ಡೇಲಿಹಂಟ್ ನಲ್ಲಿ ಮಹಾರಾಷ್ಟ್ರ-ಹರ್ಯಾಣ ಚುನಾವಣೆಯ ಸಮಗ್ರ ಫಲಿತಾಂಶ
ನವದೆಹಲಿ, ಅಕ್ಟೋಬರ್ 21: ಬಹುನಿರೀಕ್ಷಿತ ಮಹಾರಾಷ್ಟ್ರ ಮತ್ತು ಹರ್ಯಾಣ ವಿಧಾನಸಭೆ ಚುನಾವಣೆಯ ಫಲಿತಾಂಶ ಅಕ್ಟೋಬರ್ 24 ರಂದು ಪ್ರಕಟವಾಗಲಿದ್ದು, ಕುತೂಹಲ ಕೆರಳಿಸಿದೆ.
ಎರಡು ರಾಜ್ಯಗಳ ವಿಧಾನಸಭೆ ಚುನಾವಣೆ ಮತ್ತು 51 ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶದ ಕ್ಷಣ ಕ್ಷಣದ ಅಪ್ಡೇಟ್ ಗಳನ್ನು ಡೇಲಿ ಹಂಟ್ ಅಕ್ಟೋಬರ್ 24 ರಂದು ನೀಡಲಿದೆ.
ಮಹಾರಾಷ್ಟ್ರ ಮತ್ತು ಹರ್ಯಾಣ ವಿಧಾನಸಭಾ ಚುನಾವಣೆಗಳ ನಡುವೆ ಎರಡು ಲೋಕಸಭಾ ಕ್ಷೇತ್ರಗಳು ಮತ್ತು 51 ವಿಧಾನಸಭಾ ಕ್ಷೇತ್ರಗಳಿಗೂ ಉಪ ಚುನಾವಣೆ ನಡೆದಿದೆ. ಬಿಹಾರದ ಸಮಷ್ಟಿಪುರ್ ಮತ್ತು ಮಹಾರಾಷ್ಟ್ರದ ಸತಾರಾ ಲೋಕಸಭಾ ಕ್ಷೇತ್ರಗಳಲ್ಲಿ ಉಪ ಚುನಾವಣೆ ನಡೆದಿದೆ.
Recommended Video

ಮಹಾರಾಷ್ಟ್ರ ವಿಧಾನಸಭೆಯಲ್ಲಿ 288 ಸೀಟುಗಳಿದ್ದು, ಮ್ಯಾಜಿಕ್ ನಂಬರ್ 145. ಈ ರಾಜ್ಯದಲ್ಲಿ ಒಟ್ಟು 8,98,39,600 ಮತದಾರರಿದ್ದು, ಅವರಲ್ಲಿ 4,28,43,635 ಮಹಿಳೆಯರು ಮತ್ತು 4,68,75,750 ಪುರುಷ ಮತದಾರರಿದ್ದಾರೆ.
235 ಮಹಿಳೆಯರು ಸೇರಿದಂತೆ 3237 ಅಭ್ಯರ್ಥಿಗಳು ಕಣದಲ್ಲಿದ್ದಾರೆ. 95,473 ಮತದಾನ ಕೇಂದ್ರಗಳನ್ನು ತೆರೆಯಲಾಗಿದೆ. ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 164 ಮತ್ತು ಶಿವಸೇನೆ 126 ಕ್ಷೇತ್ರಗಳಲ್ಲಿ ಕಣಕ್ಕಿಳಿದಿವೆ.
ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 147 ಮತ್ತು ಎನ್ಸಿಪಿ 121 ಕ್ಷೇತ್ರಗಳಲ್ಲಿ ಕಣಕ್ಕಿಳಿದಿವೆ. ಹರ್ಯಾಣ ವಿಧಾನಸಭೆಯಲ್ಲಿ 90 ಸೀಟುಗಳಿವೆ. ರಾಜ್ಯದಲ್ಲಿ 1.83 ಕೋಟಿ ಮತದಾರರು ಇದ್ದಾರೆ. ಇವರಲ್ಲಿ 83 ಲಕ್ಷ ಮಹಿಳೆಯರು.
ಹರ್ಯಾಣದಲ್ಲಿ 105 ಮಹಿಳೆಯರು ಸೇರಿದಂತೆ 1169 ಅಭ್ಯರ್ಥಿಗಳು ಕಣದಲ್ಲಿದ್ದಾರೆ. 19,578 ಮತಗಟ್ಟೆಗಳನ್ನು ಸ್ಥಾಪನೆ ಮಾಡಲಾಗಿದೆ.
18 ರಾಜ್ಯಗಳ 51 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗಳ ಫಲಿತಾಂಶ ಅಂದೇ ಪ್ರಕಟವಾಗಲಿದ್ದು, ಉತ್ತರ ಪ್ರದೇಶ-11, ಗುಜರಾತ್-6, ಕೇರಳ ಮತ್ತು ಬಿಹಾರ್ ತಲಾ 5, ಪಂಜಾಬ್ ಮತ್ತು ಅಸ್ಸಾಂ ತಲಾ 4, ಸಿಕ್ಕಿಂ 3, ತಮಿಳುನಾಡು, ರಾಜಸ್ತಾನ ಮತ್ತು ಆಂಧ್ರಪ್ರದೇಶ ತಲಾ 2 ಹಾಗೂ ಒಡಿಶಾ, ತೆಲಂಗಾಣ, ಮಧ್ಯಪ್ರದೇಶ , ಛತ್ತೀಸ್ ಗಢ, ಮೇಘಾಲಯ, ಪುದುಚೇರಿ ಮತ್ತು ಅರುಣಾಚಲ ಪ್ರದೇಶಗಳ ತಲಾ ಒಂದೊಂದು ಸ್ಥಾನಗಳ ವಿಧಾನಸಭಾ ಕ್ಷೇತ್ರಗಳಿಗೆ ಅಕ್ಟೋಬರ್ 21 ಚುನಾವಣೆ ನಡೆಸಲಾಗಿದೆ.
ವಿಧಾನಸಭೆ ಚುನಾವಣೆ ಫಲಿತಾಂಶದ ಲೈವ್ ಅಪ್ಡೇಟ್ಸ್ ಗಳೊಂದಿಗೆ ಫಲಿತಾಂಶದ ವಿಶ್ಲೇಷಣೆ, ಅಂಕಿ-ಸಂಖ್ಯೆ, ಸೋಶಿಯಲ್ ಮೀಡಿಯಾ ಟ್ರೆಂಡಿಂಗ್ ಸೇರಿದಂತೆ ಎಲ್ಲಾ ಕೋನಗಳ ಸುದ್ದಿಯನ್ನೂ 'ಡೇಲಿಹಂಟ್' ನೀಡಲಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್












Click it and Unblock the Notifications