ಬಿಜೆಪಿಯವರು ನಮನ ಸಲ್ಲಿಸಿದ್ದಕ್ಕೆ ಅಂಬೇಡ್ಕರ್ ಪ್ರತಿಮೆಗೆ ಶುದ್ಧೀಕರಣ!
ವಡೋದರ, ಏಪ್ರಿಲ್ 14: ಕೇಂದ್ರ ಸಚಿವೆ ಮನೇಕಾ ಗಾಂಧಿ ಮತ್ತು ಬಿಜೆಪಿ ಮುಖಂಡರು ನಮನ ಸಲ್ಲಿಸಿದ ಅಂಬೇಡ್ಕರ್ ವಿಗ್ರಹವನ್ನು ದಲಿತ ಸಮುದಾಯದ ಕೆಲವರು ಹಾಲು ಹಾಕಿ 'ಶುದ್ಧೀಕರಿಸಿದ' ಘಟನೆ ಗುಜರಾತಿನ ವಡೋದರಾದಲ್ಲಿ ನಡೆದಿದೆ.
ಬಹುಭಾಷಾ ನಟ ಪ್ರಕಾಶ್ ರೈ ಭಾಗವಹಿಸಿದ್ದ ಕಾರ್ಯಕ್ರಮವೊಂದರ ನಂತರ ವೇದಿಕೆಯನ್ನು ಗೋಮೂತ್ರ ಹಾಕಿ ಬಿಜೆಪಿ ನಾಯಕರು ಸ್ವಚ್ಛಗೊಳಿಸಿದ್ದು ನೆನಪಿರಬಹುದು. ಇದೀಗ ಅಂಥದೇ ಅವಮಾನವನ್ನು ಬಿಜೆಪಿ ನಾಯಕರಿಗೆ ವಡೋದರದ ದಲಿತ ಸಮುದಾಯದ ಕೆಲವರು ಮಾಡಿದ್ದಾರೆ.
ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಮನೇಕಾ ಗಾಂಧಿ ಅವರೊಂದಿಗೆ ಆಗಮಿಸಿದ್ದ ಕೆಲವು ಬಿಜೆಪಿ ಮುಖಂಡರು ವಡೋದರದಲ್ಲಿ ಅಂಬೇಡ್ಕರ್ ಪ್ರತಿಮೆಯೊಂದಕ್ಕೆ ಅಂಬೇಡ್ಕರ್ ಜಯಂತಿ ನಿಮಿತ್ತ ಮಾಲಾರ್ಪಣೆ ಮಾಡಿ, ನಮನ ಸಲ್ಲಿಸಿದ್ದಾರೆ.

ಅಂಬೇಡ್ಕರ್ ಪ್ರತಿಮೆಗೆ ನಮನ ಸಲ್ಲಿಸಲು ಆಗಮಿಸುತ್ತಿದ್ದಂತೆಯೇ ಬಿಜೆಪಿ ನಾಯಕರ ವಿರುದ್ಧ ದಲಿತ ಸಮುದಾಯದ ಹಲವರು ಧಿಕ್ಕಾರ ಕೂಗಿದ್ದಲ್ಲದೆ, ಕಾರ್ಯಕ್ರಮದ ನಂತರ ಅವರು ವಾಪಸ್ಸಾಗುತ್ತಿದ್ದಂತೆಯೇ, ಅಂಬೇಡ್ಕರ್ ಪ್ರತಿಮೆಯನ್ನು ಹಾಲಿನಿಂದ ತೊಳೆದು ಶುದ್ಧೀಕರಿಸಿದ್ದಾರೆ! ಬಿಜೆಪಿ ನಾಯಕರು ನಮನ ಸಲ್ಲಿಸಿದ್ದಕ್ಕಾಗಿ ಆ ಪ್ರತಿಮೆ ಅಪವಿತ್ರವಾಗಿದೆ, ಆದ್ದರಿಂದ ಹಾಲು ಹಾಕಿ ಶುದ್ಧೀಕರಿಸಿದ್ದೇವೆ ಎಂದು ದಲಿತ ಮುಖಂಡರೊಬ್ಬರು ಹೇಳಿದ್ದಾರೆ!
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಬಿಜೆಪಿ ಅಭ್ಯರ್ಥಿಗಳ ಮೊದಲ ಅಧಿಕೃತ ಪಟ್ಟಿ ಪ್ರಕಟ
"ಬಿಜೆಪಿ ನಾಯಕರು ಕಾರ್ಯಕ್ರಮಕ್ಕೆ ಆಗಮಿಸುವ ಮೊದಲೇ ನಾವು ಪ್ರತಿಮೆಗೆ ನಮನ ಸಲ್ಲಿಸಲು ಬಂದಿದ್ದೆವು. ಆದರೆ ಪೊಲೀಸರು ನಮ್ಮನ್ನು ಕಡೆಗಣಿಸಿ ಬಿಜೆಪಿ ನಾಯಕರಿಗೆ ಆದ್ಯತೆ ನೀಡಿದ್ದು ಸರಿಯೇ?" ಎಂದೂ ಅವರು ಪ್ರಶ್ನಿಸಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications