ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

7ನೇ ದಿನದ ಮುಂಗಾರು ಅಧಿವೇಶನ: ಸಂಪೂರ್ಣ ಮಾಹಿತಿ ಇಲ್ಲಿದೆ

|
Google Oneindia Kannada News

ನವದೆಹಲಿ, ಜುಲೈ 26: ಹಣದುಬ್ಬರ, ಜಿಎಸ್‌ಟಿ ಬೆಲೆ ಏರಿಕೆ, ಕಾಂಗ್ರೆಸ್ ಸಂಸದರ ಅಮಾನತು ಮತ್ತಿತರ ವಿಷಯಗಳ ಕುರಿತು ಪ್ರತಿಭಟನೆಗಳಿಂದಾಗಿ ಉಭಯ ಸದನಗಳು 7ನೇ ದಿನವೂ ಮುಂದೂಡಲ್ಪಟ್ಟಿವೆ.

ವಿಪಕ್ಷ ನಾಯಕರು ಸದನದ ಬಾವಿಗಿಳಿದು ಪ್ರತಿಭಟನೆಗೆ ಮುಂದಾಗುತ್ತಿದ್ದಂತೆ ಟಿಎಂಸಿ ಸಂಸದರಾದ ಸುಶ್ಮಿತಾ ದೇವ್, ಡಾ ಸಂತಾನು ಸೇನ್ ಮತ್ತು ಡೋಲಾ ಸೇನ್ ಸೇರಿದಂತೆ 19 ರಾಜ್ಯಸಭಾ ಸಂಸದರನ್ನು ವಾರದ ಉಳಿದ ಅವಧಿಗೆ ಅಮಾನತುಗೊಳಿಸಲಾಗಿದೆ.

ಕಳೆದ ವಾರ ಸಂಸತ್ತಿನ ಅಧಿವೇಶನ ಪ್ರಾರಂಭವಾದಾಗಿನಿಂದ, ಸದನಗಳಲ್ಲಿ ಬೆಲೆ ಏರಿಕೆಯ ಬಗ್ಗೆ ಚರ್ಚೆಗೆ ಒತ್ತಾಯಿಸಿ ಪ್ರತಿಪಕ್ಷಗಳು ಧರಣಿ ನಡೆಸುತ್ತಿವೆ. ದೇಶದಲ್ಲಿ ಹಣದುಬ್ಬರದ ವಿರುದ್ಧ ಪ್ರತಿಭಟಿಸಿದ್ದರಿಂದ ಉಭಯ ಸದನಗಳು ಈವರೆಗೆ ಮುಂದೂಡಲ್ಪಟ್ಟಿವೆ.

ಅಗತ್ಯ ಆಹಾರ ಸರಕುಗಳ ಮೇಲಿನ ಜಿಎಸ್‌ಟಿ, ಹೆಚ್ಚಿನ ಹಣದುಬ್ಬರ ಮತ್ತು ಬೆಲೆ ಏರಿಕೆ ಕುರಿತು ಚರ್ಚೆಗೆ ಒತ್ತಾಯಿಸಿ ವಿಪಕ್ಷ ನಾಯಕರು ಅಧಿವೇಶನದ ಬಾವಿಗಿಳಿದು ಪ್ರತಿಭಟಿಸಿದರು. ಅಧಿವೇಶನ ಆರಂಭದ 6 ನೇ ದಿನವೂ ಘೋಷಣೆಗಳಿಂದ ಕಲಾಪಕ್ಕೆ ಅಡ್ಡಿಪಡಿಸಿದ 4 ಕಾಂಗ್ರೆಸ್ ಸಂಸದರನ್ನು ಲೋಕಸಭೆಯಿಂದ ಅಮಾನತುಗೊಳಿಸಲಾಗಿದೆ. ಸೋಮವಾರ ಲೋಕಸಭೆಯಿಂದ ನಾಲ್ವರು ಕಾಂಗ್ರೆಸ್ ಸಂಸದರ ಅಮಾನತು ಕ್ರಮವನ್ನು ಪ್ರತಿಪಕ್ಷಗಳು ಇಂದು ವಿರೋಧಿಸಿವೆ. ಹೀಗಾಗಿ ಯಾವುದೇ ಮಹತ್ವದ ಚರ್ಚೆಗಳು ನಡೆದಿಲ್ಲ.

