ಅಮೆರಿಕ ಭಾರತದಲ್ಲಿ 200 ವರ್ಷಗಳ ಕಾಲ ಆಳ್ವಿಕೆ ನಡೆಸಿತ್ತು: ತೀರಥ್ ಸಿಂಗ್
ಡೆಹ್ರಾಡೂನ್, ಮಾರ್ಚ್ 22: ಉತ್ತರಾಖಂಡ್ ಮುಖ್ಯಮಂತ್ರಿ ತೀರಥ್ ಸಿಂಗ್ ರಾವತ್ ನೀಡಿದ್ದ ಹರಿದ ಜೀನ್ಸ್ ವಿವಾದಾತ್ಮಕ ಹೇಳಿಕೆ ಬಳಿಕ ಮತ್ತೊಂದು ಹೇಳಿಕೆ ಸುದ್ದಿಮಾಡುತ್ತಿದೆ.
ಅಮೆರಿಕವು ಭಾರತದಲ್ಲಿ 200 ವರ್ಷಗಳ ಕಾಲ ಆಳ್ವಿಕೆ ನಡೆಸಿದ್ದಕ್ಕಾಗಿ ಇಂಗ್ಲೆಂಡ್ ಬದಲು ಅಮೆರಿಕವನ್ನು ದೂರಿದ್ದಾರೆ. ನಮ್ಮನ್ನು 200 ವರ್ಷಗಳ ಕಾಲ ಗುಲಾಮರನ್ನಾಗಿಸಿಕೊಂಡಿದ್ದ ಅಮೆರಿಕ ಈಗ ವಿಶ್ವವನ್ನೇ ಆಳುತ್ತಿದೆ, ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಹೆಣಗಾಡುತ್ತಿದೆ ಎಂದು ರಾವತ್ ಹೇಳಿದ್ದಾರೆ.
ಇಂತಹ ಪರಿಸ್ಥಿತಿಯಲ್ಲಿ ಭಾರತದಲ್ಲಿ ನರೇಂದ್ರ ಮೋದಿ ಬದಲು ಬೇರೆ ಯಾರಾದರೂ ಪ್ರಧಾನಿಯಾಗಿದ್ದರೆ ದೇಶದ ಸ್ಥಿತಿ ಏನಾಗುತ್ತಿತ್ತೋ, ನಮ್ಮ ಪರಿಸ್ಥಿತಿ ಮತ್ತಷ್ಟು ಚಿಂತಾಜನಕವಾಗುತ್ತಿತ್ತು ಎಂದರು.

ನಾವು ಅವರ ಸಲಹೆ ಪಾಲನೆ ಮಾಡಿಲ್ಲ, ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಕೆ, ಕೈಗಳನ್ನು ಆಗಾಗ ತೊಳೆದುಕೊಳ್ಳುವುದು, ಸಾಮಾಜಿಕ ಅಂತರ ಪಾಲನೆ ಸೇರಿದಂತೆ ಹಲವು ವಿಚಾರಗಳಲ್ಲಿ ಅವರ ಸಲಹೆಗಳನ್ನು ಕೆಲವು ಜನರು ಮಾತ್ರ ಪಾಲಿಸಿದ್ದಾರೆ.
ಕೊರೊನಾ ಪ್ರಕರಣಗಳ ನಿರ್ವಹಣೆ ವಿಚಾರದಲ್ಲಿ ಭಾರತವನ್ನು ಅಮೆರಿಕ ಜತೆಗೆ ಹೋಲಿಕೆ ಮಾಡಿದ್ದಾರೆ. ಬೇರೆ ದೇಶಗಳಿಗೆ ಹೋಲಿಸಿದರೆ ಭಾರತವು ಕೊರೊನಾ ಪಿಡುಗಳನ್ನು ಪರಿಣಾಮಕಾರಿಯಾಗಿ ನಿಗ್ರಹಿಸಿದೆ. ಅಮೆರಿಕ ಪರದಾಡುತ್ತಿದೆ ಎಂದರು.
ಈ ವಾರದ ಆರಂಭದಲ್ಲಿ ತೀರಥ್ ಸಿಂಗ್ ಅವರು ಹರಿದಿ ಜೀನ್ಸ್ ಬಗ್ಗೆ ಆಕ್ಷೇಪಕಾರಿ ಹೇಳಿಕೆ ನಿಡಿದ್ದರು. ಹರಿದ ಜೀನ್ಸ್ ಧರಿಸಿದ ಮಹಿಳೆಯೊಬ್ಬರು ಸರ್ಕಾರೇತರ ಸಂಸ್ಥೆ ನಡೆಸುವುದನ್ನು ಕಂಡು ಬೇಸರವಾಯಿತು, ಆಕೆ ಸಮಾಜಕ್ಕೆ ಅದೆಂಥಾ ಮಾದರಿ ನೀಡುತ್ತಿರಬಹುದು ಎಂದು ಲೇವಡಿ ಮಾಡಿದ್ದರು.
ಈ ಮಹಿಳೆ ಸಮಾಜದ ಮಧ್ಯೆ ನಿಂತು ಜನರ ಸಮಸ್ಯೆಗಳನ್ನು ಪರಿಹರಿಸಲು ಸಾಧ್ಯವೇ?, ಸಮಾಜಕ್ಕೆ ಮತ್ತು ನಮ್ಮ ಮಕ್ಕಳಿಗೆ ಈಕೆ ಎಂಥಾ ಸಂದೇಶ ನೀಡುತ್ತಿರಬಹುದು, ಮನೆಯಿಂದಲೇ ಎಲ್ಲವೂ ಶುರುವಾಗುತ್ತದೆ. ನಾವು ಏನು ಮಾಡುತ್ತೀವೋ ನಮ್ಮ ಮಕ್ಕಳು ಕೂಡ ಅದನ್ನೇ ಕಲಿಯುತ್ತಾರೆ ಎಂದು ಹೇಳಿದ್ದರು.
-
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು?












Click it and Unblock the Notifications