ಚಂಡಮಾರುತ 'ಡಾನಾ' ಮಾಡಿದ ಹಾನಿ ಮೌಲ್ಯಮಾಪನ ವರದಿ: ಶೀಘ್ರವೇ ಕೇಂದ್ರಕ್ಕೆ ಸಲ್ಲಿಕೆ!
ಭುವನೇಶ್ವರ, ನವೆಂಬರ್ 02: ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾಗಿ ಒಡಿಶಾ, ಪಶ್ಚಿಮ ಬಂಗಾಳ ಕರಾವಳಿಗೆ ಅಪ್ಪಳಿಸಿದ 'ಡಾನಾ' ಚಂಡಮಾರುತವು ಸಾಕಷ್ಟು ಅವಾಂತರ ಮಾಡಿತು. ಪ್ರತಿ ಗಂಟೆಗೆ 110-120 ಕಿಮೀ ವೇಗದಲ್ಲಿ ಬಂದು ತೀರಕ್ಕೆ ಅಪ್ಪಳಿಸಿದ 'ಡಾನಾ'ದಿಂದ ಆದ ನಷ್ಟ, ಹಾನಿಯ ವರದಿಯನ್ನು ಕಲೆ ಹಾಕಲಾಗುತ್ತಿದೆ. ಭಾನುವಾರ ನವೆಂಬರ್ 3ರಂದು ಇಲ್ಲವೇ ಸೋಮವಾರ ಕೆಂದ್ರ ವರದಿ ಸಲ್ಲಿಕೆ ಆಗಲಿದೆ ಎಂದು ಒಡಿಶಾ ಸಚಿವರು ಮಾಹಿತಿ ನೀಡಿದ್ದಾರೆ.
ಒಡಿಶಾ ರಾಜ್ಯ ಸರ್ಕಾರವು 'ಡಾನಾ' ಚಂಡಮಾರುತದಿಂದ ಆದ ಹಾನಿಯ ಮೌಲ್ಯಮಾಪನ ಮಾಡುತ್ತಿದೆ. ನವೆಂಬರ್ 3 ರೊಳಗೆ ಈ ಮೌಲ್ಯಮಾಪನ ಪೂರ್ಣಗೊಳಿಸಲಾಗುವುದು. ನಂತರ ವರದಿಯನ್ನು ಸಂಬಂಧಿಸಿದವರಿಗೆ ಸಲ್ಲಿಸಲಾಗುವುದು ಎಂದು ರಾಜ್ಯ ಕಂದಾಯ ಮತ್ತು ವಿಪತ್ತು ನಿರ್ವಹಣಾ ಸಚಿವ ಸುರೇಶ್ ಪೂಜಾರಿ ಹೇಳಿದ್ದಾರೆ.

'ಡಾನಾ' ಚಂಡಮಾರುತದ ಅಬ್ಬರಕ್ಕೆ ಒಡಿಶಾ ರಾಜ್ಯದ ಬಲಾಸೋರ್, ಭದ್ರಕ್ ಮತ್ತು ಕೇಂದ್ರಪಾರ ಮೂರು ಜಿಲ್ಲೆಗಳ ಮೇಲೆ ತೀವ್ರ ಹಾನಿ ಉಂಟು ಮಾಡಿದೆ. ಚಂಡಮಾರುತದಿಂದ ಸುರಿದ ಮಳೆಯಿಂದಾಗಿ ಸೃಷ್ಟಿಯಾದ ಪ್ರವಾಹವು ಬಾಲಸೋರ್ ಜನಜೀವನವನ್ನು ಕಷ್ಟಕ್ಕೆ ನೂಕಿತು. ಮಾಹಿತಿ ಕಲೆ ಹಾಕಿದ್ದರ ಪ್ರಕಾರ, ಚಂಡಮಾರುತಕ್ಕಿಂತ ಅತೀ ವೃಷ್ಟಿಯಿಂದ ಆದ ಹಾನಿ ಹೆಚ್ಚು ಎಂದು ಸಚಿವರು ಮಾಹಿತಿ ನೀಡಿದ್ದಾರೆ.
ಕೇಂದ್ರ ವರದಿ ಸಲ್ಲಿಕೆ ಬಳಿಕ, ಅನುದಾನ ಪ್ರಕ್ರಿಯೆ
ಕೆಲವು ಜಿಲ್ಲೆಗಳಲ್ಲಿ ಈ ಡಾನಾ ಚಂಡಮಾರುತ ಅತ್ಯಂತ ಕೆಟ್ಟ ಪ್ರಭಾವ ಬೀರಿದೆ. ಜನ ಜೀವನ ಅಸ್ತವ್ಯಸ್ತವಾಗಿದೆ. ರಾಜ್ಯ ಸರ್ಕಾರವು ಪ್ರಸ್ತುತ ಪೀಡಿತ ಜಿಲ್ಲೆಗಳಿಂದ ವರದಿಗಳನ್ನು ಸಂಗ್ರಹಿಸುತ್ತಿದೆ. ಇನ್ನೊಂದು ದಿನಗದಲ್ಲಿ ಮೌಲ್ಯಪಾಮನ ಮುಗಿಸಲು ಪ್ಲಾನ್ ಮಾಡಿಕೊಂಡಿದ್ದೇವೆ. ನಂತರ ಆ ವರದಿಯನ್ನು ಪರಿಹಾರ ಪಡೆಯುವ ದೃಷ್ಟಿಯಿಂದ ಹಾಗೂ ಹಾನಿಯ ಪ್ರದೇಶಗಳ ಪುನಶ್ಚೇತನ ಸಲುವಾಗಿ ಕೇಂದ್ರಕ್ಕೆ ಸಲ್ಲಿಸಲಿದ್ದೇವೆ ಎಂದುರು.
ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಕೆ ಆದ ತಕ್ಷಣವೇ ಕೇಂದ್ರದ ಅಧಿಕಾರಿಗಳು ಮುಖ್ಯಸ್ಥರ ತಂಡವು ಒಡಿಶಾದ ಚಂಡಮಾರುತ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸುವ ಸಾಧ್ಯತೆ ಇದೆ ಎಂದು ಅವರು ತಿಳಿಸಿದ್ದಾರೆ.
ಇದೆಲ್ಲ ಪ್ರಕ್ರಿಯೆಗಳು ಮುಗಿದ ಬಳಿಕ ಕೇಂದ್ರ ಸರ್ಕಾರದ ಪ್ರವಾಹ ಮತ್ತು ಹಾನಿಯದ ಪ್ರದೇಶಗಳ ಜನರಿಗಾಗಿ ಅನುದಾನದ ಬಿಡುಗಡೆ ಮಾಡಲಿದೆ. ಮೌಲ್ಯಮಾಪನ ಪೂರ್ಣಗೊಳಿಸಿದ ತಕ್ಷಣ ಪರಿಹಾರ ವಿತರಣೆ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಶೀಘ್ರವೇ ಜನರಿಗೆ ಪ್ರವಾಹ ಸಮಸ್ಯೆಗಳಿಗೆ ಸ್ಪಂದಿಸುವುದು ನಮ್ಮ ಆದ್ಯತೆ ಆಗಿದೆ ಎಂದರು.
ಬಾಲಸೋರ್, ಭದ್ರಕ್ ಮತ್ತು ಕೇಂದ್ರಪಾರಾ ಸೇರಿದಂತೆ ಅನೇಕ ಪ್ರದೇಶಗಳು, ಕರಾವಳಿಗೆ ಹೊಂದಿಕೊಂಡ ಭಾಗಗಳಲ್ಲಿ ಸಾಕಷ್ಟು ಹಾನಿ ಆಗಿದೆ. ಈ ಕುರಿತು ಪರಿಹಾರಕ್ಕೆ ಸಂತ್ರಸ್ತರು ಮನವಿ ಮಾಡಿದ್ದರೆ ಎನ್ನಲಾಗಿದೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ












Click it and Unblock the Notifications