ರಾಜ್ಯಸಭೆಯಿಂದ 19 ಸಂಸದರ ಅಮಾನತು

ರಾಜ್ಯಸಭೆಯಿಂದ 19 ಸಂಸದರ ಅಮಾನತು

ಸದನದ ಒಳ ಪ್ರವೇಶಿಸಿ ಘೋಷಣೆ ಕೂಗಿದ ದುರ್ವರ್ತನೆಗಾಗಿ ಒಟ್ಟು 19 ಪ್ರತಿಪಕ್ಷದ ರಾಜ್ಯಸಭಾ ಸಂಸದರನ್ನು ವಾರದ ಉಳಿದ ಭಾಗಕ್ಕೆ ಅಮಾನತುಗೊಳಿಸಲಾಗಿದೆ. ಟಿಎಂಸಿ ಸಂಸದರಾದ ಸುಶ್ಮಿತಾ ದೇವ್, ಡಾ ಸಂತಾನು ಸೇನ್, ಡೋಲಾ ಸೇನ್ ಸೇರಿದಂತೆ ಇತರ ರಾಜ್ಯಸಭಾ ಸಂಸದರು ಅಮಾನತುಗೊಂಡಿದ್ದಾರೆ. ಹಕ್, ಅಬೀರ್ ಬಿಸ್ವಾಸ್, ಮೌಸಮ್ ನೂರ್, ಶಾಂತಾ ಛೆಟ್ರಿ, ಮೊಹಮ್ಮದ್ ಅಬ್ದುಲ್ಲಾ, ಎಎ ರಹೀಮ್, ಕನಿಮೊಳಿ ಅವರನ್ನೂ ಅಮಾನತುಗೊಳಿಸಲಾಗಿದೆ. ಸಂಸತ್ತಿನ ನಡವಳಿಕೆಯ ನಿಯಮ ಸಂಖ್ಯೆ 256 ಅನ್ನು ಉಲ್ಲಂಘಿಸಿದ್ದಕ್ಕಾಗಿ ಸಂಸದರನ್ನು ಅಮಾನತುಗೊಳಿಸಲಾಗಿದೆ.

ಸರ್ಕಾರದಿಂದ ಸಂಸತ್ತಿಗೆ ಮಾಹಿತಿ

ಸರ್ಕಾರದಿಂದ ಸಂಸತ್ತಿಗೆ ಮಾಹಿತಿ

ದೆಹಲಿ ಪೊಲೀಸರು ವರದಿ ಮಾಡಿದಂತೆ, 15 ಜುಲೈ 2022 ರಂತೆ ದೆಹಲಿ ಪೊಲೀಸ್ ಇಲಾಖೆಯಲ್ಲಿ ನಿಯೋಜಿಸಲಾದ ಮಂಜೂರಾದ ಸಾಮರ್ಥ್ಯ ಮತ್ತು ಸಿಬ್ಬಂದಿಯ ವಿವರಗಳು ಕ್ರಮವಾಗಿ 94,255 ಮತ್ತು 82,264 ಇದೆ. ಖಾಲಿ ಇರುವ ಹುದ್ದೆಗಳು 11,991 ಎಂದು ಗೃಹ ವ್ಯವಹಾರಗಳ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ಲೋಕಸಭೆಗೆ ಮಾಹಿತಿ ನೀಡಿದರು.

2017 ರಿಂದ 28 ವಲಸೆ ಕಾರ್ಮಿಕರ ಹತ್ಯೆ

2017 ರಿಂದ 28 ವಲಸೆ ಕಾರ್ಮಿಕರ ಹತ್ಯೆ

2017 ರಿಂದ 28 ವಲಸೆ ಕಾರ್ಮಿಕರನ್ನು ಭಯೋತ್ಪಾದಕರು ಕೊಂದಿದ್ದಾರೆ ಎಂದು ಗೃಹ ವ್ಯವಹಾರಗಳ ರಾಜ್ಯ ಸಚಿವ ನಿತ್ಯಾನಂದ ರೈ ಸಂಸತ್ತಿಗೆ ಮಾಹಿತಿ ನೀಡಿದರು. ಅವರಲ್ಲಿ ಇಬ್ಬರು ಮಹಾರಾಷ್ಟ್ರಕ್ಕೆ ಸೇರಿದವರು, ಒಬ್ಬರು ಜಾರ್ಖಂಡ್, ಏಳು ಮಂದಿ ಬಿಹಾರ ಮತ್ತು ಯಾರೂ ಮಧ್ಯಪ್ರದೇಶದವರು.

ನಿಷಿದ್ಧ ವಸ್ತುಗಳ ಕಳ್ಳಸಾಗಣೆಗೆ ತಡೆ

ನಿಷಿದ್ಧ ವಸ್ತುಗಳ ಕಳ್ಳಸಾಗಣೆಗೆ ತಡೆ

ಪಾಕಿಸ್ತಾನ ಮತ್ತು ಬಾಂಗ್ಲಾದೇಶದೊಂದಿಗಿನ ಭಾರತದ ಗಡಿಯಲ್ಲಿ ಪ್ರಾದೇಶಿಕ ನ್ಯಾಯವ್ಯಾಪ್ತಿಯನ್ನು ವಿಸ್ತರಿಸಿದ ನಂತರ ಡ್ರಗ್ಸ್ ಮತ್ತು ಇತರ ನಿಷಿದ್ಧ ವಸ್ತುಗಳ ಕಳ್ಳಸಾಗಣೆಯನ್ನು ತಡೆಯುವಲ್ಲಿ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಯಶಸ್ಸನ್ನು ಸಾಧಿಸಿದೆ ಎಂದು ಸರ್ಕಾರ ಮಂಗಳವಾರ ಹೇಳಿದೆ. ಪಂಜಾಬ್ ಮತ್ತು ಇತರ ಕೆಲವು ರಾಜ್ಯಗಳಲ್ಲಿನ ಪ್ರಾದೇಶಿಕ ನ್ಯಾಯವ್ಯಾಪ್ತಿಯು ತನ್ನ ಕರ್ತವ್ಯಗಳನ್ನು ಹೆಚ್ಚು ಪರಿಣಾಮಕಾರಿಯಾಗಿ ನಿರ್ವಹಿಸಲು ಗಡಿ ಕಾವಲು ಪಡೆಗೆ ಅಧಿಕಾರ ನೀಡುವ ಗುರಿಯನ್ನು ಹೊಂದಿದೆ. ಡ್ರೋನ್‌ಗಳು ಮತ್ತು ಮಾನವರಹಿತ ವೈಮಾನಿಕ ವಾಹನಗಳಂತಹ ತಂತ್ರಜ್ಞಾನಗಳ ಬಳಕೆಯ ಹಿನ್ನೆಲೆಯಲ್ಲಿ ಈ ಕ್ರಮವು ಸಹಾಯಕವಾಗಿದೆ. ಮಾದಕ ದ್ರವ್ಯ ಮತ್ತು ನಕಲಿ ಭಾರತೀಯ ಕರೆನ್ಸಿ ನೋಟುಗಳ ಕಳ್ಳಸಾಗಣೆ ದೇಶವಿರೋಧಿ ಶಕ್ತಿಗಳಿಂದ ದೇಶವನ್ನು ಕಾಪಾಡಲು ಬಿಎಸ್‌ಎಫ್ ಕಣ್ಗಾವಲು ಹಾಗೂ ಶಸ್ತ್ರಾಸ್ತ್ರಗಳ ಬಳಕೆಗೆ ಸಹಾಯವಾಗಿದೆ.

English summary
Opposition leaders protested against the price hike on the 7th day of the Monsoon session of Parliament. Here is the complete information.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X