ದರ್ಗಾಗೆ ಬಾಂಬ್ ಇಟ್ಟ ಅಪರಾಧಿಗೆ ಸಿಕ್ಕಿತು ಭವ್ಯ ಸ್ವಾಗತ
ಭರೂಚ್, ಸೆಪ್ಟೆಂಬರ್ 06: ಅಜ್ಮೇರ್ ದರ್ಗಾ ಮೇಲೆ ಬಾಂಬ್ ದಾಳಿ ನಡೆಸಿ ಮೂವರ ಸಾವಿಗೆ ಕಾರಣವಾಗಿದ್ದ ಅಪರಾಧಿ ಜಾಮೀನಿನ ಮೇಳೆ ಹೊರಬಂದಾಗ ಆತನಿಗೆ ಭವ್ಯ ಸ್ವಾಗತ ನೀಡಲಾಗಿದೆ.
ಭವೇಶ್ ಪಟೇಲ್, 2007ರಲ್ಲಿ ಅಜ್ಮೇರ್ ದರ್ಗಾ ಮೇಲೆ ಬಾಂಬ್ ದಾಳಿ ನಡೆಸಿದ ಪ್ರಕರಣದಲ್ಲಿ ಅಪರಾಧಿಯೆಂದು ನಿರ್ಧಾರವಾದಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದಾನೆ. ಆತ ನಿನ್ನೆ ಜಾಮೀನಿನ ಮೇಲೆ ಹೊರಬಂದಾಗ ಹಿಂದೂ ಸಂಘಟನೆಯ ಕಾರ್ಯಕರ್ತರು ಆತನಿಗೆ ಭವ್ಯ ಸ್ವಾಗತ ನೀಸಿದ್ದಾರೆ.
ಆತ ಅಜ್ಮೇರ್ನ ಜೈಲಿನಿಂದ ತನ್ನ ಊರು ಭರೂಚ್ಗೆ ಆಗಮಿಸಿದ. ಜೈಲಿನಲ್ಲಿದ್ದಾಗ ಸ್ವಾಮೀಜಿಯಾಗಿ ಬದಲಾಗಿರುವ ಆತ ಕಾವಿ ಧರಿಸಿ ಊರಿಗೆ ಬಂದಿದ್ದ. ಆತನಿಗೆ ಹಾರ ಹಾಕಿ ಹೆಗಲ ಮೇಲೆ ಹೊತ್ತು ಹಿಂದೂ ಸಂಘಟನೆಯ ಕಾರ್ಯಕರ್ತರು ಸ್ವಾಗತ ಮಾಡಿದರು. ರಸ್ತೆಗಳಲ್ಲಿ ಹಾಡು, ನೃತ್ಯಗಳು ಜೋರಾಗಿ ನಡೆದವು.

2007 ಅಕ್ಟೋಬರ್ 11 ರಂದು ಭವೇಶ್ ಪಟೆಲ್ ಮತ್ತು ಇನ್ನೂ ಮೂವರು ಅಜ್ಮೇರ್ ದರ್ಗಾ ಮುಂದೆ ಬಾಂಬ್ ಸ್ಫೋಟಿಸಿದ್ದರು. ಈ ಸ್ಫೋಟದಲ್ಲಿ ಮೂರು ಜನ ಮೃತಪಟ್ಟು, 15 ಮಂದಿ ಗಾಯಾಳುಗಳಾಗಿದ್ದರು.

ನಿನ್ನೆ ತಾನೆ ಬೆಂಗಳೂರಿನಲ್ಲಿ, ಗೌರಿ ಹತ್ಯೆ ಮಾಡಿದ ಆರೋಪಿ ಪರಶುರಾಮ್ ವಾಘ್ಮೋರೆಗೆ ಜಿಂದಾಬಾದ್ ಘೋಷಣೆಗಳನ್ನು ಕೂಗಲಾಗಿದೆ. ಇತ್ತೀಚೆಗೆ ರಾಜಸ್ಥಾನದಲ್ಲಿ, ಮುಸ್ಲಿಂ ವ್ಯಕ್ತಿಯನ್ನು ಜೀವಂತ ಸುಟ್ಟವನನ್ನು ಹೀರೋ ರೀತಿಯಲ್ಲಿ ಮೆರೆಸಲಾಗಿತ್ತು. ಈಗ ಹಿಂದೂ ಭಯೋತ್ಪಾದಕನೊಬ್ಬನಿಗೆ ಭವ್ಯ ಸ್ವಾಗತ ನೀಡಲಾಗಿದೆ. ಇದೆಲ್ಲಾ ಧಾರ್ಮಿಕ ಅಸಹಿಷ್ಣುತೆಯತ್ತ ಕೊಂಡು ಹೋಗುವ ಆತಂಕ ಎದುರಾಗಿದೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications