ದಾವೂದ್ ಶರಣಾಗತಿ ತಪ್ಪಿಸಿದ್ದು ಪವಾರ್: ಜೇಠ್ಮಲಾನಿ
ನವದೆಹಲಿ, ಜುಲೈ. 04: ಬಿಜೆಪಿ ಮುಖಂಡ, ಹಿರಿಯ ನ್ಯಾಯವಾದಿ ರಾಮ್ ಜೇಠ್ಮಲಾನಿ ಅವರು ಮತ್ತೊಂದು ಬಾಂಬ್ ಸಿಡಿಸಿದ್ದಾರೆ. ಭೂಗತ ಪಾತಕಿ ದಾವೂದ್ ಇಬ್ರಾಹಿಂ 90ರ ದಶಕದಲ್ಲೇ ಶರಣಾಗತನಾಗಲು ಬಯಸಿದ್ದ ಅದರೆ, ಶರದ್ ಪವಾರ್ ಅವರು ಅಡ್ಡಗಾಲು ಹಾಕಿದರು ಎಂದಿದ್ದಾರೆ.
"ಭಾರತಕ್ಕೆ ಬರಲು ನಾನು ಸಿದ್ಧನಾಗಿದ್ದೇನೆ. ಆದರೆ, ಅಲ್ಲಿ ನನ್ನ ಜೀವಕ್ಕೆ ಅಪಾಯವಾಗಬಹುದು ಎಂಬ ಆತಂಕ ವ್ಯಕ್ತಪಡಿಸಿದ್ದ. ಅಲ್ಲದೆ, ತಾನು 1993ರ ಮುಂಬೈ ಸರಣಿ ಸ್ಫೋಟದಲ್ಲಿ ನನ್ನ ಪಾತ್ರವಿಲ್ಲ ಎಂದು ದಾವೂದ್ ಹೇಳಿದ್ದ. ಆಗ ನಾನು ಅಂದಿನ ಮಹಾರಾಷ್ಟ್ರ ಮುಖ್ಯಮಂತ್ರಿ ಶರದ್ ಪವಾರ್ ಅವರು ದಾವೂದ್ ಇಬ್ರಾಹಿಂ ಆಫರ್ ತಿರಸ್ಕರಿಸಿದ್ದರು.[ದಾವೂದ್ ಎಲ್ಲಿದ್ದಾನೋ ನಮಗೆ ಗೊತ್ತಿಲ್ಲ: ಮೋದಿ ಸರ್ಕಾರ್]
ಭಾರತಕ್ಕೆ ಮರಳಲು ಸರ್ಕಾರ ಅವಕಾಶ ನೀಡಲಿಲ್ಲ ಎಂಬ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಸಹಚರ ಛೋಟಾ ಶಕೀಲ್ ಹೇಳಿಕೆಯನ್ನು ಹಿರಿಯ ನ್ಯಾಯವಾದಿ ರಾಮ್ ಜೇಠ್ಮಲಾನಿ ಪುಷ್ಟೀಕರಿಸಿದ್ದಾರೆ. 1990ರ ದಶಕದಲ್ಲಿ ನಾನು ದಾವೂದ್ ಜತೆ ಮಾತನಾಡಿದ್ದು ನಿಜ ಮತ್ತು ಭಾರತಕ್ಕೆ ಬಂದು ಇಲ್ಲಿಯೇ ವಿಚಾರಣೆ ಹಾಜರಾಗುವುದಾಗಿ ಒಲವು ತೋರಿದ್ದ.

ಅದರೆ, ಆತನನ್ನು ಭೇಟಿಯಾಗಲಿಲ್ಲ. ಲಂಡನ್ ನಲ್ಲಿ ದಾವೂದ್ ನ ಆಪ್ತ ಸಹಚರ ಛೋಟಾ ಶಕೀಲ್ ನನ್ನು ಭೇಟಿಯಾಗಿದ್ದೆ. ವಿಚಾರಣೆ ವೇಳೆ ಇಬ್ಬರನ್ನು ಗೃಹಬಂಧನದಲ್ಲಿರಿಸಲು ಬೇಕಾದ ವ್ಯವಸ್ಥೆ ಕಲ್ಪಿಸುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ಕೇಳಿಕೊಳ್ಳಲಾಗಿತ್ತು. ಆದರೆ, ಅಂದಿನ ಪವಾರ್ ಸರ್ಕಾರ ಒಪ್ಪಿಕೊಳ್ಳಲಿಲ್ಲ. [ದಾವೂದ್ಗೆ ಕೊಟ್ಟಿದ್ದೇಕೆ ವೀಸಾ : ಕಾಂಗ್ರೆಸ್ಸಿಗೆ ನಳೀನ್ ಗೂಸಾ!]
1993ರ ಮುಂಬೈ ಸರಣಿ ಬಾಂಬ್ ಸ್ಫೋಟ ಪ್ರಕರಣದಲ್ಲಿ ಭಾಗಿಯಾಗಿಲ್ಲ ಎಂದು ದಾವೂದ್ ಇಬ್ರಾಹಿಂ ದೂರವಾಣಿಯಲ್ಲಿ ಮಾತನಾಡಿದ ಸಂದರ್ಭದಲ್ಲಿ ಹೇಳಿದ್ದರು.
ಒಂದು ವೇಳೆ ಬಂಧನವಾದರೆ ಪೊಲೀಸರು ಹಿಂಸೆ ನೀಡಬಾರದು, ಕೋರ್ಟ್ ವಿಚಾರಣೆಗೆ ಸಿದ್ದ ಎಂದಿದ್ದ. ಆದರೆ, ಯುಪಿಎ ಮತ್ತು ಪವಾರ್ ನೇತೃತ್ವದ ಸರ್ಕಾರ ಸರಿಯಾದ ವ್ಯವಸ್ಥೆ ಕಲ್ಪಿಸುವಲ್ಲಿ ವಿಫಲವಾದ ಕಾರಣ ದಾವೂದ್ ಶರಣಾಗತಿ ಸಾಧ್ಯವಾಗಲಿಲ್ಲ ಎಂದು ರಾಮ್ ಜೇಠ್ಮಲಾನಿ ಹೇಳಿದ್ದಾರೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications