ರಾಮಮಂದಿರ ನಿರ್ಮಾಣದ ಅಂತಿಮ ದಿನಾಂಕ ಉಡುಪಿಯಲ್ಲಿ ಘೋಷಣೆ
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಆರಂಭವಾಗುವ ಅಂತಿಮ ದಿನಾಂಕವನ್ನು ಉಡುಪಿಯಲ್ಲಿ ಘೋಷಿಸಲಾಗುವುದು ಎಂದು ಬಿಜೆಪಿಯ ಸಂಸದ ಸಾಕ್ಷಿ ಮಹಾರಾಜ್ ಹೇಳಿದ್ದಾರೆ.
ಕಾನ್ಪುರ, ಜೂ 26: ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ನಿರ್ಮಾಣ ಆರಂಭವಾಗುವ ಅಂತಿಮ ದಿನಾಂಕವನ್ನು ಕರ್ನಾಟಕದ ಉಡುಪಿಯಲ್ಲಿ ಘೋಷಿಸಲಾಗುವುದು ಎಂದು ಬಿಜೆಪಿಯ ಸಂಸದ ಸಾಕ್ಷಿ ಮಹಾರಾಜ್ ಹೇಳಿದ್ದಾರೆ.
ನಗರದಲ್ಲಿ ಮಾತನಾಡುತ್ತಿದ್ದ ಉತ್ತರಪ್ರದೇಶದ ಉನ್ನಾವ್ ಕ್ಷೇತ್ರದ ಫೈರ್ ಬ್ರಾಂಡ್ ಖ್ಯಾತಿಯ ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್, ಇದೇ ನವೆಂಬರ್ ನಲ್ಲಿ ಉಡುಪಿಯಲ್ಲಿ ಸಂತರ ಸಮ್ಮೇಳನ ನಡೆಯಲಿದೆ. ಆ ಸಮ್ಮೇಳನದಲ್ಲಿ ರಾಮಮಂದಿರ ನಿರ್ಮಾಣ ಆರಂಭವಾಗುವ ಅಂತಿಮ ದಿನಾಂಕವನ್ನು ಪ್ರಕಟಿಸಲಾಗುವುದು.

ನಾನು ಖುದ್ದಾಗಿ ಉಡುಪಿಗೆ ಭೇಟಿ ನೀಡಿ ಪೂಜ್ಯ ಪೇಜಾವರ ಶ್ರೀಗಳ ಜೊತೆ ಮಾತುಕತೆ ನಡೆಸಿದ್ದೇನೆ. ವಿಶ್ವ ಹಿಂದೂ ಪರಿಷತ್ ಸಂಘಟನೆ ಸ್ಥಾಪನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಪೇಜಾವರ ಶ್ರೀಗಳು ಸಮ್ಮೇಳನಕ್ಕೆ ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ಹೇಳಿದ್ದಾರೆಂದು ಸಾಕ್ಷಿ ಮಹಾರಾಜ್ ಹೇಳಿದ್ದಾರೆ.
ನವೆಂಬರ್ ತಿಂಗಳಲ್ಲಿ ದಿನಾಂಕ ಘೋಷಣೆಯಾದ ನಂತರ, ವಿಶ್ವದ ಯಾವುದೇ ಶಕ್ತಿಗೆ ರಾಮಮಂದಿರ ನಿರ್ಮಾಣ ತಡೆಯಲು ಸಾಧ್ಯವಿಲ್ಲ ಎಂದು ಸಾಕ್ಷಿ ಮಹಾರಾಜ್ ಹೇಳಿದ್ದಾರೆ.
ಎನ್ಡಿಎ ರಾಷ್ಟ್ರಪತಿ ಅಭ್ಯರ್ಥಿ ರಾಮ್ ನಾಥ್ ಕೋವಿಂದ್ ಅವರಿಗೆ ನಿತೀಶ್ ಕುಮಾರ್ ಬೆಂಬಲ ಸೂಚಿಸಿದ್ದಕ್ಕೆ ಅವರಿಗೆ ಅಭಿನಂದನೆ ಸಲ್ಲಿಸಿದ ಸಾಕ್ಷಿ ಮಹಾರಾಜ್, ನಿತೀಶ್ ತೆಗೆದುಕೊಂಡ ಕ್ರಮ ಸ್ವಾಗತಾರ್ಹ ಎಂದಿದ್ದಾರೆ.
ಪಶ್ಚಿಮಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ಆಡಳಿತ ವೈಫಲ್ಯದಿಂದ, ಆ ರಾಜ್ಯದಲ್ಲಿ ಪದೇಪದೇ ಕಾನೂನು ಸುವ್ಯವಸ್ಥೆ ಹದೆಗೆಡುತ್ತಿದೆ ಎಂದು ಸಾಕ್ಷಿ ಮಹಾರಾಜ್ ಹೇಳಿದ್ದಾರೆ.
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Government Schools: ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ: ಎಲ್ಲ ಶಿಕ್ಷಕರಿಗೆ ಇಂಗ್ಲಿಷ್ ಟ್ರೈನಿಂಗ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಏಪ್ರಿಲ್ 11ರ ದರಪಟ್ಟಿ












Click it and Unblock the Notifications