Government Employees: ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್: ಶೇ.7ರಷ್ಟು ತುಟ್ಟಿ ಭತ್ಯೆ ಹೆಚ್ಚಳ
ಜಾರ್ಖಂಡ್ ಸರ್ಕಾರ ಮಂಗಳವಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಜಾರ್ಖಂಡ್ ಸರ್ಕಾರವು ಸರ್ಕಾರವು ನೌಕರರ ತುಟ್ಟಿ ಭತ್ಯೆ (DA)ಯಲ್ಲಿ ಶೇ.7ರಷ್ಟು ಹೆಚ್ಚಳ ಮಾಡುವ ಮೂಲಕ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ನೀಡಿದೆ. ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಪ್ರಸ್ತಾವನೆಗೆ ಅನುಮೋದನೆ ನೀಡಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಶೇ.7ರಷ್ಟು ತುಟ್ಟಿ ಭತ್ಯೆ (DA) ಹೆಚ್ಚಳಕ್ಕೆ ಅನುಮೋದನೆ ನೀಡಿದ್ದು, ಈ ಹೆಚ್ಚಳವು ಕಳೆದ ವರ್ಷ(2024) ಜುಲೈ 1ರಿಂದ ಜಾರಿಗೆ ಬರಲಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆರನೇ ಕೇಂದ್ರ ವೇತನ ಆಯೋಗದಡಿಯಲ್ಲಿ, ನೌಕರರು ಪ್ರಸ್ತುತ ಮೂಲ ವೇತನದ ಶೇ.246ರಷ್ಟು ಡಿಎ ಪಡೆಯುತ್ತಾರೆ, ಇದು ಮೊದಲು ಶೇ.239ರಷ್ಟಿತ್ತು ಎಂದು ಅಧಿಕಾರಿಗಳೊಬ್ಬರು ಹೇಳಿದರು.

ಆರನೇ ವೇತನ ಆಯೋಗದ ಅಡಿಯಲ್ಲಿ ಪಿಂಚಣಿದಾರರಿಗೆ ತುಟ್ಟಿ ಭತ್ಯೆ ಪರಿಹಾರವನ್ನು ಶೇ. 7 ರಷ್ಟು ಹೆಚ್ಚಿಸಿ ಶೇ. 246 ಕ್ಕೆ ಹೆಚ್ಚಿಸಲಾಗಿದೆ. ಐದನೇ ವೇತನ ಆಯೋಗದ ವ್ಯಾಪ್ತಿಗೆ ಬರುವ ಸರ್ಕಾರಿ ನೌಕರರಿಗೆ ಡಿಎಯನ್ನು ಈಗಿರುವ ಶೇ.443 ರಿಂದ ಶೇ.455ಕ್ಕೆ ಹೆಚ್ಚಿಸಲಾಗಿದೆ, ಇದು ಜುಲೈ 1, 2024ರಿಂದ ಜಾರಿಗೆ ಎಂದು ಜಂಟಿ ಸಂಪುಟ ಕಾರ್ಯದರ್ಶಿ ರಾಜೀವ್ ರಂಜನ್ ಸುದ್ದಿಗಾರರಿಗೆ ಬರಲಿದ್ದಾರೆ. ಜಾರ್ಖಂಡ್ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಘಟಕಗಳ (MSME) ವಿಶೇಷ ವಿನಾಯಿತಿ ಮಸೂದೆ, 2025 ರ ಅನುಮೋದನೆ ಸೇರಿದಂತೆ ಒಟ್ಟು 12 ಪ್ರಸ್ತಾವನೆಗಳನ್ನು ಸಂಪುಟ ಅನುಮೋದಿಸಿದೆ.
ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದ ಕೈಗಾರಿಕಾ ನೀತಿ ಮತ್ತು ಪ್ರಚಾರ ಇಲಾಖೆಯು ವ್ಯಾಪಾರ ಮಾಡುವ ಸುಲಭತೆಯ ಅಡಿಯಲ್ಲಿ ಸಿದ್ಧಪಡಿಸಿದ 'ವ್ಯವಹಾರ ಸುಧಾರಣಾ ಕ್ರಿಯಾ ಯೋಜನೆ'ಯನ್ನು ಅನುಸರಿಸಲು ಕಾರ್ಖಾನೆಗಳ (ಜಾರ್ಖಂಡ್ ತಿದ್ದುಪಡಿ) ಮಸೂದೆ, 2024 ಅನ್ನು ಸಹ ಸಂಪುಟ ಅನುಮೋದಿಸಿದೆ. ಇದರಲ್ಲಿರುವ ಪ್ರಮುಖ ನಿಬಂಧನೆ ಎಂದರೆ ಮಹಿಳಾ ಕಾರ್ಮಿಕರಿಗೆ ಸಂಜೆ 7 ರಿಂದ ಬೆಳಿಗ್ಗೆ 6 ರವರೆಗೆ ಅವರ ಒಪ್ಪಿಗೆಯೊಂದಿಗೆ ಕಾರ್ಖಾನೆಗಳಲ್ಲಿ ಕೆಲಸ ಮಾಡಲು ಅವಕಾಶ ನೀಡುವುದು ಎಂದು ಮತ್ತೊಬ್ಬ ಅಧಿಕಾರಿ ತಿಳಿಸಿದ್ದಾರೆ.
ಜಾರ್ಖಂಡ್ ಸರ್ಕಾರ ರಾಜ್ಯದ ವಿವಿಧ ಜೈಲುಗಳಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ 37 ಅಪರಾಧಿಗಳನ್ನು ಬಿಡುಗಡೆ ಮಾಡಲು ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರ ಅಧ್ಯಕ್ಷತೆಯಲ್ಲಿ ಅವರ ವಸತಿ ಕಚೇರಿಯಲ್ಲಿ ನಡೆದ ಜಾರ್ಖಂಡ್ ರಾಜ್ಯ ಶಿಕ್ಷೆ ಪರಿಶೀಲನಾ ಮಂಡಳಿಯ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಈ ಸಭೆಯಲ್ಲಿ ರಾಜ್ಯದಾದ್ಯಂತ 103 ಪ್ರಕರಣಗಳನ್ನು ಪರಿಶೀಲಿಸಲಾಯಿತು, ಈ ಪೈಕಿ 37 ಕೈದಿಗಳನ್ನು ಬಿಡುಗಡೆ ಮಾಡಲು ಒಪ್ಪಿಗೆ ನೀಡಲಾಯಿತು. ರಾಜ್ಯದ ವಿವಿಧ ಜೈಲುಗಳಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ 103 ಕೈದಿಗಳ ಬಿಡುಗಡೆಯ ಕುರಿತು ವಿವರವಾದ ಚರ್ಚೆಗಳು ನಡೆದವು. ಪರಿಶೀಲನೆಯ ನಂತರ 37 ಅಪರಾಧಿಗಳನ್ನು ಬಿಡುಗಡೆ ಮಾಡಲು ನಿರ್ಧರಿಸಲಾಯಿತು" ಎಂದು ಅಧಿಕೃತ ಹೇಳಿಕೆ ತಿಳಿಸಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications