ಮಲ್ಲಿಕಾರ್ಜುನ ಖರ್ಗೆ ಬಣ್ಣದ ಅವಹೇಳನ: ಆರಗ ಜ್ಞಾನೇಂದ್ರ ಅವರನ್ನು ನಿಮ್ಹಾನ್ಸ್ ಕಳಿಸೋಣ ಎಂದ ಡಿಕೆಶಿ
ದೆಹಲಿ, ಆಗಸ್ಟ್ 02: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ಕೊಟ್ಟಿರುವ ಬಿಜೆಪಿ ಮುಖಂಡ ಆರಗ ಜ್ಞಾನೇಂದ್ರ ಅವರನ್ನು ನಿಮ್ಹಾನ್ಸ್ಗೆ ಕಳಿಸೋಣ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ.
ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುವ ಸಂದರ್ಭದಲ್ಲಿ ಕಸ್ತೂರಿ ರಂಗನ್ ವರದಿ ಅನುಷ್ಠಾನ ಸಂಬಂಧ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡುವಾಗ ಖರ್ಗೆ ಅವರ ಬಣ್ಣ ಮತ್ತು ತಲೆಗೂದಲು ಬಗ್ಗೆ ಆರಗ ಜ್ಞಾನೇಂದ್ರ ಅವರ ಅವಹೇಳನ ಹೇಳಿಕೆಯ ವಿರುದ್ಧ ಡಿ.ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು, ಬೆಂಗಳೂರಲ್ಲಿ ನಿಮಾನ್ಸ್ ಆಸ್ಪತ್ರೆ ಉತ್ತಮವಾಗಿದೆ. ಅದು ಫಸ್ಟ್ಕ್ಲಾಸ್ ಆಗಿದೆ. ಅಲ್ಲಿಗೆ ಆರಗ ಜ್ಞಾನೇಂದ್ರ ಅವರನ್ನು ಕಳುಹಿಸೋಣ ಎಂದರು.

ದೆಹಲಿಯಲ್ಲಿ ಕಾಂಗ್ರೆಸ್ ನಾಯಕರ ಸಭೆ ಬಗ್ಗೆ ಮಾತನಾಡಿದ ಅವರು, ಮಂತ್ರಿಗಳು ಸೇರಿ ಕರ್ನಾಟಕದ ಸುಮಾರು 50 ಮಂದಿ ನಾಯಕರ ಸಭೆಯನ್ನು ವರಿಷ್ಠರು ಕರೆದಿದ್ದಾರೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಅವರು ಎಲ್ಲ ರಾಜ್ಯದ ಮುಖಂಡರ ಸಭೆ ನಡೆಸುತ್ತಿದ್ದಾರೆ. ಕರ್ನಾಟಕದ ಸಭೆ ವಿಶೇಷವೇನಲ್ಲ ಎಂದು ತಿಳಿಸಿದರು.
ಇನ್ನು ಹಿಂದೆಯೇ ಬೆಂಗಳೂರಲ್ಲಿ ಸಭೆ ನಡೆಯಬೇಕಿತ್ತು. ರಾಹುಲ್ ಗಾಂಧಿ ಅವರ ಜತೆ ಎಲ್ಲ ಮಂತ್ರಿಗಳ ಫೋಟೋ ಸೆಷನ್ ಕೂಡ ಇತ್ತು. ಉಮಾನ್ ