Get Updates
Get notified of breaking news, exclusive insights, and must-see stories!

ಕೊರೊನಾ ವಿರುದ್ಧ ಹೋರಾಟಕ್ಕೆ ಬಲ ತುಂಬಲು ಪಿಎಂ ನಿಧಿಗೆ ದಲೈ ಲಾಮಾ ದೇಣಿಗೆ

ಧರ್ಮಶಾಲಾ, ಏಪ್ರಿಲ್ 27: ಕೊರೊನಾ ವಿರುದ್ಧದ ಭಾರತದ ಹೋರಾಟವನ್ನು ಇನ್ನಷ್ಟು ಬಲಪಡಿಸಲು ಪ್ರಧಾನ ಮಂತ್ರಿ ಪರಿಹಾರ ನಿಧಿಗೆ ದೇಣಿಗೆ ನೀಡುವುದಾಗಿ ಟಿಬೆಟನ್ ಧರ್ಮಗುರು ದಲೈ ಲಾಮಾ ಮಂಗಳವಾರ ಘೋಷಿಸಿದ್ದಾರೆ.

"ಭಾರತವನ್ನೊಳಗೊಂಡಂತೆ ಇಡೀ ವಿಶ್ವಕ್ಕೆ ಕೊರೊನಾ ಸೋಂಕು ನಿರಂತರವಾಗಿ ಸವಾಲು ಹಾಕುತ್ತಿದೆ. ಇಂಥ ಸಂಕಷ್ಟದ ಸಮಯದಲ್ಲಿ, ಕೊರೊನಾ ವಿರುದ್ಧದ ಹೋರಾಟಕ್ಕೆ ನಮ್ಮ ಭಾರತದ ಸಹೋದರ ಹಾಗೂ ಸಹೋದರಿಯರೊಂದಿಗೆ ಒಗ್ಗಟ್ಟು ಪ್ರದರ್ಶಿಸಲು ಪಿಎಂ ಪರಿಹಾರ ನಿಧಿಗೆ ದೇಣಿಗೆ ನೀಡುವಂತೆ ದಲೈ ಲಾಮಾ ಟ್ರಸ್ಟ್‌ಗೆ ಸೂಚಿಸಿದ್ದೇನೆ" ಎಂದು ದಲೈ ಲಾಮಾ ಹೇಳಿಕೆ ನೀಡಿದ್ದಾರೆ.

"ಇಂಥ ವಿನಾಶಕಾರಿ ಸೋಂಕಿನ ವಿರುದ್ಧ ಹೋರಾಡುವ ಭಾರತದ ಎಲ್ಲಾ ಪ್ರಯತ್ನವನ್ನು ಶ್ಲಾಘಿಸುತ್ತೇನೆ. ಅದರಲ್ಲೂ ಕೊರೊನಾ ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಕಾರ್ಯಕರ್ತರನ್ನು ಶ್ಲಾಘಿಸಲೇಬೇಕು. ಈ ಕೊರೊನಾ ಕಾಲ ಅತಿ ಶೀಘ್ರವಾಗಿ ಮುಗಿಯಲಿ ಎಂದು ಪ್ರಾರ್ಥಿಸುತ್ತೇನೆ" ಎಂದು ಹೇಳಿದ್ದಾರೆ.

Dalai Lama Contributes To PM CARES Fund To Strengthen Fight Against corona

ಮಂಗಳವಾರ ಭಾರತದಲ್ಲಿ 3,23,144 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿವೆ. ಒಂದೇ ದಿನ 2771 ಜನರು ಸಾವನ್ನಪ್ಪಿದ್ದು, 2,51,827 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸೋಮವಾರ ದೇಶದಲ್ಲಿ 3,52,991 ಕೊರೊನಾ ಸೋಂಕು ದಾಖಲಾಗಿತ್ತು. ಇಂದು ಪ್ರಕರಣಗಳ ಸಂಖ್ಯೆಯಲ್ಲಿ ಕೊಂಚ ಇಳಿಮುಖವಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+