ಇಂಟರ್ ಪೋಲ್ ನಿಂದ ಮೋದಿಗೆ ಭರವಸೆ : ದಾವೂದ್ ಸೆರೆ ಖಚಿತ
ನವದೆಹಲಿ, ನ.19: ಭೂಗತ ಪಾತಕಿ ದಾವೂದ್ ಇಬ್ರಾಹಿಂನನ್ನು ಸೆರೆ ಹಿಡಿಯಲು ಭಾರತ ನಡೆಸುತ್ತಿರುವ ಪ್ರಯತ್ನಕ್ಕೆ ಬೆಂಬಲ ನೀಡುವುದಾಗಿ ಇಂಟರ್ ಪೋಲ್ ಘೋಷಿಸಿದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಇಂಟರ್ ಪೋಲ್ ಮುಖ್ಯಸ್ಥ ಜರ್ಜೆನ್ ಸ್ಟಾಕ್ ಅವರ ಜೊತೆ ನಡೆದ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.
ದಾವೂದ್ ಇಬ್ರಾಹಿಂನನ್ನು ಸೆರೆ ಹಿಡಿಯುವುದು ಖಚಿತ ಎಂದು ಪ್ರಧಾನಿ ಮೋದಿ ಅವರಿಗೆ ಇಂಟರ್ ಪೋಲ್ ಮುಖ್ಯಸ್ಥ ಭರವಸೆ ನೀಡಿದ್ದಾರೆ. ಗೃಹ ಸಚಿವ ರಾಜನಾಥ್ ಸಿಂಗ್ ಅವರು ಕೂಡಾ ಈ ಸಭೆಯಲ್ಲಿ ಪಾಲ್ಗೊಂಡಿದ್ದರು.[ಮೋದಿ ಸರ್ಕಾರದ ಮುಂದಿನ ಟಾರ್ಗೆಟ್ ದಾವೂದ್]
6ನೇ ಆಸ್ತಿ ರೆಕವರಿ ಬಗ್ಗೆ ಜಾಗತಿಕ ಫೋಕಲ್ ಪಾಯಿಂಟ್ ಸಮ್ಮೇಳನದಲ್ಲಿ ಭಾಗವಹಿಸಲು ಸ್ಟಾಕ್ ಅವರು ಭಾರತಕ್ಕೆ ಬಂದಿದ್ದಾರೆ. ಸುಮಾರು 50 ದೇಶಗಳ ಪ್ರತಿನಿಧಿಗಳು ಈ ಸಭೆಯಲ್ಲಿ ಪಾಲ್ಗೊಳ್ಳಲಿರುವುದು ವಿಶೇಷ.

ವಿದೇಶಗಳಲ್ಲಿ ಸುಮಾರು 50 ಸ್ಥಳಗಳಲ್ಲಿ ದಾವೂದ್ ಇಬ್ರಾಹಿಂಗೆ ಸೇರಿದ ಆಸ್ತಿ ಪಾಸ್ತಿ ಇದೆ ಎಂದು ಗುರುತಿಸಲಾಗಿದ್ದು, ಇದನ್ನು ವಶಪಡಿಸಲು ವಿವಿಧ ದೇಶಗಳ ನೆರವು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಎಲ್ಲಾ ದೇಶಗಳು ಒಗ್ಗೂಡಿ ಕಾರ್ಯಾಚರಣೆಗೆ ಇಳಿಯುವ ನಿರೀಕ್ಷೆಯಿದೆ. [ಛೋಟಾ ರಾಜನ್ : ಡಾನ್ ಆಗಿದ್ದು ಹೇಗೆ?]
ಹತ್ತು ಹಲವು ವರ್ಷಗಳಿಂದ ಇಂಟರ್ ಪೋಲ್ ನ ಹದ್ದಿನ ಕಣ್ಣು ಡಿ ಗ್ಯಾಂಗ್ ಮೇಲೆ ಬಿದ್ದಿದೆ. ಅದರೆ, ಅನೇಕ ಬಾರಿ ಕೈಗೆ ಸಿಗದಂತೆ ಚಳ್ಳೆಹಣ್ಣು ತಿನ್ನಿಸುವಲ್ಲಿ ದಾವೂದ್ ಯಶಸ್ವಿಯಾಗಿದ್ದಾನೆ.
ಕೊನೆಯ ಬಾರಿಗೆ ದುಬೈಗೆ ದಾವೂದ್ ತೆರಳಿದ ಮಾಹಿತಿ ಬಿಟ್ಟರೆ ಆತ ಸದ್ಯಕ್ಕೆ ಕರಾಚಿಯಲ್ಲಿ ನೆಲೆಸಿರುವುದಕ್ಕೆ ಖಚಿತ ದಾಖಲೆಗಳು ಸಿಕ್ಕಿವೆ. ಪಾಕಿಸ್ತಾನದ ಐಎಸ್ ಐ ನೆರವಿನಿಂದ ಅಡಗಿ ಕುಳಿತಿರುವ ದಾವೂದ್ ನನ್ನು ಸೆರೆ ಹಿಡಿಯಲು ಭಾರತಕ್ಕೆ ಇಂಟರ್ ಪೋಲ್ ನೆರವು ಸಿಗಲಿದೆ.
ಛೋಟಾ ರಾಜನ್ ನಂತರ 1993ರ ಮುಂಬೈ ಸರಣಿ ಸ್ಫೋಟದ ಆರೋಪಿ ದಾವೂದ್ ಇಬ್ರಾಹಿಂ ನಮ್ಮ ಟಾರ್ಗೆಟ್ ಎಂದು ಸಚಿವ ಕೀರೆನ್ ಹೇಳಿದ್ದಾರೆ. ಪಾಕಿಸ್ತಾನದ ಕರಾಚಿಯಲ್ಲಿ ಅಡಗಿ ಕುಳಿತಿರುವ ಭೂಗತ ಪಾತಕಿ ದಾವೂದ್ ಇಬ್ರಾಹಿಂನನ್ನು ಕೂಡ ಛೋಟಾ ರಾಜನ್ ರೀತಿಯಲ್ಲೇ ಬಂಧಿಸಿ ಭಾರತಕ್ಕೆ ಕರೆತರಲಾಗುವುದು ಎಂದಿದನ್ನು ಇಲ್ಲಿ ಸ್ಮರಿಸಬಹುದು (ಒನ್ ಇಂಡಿಯಾ ಸುದ್ದಿ)
-
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ












Click it and Unblock the Notifications