಸುತ್ತಲೇ ಕಳೆದ ವರ್ಷ ಕಾಲವಾದರು. [ಅಂತಿಮವಾಗಿ ಧರ್ಮಕ್ಕೆ ಗೆಲುವಾಗಲಿದೆ: ಶಶಿಕಲಾ]

ಆದರೆ, ಉಳಿದ ಆರೋಪಿಗಳಾದ ವಿಕೆ ಶಶಿಕಲಾ ನಟರಾಜನ್, ಇಳವರಸಿ ಹಾಗೂ ವಿಎನ್ ಸುಧಾಕರನ್ ಅವರಿಗೆ ಫೆಬ್ರವರಿ 14ರಂದು ಸುಪ್ರೀಂಕೋರ್ಟಿನಿಂದ ಕಹಿ ಸುದ್ದಿ ಬಂದಿದೆ. ಎಲ್ಲಾ ಆರೋಪಿಗಳಿಗೆ ನಾಲು ವರ್ಷ ಶಿಕ್ಷೆ ಘೋಷಿಸಲಾಗಿದೆ.
1996ರಲ್ಲಿ ಜನತಾ ಪಾರ್ಟಿ ನಾಯಕರಾಗಿದ್ದ(ಈಗ ಬಿಜೆಪಿ ಸೇರಿರುವ) ಡಾ. ಸುಬ್ರಮಣ್ಯಂ ಸ್ವಾಮಿ ಅವರು ಜಯಲಲಿತಾ ವಿರುದ್ಧ ಆದಾಯಕ್ಕಿಂತ ಹೆಚ್ಚಿನ ಪ್ರಮಾನದಲ್ಲಿ 66.65 ಕೋಟಿ ರು ಆಸ್ತಿಯನ್ನು ಅಕ್ರಮವಾಗಿ ಗಳಿಕೆ(1991 ರಿಂದ 1996ರ ಅವಧಿ) ಮಾಡಿರುವ ಆರೋಪ ಹೊರೆಸಿ ಕೇಸ್ ದಾಖಲಿಸಿದರು.
ಸ್ವಾಮಿ ಅವರು ಟ್ವೀಟ್ ಮಾಡಿದ್ದು ಹೀಗೆ: [ಅಕ್ರಮ ಆಸ್ತಿ ಪ್ರಕರಣ : ಟೈಮ್ ಲೈನ್]
After 20 years I won. Now turn of TDK Buddhu PC BC & Tata to join in jail
— Subramanian Swamy (@Swamy39) February 14, 2017
ಭ್ರಷ್ಟಚಾರ ನಿಗ್ರಹ ಕಾಯ್ದೆ 1988ರ ಅನ್ವಯ ಸೆಕ್ಷನ್ 120-B IPC, 13(2) ಜೊತೆಗೆ 13(1)ಇ ಅಡಿಯಲ್ಲಿ ಪ್ರಕರಣ ದಾಖಲು. ಮದ್ರಾಸ್ ಹೈಕೋರ್ಟ್, ಕರ್ನಾಟಕ ಹೈಕೋರ್ಟ್, ಬೆಂಗಳೂರಿನ ಸಿಬಿಐ ವಿಶೇಷ ನ್ಯಾಯಾಲಯದಿಂದ ಎಲ್ಲರೂ ತಪ್ಪಿತಸ್ಥರು ಎಂದು ತೀರ್ಪು. ಈ ತೀರ್ಪನ್ನು ಎತ್ತಿ ಹಿಡಿದ ಸುಪ್ರೀಂಕೋರ್ಟ್.[ ಶಿಕ್ಷೆ ಪ್ರಕಟಿಸಿದ ನ್ಯಾಯಮೂರ್ತಿಗಳು ಹೇಳಿದ್ದೇನು]
ಶಿಕ್ಷೆಯಿಂದ ಶಶಿಕಲಾ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದಿರುವ ಸುಬ್ರಮಣಿಯನ್ ಸ್ವಾಮಿ, ಖಾಸಗಿ ವಾಹಿನಿಯೊಂದಿಗೆ ಮಾತನಾಡುತ್ತಾ, ಶಶಿಕಲಾಗೆ ಸಿಎಂ ಆಗುವ ಒಂದು ಅವಕಾಶ ನೀಡಬಹುದಿತ್ತು ಎಂದಿದ್ದಾರೆ. ಮೇಲ್ಕಂಡ ಟ್ವೀಟ್ ನಲ್ಲಿ ಭ್ರಷ್ಟಾಚಾರ ಆರೋಪ ಹೊತ್ತಿರುವ ಇನ್ನೂ ಅನೇಕ ನಾಯಕರ ಬಗ್ಗೆ ಪ್ರಸ್ತಾಪಿಸಿದ್ದು, ಎಲ್ಲವೂ ಸಂಕ್ಷಿಪ್ತ ನಾಮಗಳನ್ನು ಬಳಸಲಾಗಿದೆ. ಇದು ಅರ್ಥವಾಗಬೇಕಾದರೆ ಈ ಲಿಂಕ್ ಕ್ಲಿಕ್ ಮಾಡಿ ಓದಿ
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications