ದಾವೂದ್ ಶರಣಾಗತಿ ತಪ್ಪಿಸಿದ್ದು ಪವಾರ್: ಜೇಠ್ಮಲಾನಿ
ನವದೆಹಲಿ, ಜುಲೈ. 04: ಬಿಜೆಪಿ ಮುಖಂಡ, ಹಿರಿಯ ನ್ಯಾಯವಾದಿ ರಾಮ್ ಜೇಠ್ಮಲಾನಿ ಅವರು ಮತ್ತೊಂದು ಬಾಂಬ್ ಸಿಡಿಸಿದ್ದಾರೆ. ಭೂಗತ ಪಾತಕಿ ದಾವೂದ್ ಇಬ್ರಾಹಿಂ 90ರ ದಶಕದಲ್ಲೇ ಶರಣಾಗತನಾಗಲು ಬಯಸಿದ್ದ ಅದರೆ, ಶರದ್ ಪವಾರ್ ಅವರು ಅಡ್ಡಗಾಲು ಹಾಕಿದರು ಎಂದಿದ್ದಾರೆ.
"ಭಾರತಕ್ಕೆ ಬರಲು ನಾನು ಸಿದ್ಧನಾಗಿದ್ದೇನೆ. ಆದರೆ, ಅಲ್ಲಿ ನನ್ನ ಜೀವಕ್ಕೆ ಅಪಾಯವಾಗಬಹುದು ಎಂಬ ಆತಂಕ ವ್ಯಕ್ತಪಡಿಸಿದ್ದ. ಅಲ್ಲದೆ, ತಾನು 1993ರ ಮುಂಬೈ ಸರಣಿ ಸ್ಫೋಟದಲ್ಲಿ ನನ್ನ ಪಾತ್ರವಿಲ್ಲ ಎಂದು ದಾವೂದ್ ಹೇಳಿದ್ದ. ಆಗ ನಾನು ಅಂದಿನ ಮಹಾರಾಷ್ಟ್ರ ಮುಖ್ಯಮಂತ್ರಿ ಶರದ್ ಪವಾರ್ ಅವರು ದಾವೂದ್ ಇಬ್ರಾಹಿಂ ಆಫರ್ ತಿರಸ್ಕರಿಸಿದ್ದರು.[ದಾವೂದ್ ಎಲ್ಲಿದ್ದಾನೋ ನಮಗೆ ಗೊತ್ತಿಲ್ಲ: ಮೋದಿ ಸರ್ಕಾರ್]
ಭಾರತಕ್ಕೆ ಮರಳಲು ಸರ್ಕಾರ ಅವಕಾಶ ನೀಡಲಿಲ್ಲ ಎಂಬ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಸಹಚರ ಛೋಟಾ ಶಕೀಲ್ ಹೇಳಿಕೆಯನ್ನು ಹಿರಿಯ ನ್ಯಾಯವಾದಿ ರಾಮ್ ಜೇಠ್ಮಲಾನಿ ಪುಷ್ಟೀಕರಿಸಿದ್ದಾರೆ. 1990ರ ದಶಕದಲ್ಲಿ ನಾನು ದಾವೂದ್ ಜತೆ ಮಾತನಾಡಿದ್ದು ನಿಜ ಮತ್ತು ಭಾರತಕ್ಕೆ ಬಂದು ಇಲ್ಲಿಯೇ ವಿಚಾರಣೆ ಹಾಜರಾಗುವುದಾಗಿ ಒಲವು ತೋರಿದ್ದ.

ಅದರೆ, ಆತನನ್ನು ಭೇಟಿಯಾಗಲಿಲ್ಲ. ಲಂಡನ್ ನಲ್ಲಿ ದಾವೂದ್ ನ ಆಪ್ತ ಸಹಚರ ಛೋಟಾ ಶಕೀಲ್ ನನ್ನು ಭೇಟಿಯಾಗಿದ್ದೆ. ವಿಚಾರಣೆ ವೇಳೆ ಇಬ್ಬರನ್ನು ಗೃಹಬಂಧನದಲ್ಲಿರಿಸಲು ಬೇಕಾದ ವ್ಯವಸ್ಥೆ ಕಲ್ಪಿಸುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ಕೇಳಿಕೊಳ್ಳಲಾಗಿತ್ತು. ಆದರೆ, ಅಂದಿನ ಪವಾರ್ ಸರ್ಕಾರ ಒಪ್ಪಿಕೊಳ್ಳಲಿಲ್ಲ. [ದಾವೂದ್ಗೆ ಕೊಟ್ಟಿದ್ದೇಕೆ ವೀಸಾ : ಕಾಂಗ್ರೆಸ್ಸಿಗೆ ನಳೀನ್ ಗೂಸಾ!]
1993ರ ಮುಂಬೈ ಸರಣಿ ಬಾಂಬ್ ಸ್ಫೋಟ ಪ್ರಕರಣದಲ್ಲಿ ಭಾಗಿಯಾಗಿಲ್ಲ ಎಂದು ದಾವೂದ್ ಇಬ್ರಾಹಿಂ ದೂರವಾಣಿಯಲ್ಲಿ ಮಾತನಾಡಿದ ಸಂದರ್ಭದಲ್ಲಿ ಹೇಳಿದ್ದರು.
ಒಂದು ವೇಳೆ ಬಂಧನವಾದರೆ ಪೊಲೀಸರು ಹಿಂಸೆ ನೀಡಬಾರದು, ಕೋರ್ಟ್ ವಿಚಾರಣೆಗೆ ಸಿದ್ದ ಎಂದಿದ್ದ. ಆದರೆ, ಯುಪಿಎ ಮತ್ತು ಪವಾರ್ ನೇತೃತ್ವದ ಸರ್ಕಾರ ಸರಿಯಾದ ವ್ಯವಸ್ಥೆ ಕಲ್ಪಿಸುವಲ್ಲಿ ವಿಫಲವಾದ ಕಾರಣ ದಾವೂದ್ ಶರಣಾಗತಿ ಸಾಧ್ಯವಾಗಲಿಲ್ಲ ಎಂದು ರಾಮ್ ಜೇಠ್ಮಲಾನಿ ಹೇಳಿದ್ದಾರೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications