ಪುಣೆಯಲ್ಲಿ ಭೀಮಾ-ಕೊರೆಗಾಂವ್ ಗಲಭೆ ಖಂಡಿಸಿದ ದಲೈಲಾಮ
ಪುಣೆ, ಜನವರಿ 10: ಭೀಮಾ-ಕೊರೆಗಾಂವ್ ಗೆಲುವಿಗೆ 200 ವರ್ಷ ತುಂಬಿದ ಸವಿನೆನಪಿಗಾಗಿ ಮಹಾರಾಷ್ಟ್ರದ ಪುಣೆಯಲ್ಲಿ ನಡೆದ ಸಭೆಯ ನಂತರ ಹುಟ್ಟಿಕೊಂಡ ಗಲಭೆಯ ಕುರಿತು ಟಿಬೆಟಿಯನ್ ಧರ್ಮಗುರು ದಲೈಲಾಮ ವಿಷಾದ ವ್ಯಕ್ತಪಡಿಸಿದರು.
ಪುಣೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಮತ ಎಂಬುದು ವೈಯಕ್ತಿಕ ವಿಚಾರ ಮತ್ತು ವ್ಯವಹಾರ. ನಾವು ಹಿಂದು, ಮುಸ್ಲಿಮರೆಂದು ನಮ್ಮನ್ನು ವಿಭಜಿಸಿಕೊಳ್ಳಬಾರದು. ಸಿಟ್ಟಿನಿಂದ ಆಗುವ ಪ್ರಯೋಜನವೇನು? ಅದು ಆರೋಗ್ಯಕ್ಕೂ ಒಳ್ಳೆಯದಲ್ಲ ಎಂದು ಅವರು ಪ್ರತಿಕ್ರಿಯೆ ನೀಡಿದ್ದರು.
1818 ಜ.1 ರಂದು ಪೇಶ್ವೆಗಳ ವಿರುದ್ಧ ಈಸ್ಟ್ ಇಂಡಿಯಾ ಕಂಪೆನಿಯ ಜೊತೆ ಸೇರಿ ದಲಿತರು ಜಯಗಳಿಸಿ 200 ವರ್ಷ ಸಂದಿದ ಸವಿನೆನಪಿಗಾಗಿ ಈ ಆಚರಣೆ ಏರ್ಪಡಿಸಲಾಗಿತ್ತು. ಆದರೆ ಈ ಸಂದರ್ಭದಲ್ಲಿ, ಬ್ರಿಟಿಷರ ಗೆಲುವುದನ್ನು ಸಂಭ್ರಮಿಸುತ್ತಿರುವುದನ್ನು ಬಲಪಂಥೀಯ ಸಂಘಟನೆಗಳು ವಿರೋಧಿಸಿದ್ದರು. ಈ ಗಲಾಟೆಯೇ ಗಲಭೆಯಾಗಿ ಬದಲಾಗಿ ಓರ್ವ ವ್ಯಕ್ತಿ ಅಸುನೀಗಿದ್ದರು.

ಒಂದು ದಿನ ಮಹಾರಾಷ್ಟ್ರ ರಾಜ್ಯದಾದ್ಯಂತ ಬಂದ್ ಆಚರಿಸಲಾಗಿತ್ತು. ಈ ಕುರಿತು ತೀವ್ರ ಬೇಸರ ವ್ಯಕ್ತಪಡಿಸಿದ ದಲೈಲಾಮ, ಭಾರತಕ್ಕೆ ಅತ್ಯಂತ ಹೆಚ್ಚಿನ ಸಾಮರ್ಥ್ಯವಿದೆ. ಆಧುನಿಕತೆ ಮತ್ತು ಸಾಂಪ್ರದಾಯಿಕ ಜ್ಞಾನ ಎರಡನ್ನೂ ಒಟ್ಟಾಗಿಸಿ ತನ್ನ ಅಗತ್ಯಗಳನ್ನು ನೀಗಿಸಿಕೊಳ್ಳುವ ಶಕ್ತಿಯಿದೆ. ಇಂಥ ಘಟನೆಗಳು ಭಾರತದ ಶಕ್ತಿಯನ್ನು ಕುಂದಿಸುತ್ತವೆ ಎಂದು ಆತಂಕ ವ್ಯಕ್ತಪಡಿಸಿದರು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications