ಯೋಗಿಗೆ 'ದಲಿತ ಮಿತ್ರ' ಪ್ರಶಸ್ತಿ: ದಲಿತರಿಂದಲೇ ವಿರೋಧ
ಲಕ್ನೋ, ಏಪ್ರಿಲ್ 14: ಉತ್ತರ ಪ್ರದೇಶದ ಅಂಬೇಡ್ಕರ್ ಮಹಾಸಭಾವು ಸಂವಿಧಾನಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಜನ್ಮದಿನದ ಅಂಗವಾಗಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ದಲಿತ ಮಿತ್ರ ಪ್ರಶಸ್ತಿ ನೀಡಿ ಗೌರವಿಸಿದೆ.
"ಯೋಗಿ ಆದಿತ್ಯನಾಥ್ ದಲಿತರಿಗಾಗಿ ಸಾಕಷ್ಟು ಕೆಲಸ ಮಾಡಿದ್ದಾರೆ. ನಮ್ಮ ಜೀವನ ಮಟ್ಟ ಸುಧಾರಿಸುವಲ್ಲಿ ಶ್ರಮವಹಿಸಿದ್ದಾರೆ. ಅವರು ಖಂಡಿತ ಇನ್ನೂ ಉನ್ನತ ಸ್ಥಾನವನ್ನು ಒಂದಲ್ಲ ಒಂದು ದಿನ ಪಡೆದೇ ಪಡೆಯುತ್ತಾರೆ" ಎಂದು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅಂಬೇಡ್ಕರ್ ಮಹಾಸಭಾದ ಅಧ್ಯಕ್ಷ ಲಾಲ್ಜಿ ಪ್ರಸಾದ್ ನಿರ್ಮಲ್ ಹೇಳಿದ್ದಾರೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಬಿಜೆಪಿ ಅಭ್ಯರ್ಥಿಗಳ ಮೊದಲ ಅಧಿಕೃತ ಪಟ್ಟಿ ಪ್ರಕಟ
ಆದರೆ ಯೋಗಿ ಆದಿತ್ಯನಾಥ್ ರನ್ನು ಹಲವು ಬಾರಿ ದಲಿತ ವಿರೋಧಿ ಎಂದು ಕರೆದಿರುವ ಅನೇಕರು ಈ ಪ್ರಶಸ್ತಿಗೆ ಯೋಗಿ ಸೂಕ್ತರಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ಘಟನೆಯೂ ನಡೆಯಿತು.

ಯೋಗಿ ಅವರಿಗೆ ಈ ಪ್ರಶಸ್ತಿ ನೀಡುತ್ತಿರುವುದಕ್ಕೆ ವಿರೋಧ ವ್ಯಕ್ತಪಡಿಸಿದ ದಲಿತ ನಾಯಕರಾದ ಎಸ್ ಆರ್ ದಾರಾಪುರಿ, ನಿವೃತ್ತ ಐಎಎಸ್ ಅಧಿಕಾರಿ ಚಂದ್ರಾ, ಗಜೋಧರ್ ಪ್ರಸಾದ್, ಎನ್ ಎಸ್ ಚೌರಾಸಿಯಾ ಪೊಲೀಸರು ವಶಕ್ಕೆ ಪಡೆದರು.
"ಯೋಗಿ ಅವರಿಗೆ ಈ ಪ್ರಶಸ್ತಿ ನೀಡುತ್ತಿರುವ ಕುರಿತು ನಮ್ಮ ವಿರೀಧವಿದೆ. ಆದರೆ ಪ್ರಶಸ್ತಿಗೆ ಆಯ್ಕೆ ಮಾಡುವ ಮುನ್ನ ನಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಬಗ್ಗೆ ಮಹಾಸಭಾ ಯೋಚನೆಯನ್ನೇ ಮಾಡಿಲ್ಲ. ರಾಜ್ಯದಲ್ಲಿ ದಲಿತರ ಮೇಲೆ ಒಂದು ವರ್ಷದಿಂದ ನಿರಂತರ ದೌರ್ಜನ್ಯ ನಡೆಯುತ್ತಿರುವಾಗ ಯೋಗಿ ಆದಿತ್ಯನಾಥ್ ಅವರಿಗೆ ಇಂಥ ಪ್ರಶಸ್ತಿ ನೀಡುವುದು ಸೂಕ್ತವಲ್ಲ ಎಂಬುದು ನಮ್ಮ ಅಭಿಪ್ರಾಯ" ಎಂದು ಎಸ್ ಆರ್ ದಾರಾಪುರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಂಬೇಡ್ಕರ್ ಮಹಾಸಭಾ ಉತ್ತರ ಪ್ರದೇಶದ ಅತೀ ದೊಡ್ಡ ದಲಿತ ಸಂಘತನೆಯಾಗಿದ್ದು, ಅಂಬೇಡ್ಕರ್ ಅವರ ಸಾಕಷ್ಟು ಅನುಯಾಯಿಗಳು ಸಂಘಟನೆಯ ಭಾಗವಾಗಿದ್ದಾರೆ.
-
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications