ದಾವೂದ್ ಇಬ್ರಾಹಿಂ ಫಿಟ್ ಆಗಿದ್ದಾನೆ: ಛೋಟಾ ಶಕೀಲ್
ನವದೆಹಲಿ, ಏಪ್ರಿಲ್ 26: ಭೂಗತ ಪಾತಕಿ ದಾವೂದ್ ಇಬ್ರಾಹಿಂಗೆ ಗ್ಯಾಂಗ್ರಿನ್ ಆಗಿದೆ, ಕಾಲು ಕತ್ತರಿಸಬೇಕಿದೆ ಎಂದು ಬಂದಿರುವ ಸುದ್ದಿಯನ್ನು ಆತನ ಬಲಗೈ ಬಂಟ ಛೋಟಾ ಶಕೀಲ್ ಅಲ್ಲಗೆಳೆದಿದ್ದಾನೆ. ದಾವೂದ್ ಆರೋಗ್ಯದಿಂದಿದ್ದಾರೆ, ಯಾವುದೇ ಸಮಸ್ಯೆಯಿಲ್ಲ, ಫಿಟ್ ಆಗಿದ್ದಾರೆ ಎಂದು ಛೋಟಾ ಶಕೀಲ್ ಸ್ಪಷ್ಟನೆ ನೀಡಿದ್ದಾನೆ.
ದಾವೂದ್ ಇಬ್ರಾಹಿಂನ ಕಾಲಿನಲ್ಲಿ ಗ್ಯಾಂಗ್ರಿನ್ ಆಗಿದ್ದು, ಗುಣಪಡಿಸಲು ಸಾಧ್ಯವಾಗುವುದಿಲ್ಲ, ಈಗ ಆತನಿಗೆ ನಡೆದಾಡಲೂ ಸಹ ಆಗುತ್ತಿಲ್ಲ. ಆತನ ಕಾಲನ್ನು ಕತ್ತರಿಸಲು ವೈದ್ಯರು ಸೂಚಿಸಿದ್ದಾರೆ ಎಂದು ವರದಿ ಬಂದಿತ್ತು.

ಅಧಿಕ ರಕ್ತದೊತ್ತಡ, ಮಧುಮೇಹದಿಂದ ಬಳಲುತ್ತಿರುವ ದಾವೂದ್ ಗೆ ಗ್ಯಾಂಗ್ರಿನ್ ಆದರೆ ಅಚ್ಚರಿಪಡಬೇಕಾಗಿಲ್ಲ ಎಂಬ ಕಾರಣವೂ ಇತ್ತು. ಆದರೆ, ಈ ರೀತಿ ಸುಳ್ಳು ಸುದ್ದಿ ಹಬ್ಬಿಸಿ 'ಡಿ' ಕಂಪನಿಯನ್ನು ದುರ್ಬಲಗೊಳಿಸಲು ಯತ್ನಿಸಲಾಗುತ್ತಿದೆ ಎಂದು ಶಕೀಲ್ ಹೇಳಿದ್ದಾನೆ.
ಛೋಟಾ ಶಕೀಲ್ ನೀಡಿರುವ ಸ್ಪಷ್ಟನೆಗೆ ಹಿರಿಯ ಗುಪ್ತಚರ ಅಧಿಕಾರಿಗಳೂ ಸಹಮತ ವ್ಯಕ್ತಪಡಿಸಿದ್ದಾರೆ. 1993ರ ಮುಂಬೈ ಸರಣಿ ಸ್ಫೋಟದ ರೂವಾರಿ ದಾವೂದ್ ಇಬ್ರಾಹಿಂ ಅವರು 1986ರಲ್ಲಿ ಭಾರತ ತೊರೆದು ಕರಾಚಿಗೆ ಹೋಗಿ ನೆಲೆಸಿದ್ದಾನೆ. ಆದರೆ, ದಾವೂದ್ ಕರಾಚಿಯಲ್ಲಿ ಇಲ್ಲ ಎಂದು ಪಾಕಿಸ್ತಾನ ಹೇಳಿದೆ.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications