ಬುಲೆಟ್ ಪ್ರೂಫ್ ವಾಹನ ಶಾಪಿಂಗ್ ಮಾಡಿದ ದಾವೂದ್ ಇಬ್ರಾಹಿಂ!
ಬೆಂಗಳೂರು, ಆಗಸ್ಟ್ 25: ಹಲವು ತನಿಖಾ ಸಂಸ್ಥೆಗಳು ಡಾನ್ ದಾವೂದ್ ಇಬ್ರಾಹಿಂ ಹಿಡಿಯಲು ಬೆವರು ಹರಿಸುತ್ತಿದ್ದರೆ, ಅತ ಮಾತ್ರ ಷಾಪಿಂಗ್ ನಲ್ಲಿ ಬಿಜಿಯಾಗಿದ್ದಾನೆ. ಮಜಬೂತಾಗಿರುವ ಬುಲೆಟ್ ಪ್ರೂಫ್ ಕಾರು ಖರೀದಿಸುವಲ್ಲಿ, ಅದರ ಇಂಟೀರಿಯರ್ಸ್ ಬಗ್ಗೆ ಆಲೋಚಿಸುತ್ತಾ ತನ್ನ ಏಜೆಂಟ್ ಜತೆ ಮಾತುಕತೆಯಲ್ಲಿದ್ದಾನೆ.
ಪಾಕಿಸ್ತಾನದಲ್ಲಿರುವ ದಾವೂದ್ ನನ್ನು ಹೆಡೆಮುರಿ ಕಟ್ಟಿ, ಭಾರತಕ್ಕೆ ಕರೆತರುವುದಕ್ಕೆ ಇಲ್ಲಿನ ಸರ್ಕಾರ ಯತ್ನಿಸುತ್ತಿದೆ. ಮತ್ತೊಂದು ಕಡೆ ದಾವೂದ್ ನನ್ನು ಮುಗಿಸೇ ಬಿಡುವ ಪ್ರಯತ್ನದಲ್ಲಿರುವ ಆತನ ವೈರಿಗಳು ಇದ್ದಾರೆ. ಈ ಮಧ್ಯೆ ಅನಾರೋಗ್ಯದಿಂದ ನರಳುತ್ತಿರುವ ಆತನಿಗೆ ಜೀವ ಭಯ ಕಾಡುತ್ತಿದೆ.[ದಾವೂದ್ ಮನೆ ವಿಳಾಸ: 9 ರಲ್ಲಿ 6 ಮಾತ್ರ ಸರಿಯಿದೆ : ಯುಎಸ್]

ತನ್ನ ರಕ್ಷಣೆಗಾಗಿ ಭದ್ರತಾ ವ್ಯವಸ್ಥೆ ಹೆಚ್ಚಿಸಿಕೊಳ್ಳುವುದಕ್ಕೆ ಬುಲೆಟ್ ಪ್ರೂಫ್ ಕಾರು ಖರೀದಿಗೆ ಮುಂದಾಗಿರುವ ಆತ, ಯುಎಇಯಲ್ಲಿರುವ ವ್ಯಕ್ತಿಯೊಬ್ಬನ ಜತೆಗೆ ನಿರಂತರ ಸಂಪರ್ಕದಲ್ಲಿದ್ದಾನೆ. ಮತ್ತು 5 ಬುಲೆಟ್ ಪ್ರೂಫ್ ವಾಹನ ಖರೀದಿಸಿ, ಪಾಕಿಸ್ತಾನಕ್ಕೆ ಕಳುಹಿಸುವಂತೆ ತಿಳಿಸಿದ್ದಾನೆ. ಯುಎಇಯ ಆ ವ್ಯಕ್ತಿಯ ಹೆಸರು ತಾರಿಕ್. ದಾವೂದ್ ಗಾಗಿ ಆತ ಕೆಲಸ ಮಾಡುತ್ತಿದ್ದಾನೆ. ಈ ಖರೀದಿ ವ್ಯವಹಾರ ಇಂಟೆಲಿಜೆನ್ಸ್ ಬ್ಯುರೋಗೆ ಅಕ್ಟೋಬರ್, 2014ರಲ್ಲೇ ಗಮನಕ್ಕೆ ಬಂದಿತ್ತು.
ದಾವೂದ್ ಮೇಲೆ ದಾಳಿ ಆಗಬಹುದು ಎಂದು ಆತನ ಆಪ್ತ ವಲಯ ಅನುಮಾನ ವ್ಯಕ್ತಪಡಿಸಿರುವುದರಿಂದ ಯುಎಇಯಿಂದ ಕಸ್ಟಮ್ ಮೇಡ್ ಬುಲೆಟ್ ಪ್ರೂಫ್ ವಾಹನ ಖರೀದಿಗೆ ನಿರ್ಧರಿಸಲಾಗಿದೆ. ತನಿಖಾ ಸಂಸ್ಥೆಗಳಿಗೆ ದೊರೆತಿರುವ ಮಾಹಿತಿ ಪ್ರಕಾರ, ಖರೀದಿಗೆ ಬೇಕಾದ ಎಲ್ಲ ಕೆಲಸಗಳನ್ನು ತಾರಿಕ್ ಮಾಡಿ ಮುಗಿಸಿದ್ದಾನೆ. ಟೊಯೊಟಾ ಲ್ಯಾಂಡ್ ಕ್ರೂಸರ್ ವಾಹನವನ್ನು ಆಯ್ಕೆ ಮಾಡಿಕೊಳ್ಳಲಾಗಿದೆ.[ದಾವೂದ್ ಇಬ್ರಾಹಿಂ ಫಿಟ್ ಆಗಿದ್ದಾನೆ: ಛೋಟಾ ಶಕೀಲ್]
ದಾವೂದ್ ಇಬ್ರಾಹಿಂಗೆ ಬೇಕಾದಂತೆ ವಾಹನದ ಮಾರ್ಪಾಡು ಮಾಡಲಾಗಿದ್ದು, ಅತಿ ಶೀಘ್ರದಲ್ಲೇ ಕರಾಚಿಯನ್ನು ತಲುಪಲಿದೆ. ದುಬೈ ಮೂಲದ ತಾರಿಕ್ ಇದೇ ಮೊದಲು ದಾವೂದ್ ಗಾಗಿ ವಾಹನ ಕಳುಹಿಸುತ್ತಿರುವುದೇನಲ್ಲ. 2009ರಲ್ಲೂ ದಾವೂದ್ ಗಾಗಿ ಇದೇ ರೀತಿ ವಾಹನ ಖರೀದಿಸಿ ಕರಾಚಿ ತಲುಪುವಂತೆ ನೋಡಿಕೊಂಡಿದ್ದ ಎಂದು ತನಿಖಾ ಸಂಸ್ಥೆಗಳು ಖಚಿತಪಡಿಸಿವೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications