ಗುಜರಾತ್ ಎಟಿಎಸ್ ಬಲೆಗೆ ಬಿದ್ದ ಡಿ ಗ್ಯಾಂಗಿನ ಮಜೀದ್ ಕುಟ್ಟಿ
ಜಮ್ಶೇಡ್ಪುರ್(ಜಾರ್ಖಂಡ್), ಡಿ. 27: ಭೂಗತ ಪಾತಕಿ ದಾವೂದ್ ಇಬ್ರಾಹಿಂ ಗ್ಯಾಂಗಿನ ಪ್ರಮುಖ ಸದಸ್ಯನೊಬ್ಬನನ್ನು ಬಂಧಿಸಲಾಗಿದೆ. ಬಂಧಿತನನ್ನು ಜಾರ್ಖಂಡ್ ಮೂಲದ ಅಬ್ದುಲ್ ಮಜೀದ್ ಕುಟ್ಟಿ ಎಂದು ಗುರುತಿಸಲಾಗಿದೆ.
1997ರಲ್ಲಿ ಗಣತಂತ್ರ ದಿನದಂದು ಗುಜರಾತ್ ಹಾಗೂ ಮಹಾರಾಷ್ಟ್ರಗಳಲ್ಲಿ ಬಾಂಬ್ ಸ್ಫೋಟಕ್ಕಾಗಿ ಸಂಚು ರೂಪಿಸಿದ್ದ ಆರೋಪ ಮಜೀದ್ ಕುಟ್ಟಿ ಮೇಲಿದೆ. ಬಹುಕಾಲದಿಂದ ತಲೆ ತಪ್ಪಿಸಿಕೊಂಡು ತಿರುಗುತ್ತಿದ್ದ ಈತನನ್ನು ಗುಜರಾತ್ ಎಟಿಎಸ್ ಬಂಧಿಸಿದೆ.
A Gujarat ATS team on Saturday arrested Dawood's aide Abdul Majeed Kutty from Jamshedpur, Jharkhand. He was involved in a case related to explosives sent by Dawood Ibrahim at behest of a Pakistani agency to carry out bomb blasts in Gujarat & Maharashtra on Republic Day in 1997 pic.twitter.com/se7Aa2d0tV
— ANI (@ANI) December 27, 2020
ಪಾಕಿಸ್ತಾನದ ಏಜೆನ್ಸಿಯ ನೆರವಿನಿಂದ ದಾವೂದ್ ಇಬ್ರಾಹಿಂ ಸ್ಫೋಟಕ ಸಾಮಾಗ್ರಿಗಳನ್ನು ಒದಗಿಸಿದ್ದು, ಸ್ಫೋಟಕಗಳನ್ನು ಬಳಸಿಕೊಂಡು ಗುಜರಾತ್ ಹಾಗೂ ಮಹಾರಾಷ್ಟ್ರದಲ್ಲಿ ಬಾಂಬ್ ಸ್ಫೋಟ ಸಂಚು ರೂಪಿಸುವಲ್ಲಿ ಮಜೀದ್ ಕುಟ್ಟಿ ಯಶಸ್ವಿಯಾಗಿದ್ದ. ಕುಟ್ಟಿ ಬಳಿ ಇದ್ದ 106 ಪಿಸ್ತೂಲ್, 750 ಕಾಟ್ರಿಡ್ಜ್, 4ಕೆಜಿ ಆರ್ ಡಿ ಎಕ್ಸ್ ವಶಪಡಿಸಿಕೊಳ್ಳಲಾಗಿದೆ.

ಇತ್ತೀಚೆಗೆ ದಾವೂದ್ ಇಬ್ರಾಹಿಂಗೆ ಸೇರಿದ ಪರಂಪರಾಗತ ಆಸ್ತಿಯನ್ನು ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯಲ್ಲಿ ಹರಾಜು ಹಾಕಲಾಗಿದ್ದು, 1 ಕೋಟಿ ರು ಗೂ ಅಧಿಕ ಮೊತ್ತಕ್ಕೆ ಮಾರಾಟವಾಗಿದೆ.
2020ರ ಆರಂಭದಲ್ಲಿ ದಾವೂದ್ ಇಬ್ರಾಹಿಂ ಗ್ಯಾಂಗಿಗೆ ಸೇರಿದ ಮಾಜಿ ಬಂಟ ಏಜಾಜ್ ಲಕ್ಡಾವಾಲನನ್ನು ಪೊಲೀಸರು ಬಂಧಿಸಿದ್ದರು. ದಾವೂದ್, ಛೋಟಾ ರಾಜನ್ ಸಂಪರ್ಕ್ ಕಡಿತಗೊಂಡ ಬಳಿಕ 10 ವರ್ಷಗಳ ಹಿಂದೆ ತನ್ನದೇ ಹೊಸ ಗ್ಯಾಂಗ್ ಕಟ್ಟಿ ಭೂಗತ ಚಟುವಟಿಕೆಗಳಲ್ಲಿ ತೊಡಗಿದ್ದ ಏಜಾಜ್ ಮಲೇಷಿಯಾ, ಯುನೈಟೆಡ್ ಸ್ಟೇಟ್ಸ್, ನೇಪಾಳ ಮುಂತಾದ ದೇಶಗಳಲ್ಲಿ ಕಾರ್ಯಾಚರಣೆಯಲ್ಲಿದ್ದ. ವಿಚಾರಣೆ ವೇಳೆ ಏಜಾಜ್ ಅನೇಕ ಹೆಸರುಗಳನ್ನು ಬಹಿರಂಗ ಪಡಿಸಿದ್ದಾನೆ ಎಂಬ ಮಾಹಿತಿಯಿದೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications