ದಾವೂದ್ 2.5 ಸಾವಿರ ಕೋಟಿ ಹಣ ಹೂಡಿಕೆ ಮಾಡಿದ್ದೆಲ್ಲಿ?
ನವದೆಹಲಿ, ಜು.08: ಭೂಗತ ಪಾತಕಿ ದಾವೂದ್ ಇಬ್ರಾಹಿಂ ಇಂಗ್ಲೆಂಡ್ ನ ಕೆಂಟ್ ನ ಹೋಟೆಲ್ ನಲ್ಲಿ ಸಾವಿರ ಕೋಟಿಗೂ ಅಧಿಕ ಮೊತ್ತದ ಹಣ ತೊಡಗಿಸಿದ್ದಾನೆ ಎಂಬ ಮಾಹಿತಿಯನ್ನು ಜಾರಿ ನಿರ್ದೇಶನಾಲಯ ನೀಡಿದೆ. ಅಲ್ಲದೇ ತುರ್ಕಿ ಮತ್ತು ಮೊರೊಕ್ಕೋದ ಕೆಲವು ಕಡೆಯೂ ದಾವೂದ್ ಹಣ ಹೂಡಿದ್ದಾನೆ ಎಂದು ತಿಳಿದು ಬಂದಿದೆ.
ಜಾರಿ ನಿರ್ದೇಶನಾಲಯ ಎಲ್ಲ ದೇಶಗಳ ರಾಯಭಾರ ಕಚೇರಿಗೆ ಪತ್ರ ಬರೆದಿದ್ದು ಈ ಬಗ್ಗೆ ಹೆಚ್ಚಿನ ಮಾಹಿತಿ ನೀಡುವಂತೆ ಕೋರಿದೆ. ದೇಶಗಳ ನಡುವಿನ ಬಾಂಧವ್ಯಕ್ಕೆ ಅಡ್ಡಿಯಾಗದಂತೆ ಈ ಪ್ರಕರಣವನ್ನು ಬಗೆಹರಿಸಲು ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದೆ.[ದಾವೂದ್ ಶರಣಾಗತಿ ತಪ್ಪಿಸಿದ್ದು ಪವಾರ್: ಜೇಠ್ಮಲಾನಿ]

ಜಾರಿ ನಿರ್ದೇಶನಾಲಯ ದಾವೂದ್ ಗೆ ಸಂಬಂಧಿಸಿದ ಎಲ್ಲ ಆಸ್ತಿಯನ್ನು ಜಪ್ತಿ ಮಾಡಲು ಯೋಜನೆ ರೂಪಿಸುತ್ತಿದೆ. ಈ ಹಿಂದೆ ಅಮೆರಿಕ ಮತ್ತು ಸಿಂಗಪುರ್ ನಲ್ಲಿ ತೆಗೆದುಕೊಂಡಂತ ಕ್ರಮಗಳನ್ನೇ ಇಲ್ಲಿ ಮತ್ತೆ ಪುನರಾವರ್ತಿಸಲಿದೆ. ದಾವೂದ್ ಹಣ ಹೂಡಿಕೆ ಹಿಂದೆ ಇಕ್ಬಾಲ್ ಮಿರ್ಚಿ ಎಂಬಾತ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬುದನ್ನು ನಿರ್ದೇಶನಾಲಯ ತಿಳಿಸಿದೆ. ಇಂಗ್ಲೆಂಡಿನ ವಿವಿಧೆಡೆ 2,500 ಕೋಟಿಗೂ ಅಧಿಕ ಹಣವನ್ನು ದಾವೂದ್ ಹೂಡಿಕೆ ಮಾಡಿದ್ದಾನೆ ಎಂಬ ಮಾಹಿತಿಯನ್ನು ಒನ್ ಇಂಡಿಯಾಕ್ಕೆ ನಿರ್ದೇಶನಾಲಯ ತಿಳಿಸಿದೆ.[ದಾವೂದ್ ಎಲ್ಲಿದ್ದಾನೋ ನಮಗೆ ಗೊತ್ತಿಲ್ಲ]
ಯುಕೆಗೆ ಭೇಟಿ ನೀಡಲಿರುವ ತಂಡ
ನಿರ್ದೇಶನಾಲಯದ ನಾಲ್ಕು ಜನರ ಸಮಿತಿ ಯುಕೆ, ತುರ್ಕಿ ಮತ್ತು ಮೊರಾಕ್ಕೋಗೆ ಭೇಟಿ ನೀಡಿ ಇನ್ನಷ್ಟು ಮಾಹಿತಿ ಕಲೆ ಹಾಕಲಿದೆ. ಈಗಾಗಲೇ ಕೆಲ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡಿದ್ದೇವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ತನಿಖೆ ವಿವಿಧ ಹಂತಗಳಲ್ಲಿ ನಡೆಯಲಿದೆ. ಗುಪ್ತಚರ ದಳ, ಸ್ಥಳೀಯ ಪೊಲೀಸ್, ಸಿಬಿಐ ಅಧಿಕಾರಿಗಳು ಇದಕ್ಕೆ ಕೈ ಜೋಡಿಸಲಿದ್ದಾರೆ.
ದುಬೈ ಮಾರುಕಟ್ಟೆಯಲ್ಲಿ ದಾವೂದ್ ಹೂಡಿಕೆ ಚಲನವಲನಗಳನ್ನು ಮೊದಲು ಬಂದ್ ಮಾಡಲಾಗುವುದು. ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ಸಾಕಷ್ಟು ಹಣ ಹಾಕಿದ್ದು ಎಲ್ಲ ಮಾಹಿತಿಯನ್ನು ಬಹಿರಂಗ ಮಾಡಿ ದಾವೂದ್ ಹಣ ಹರಿವಿಗೆ ತಡೆ ಒಡ್ಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications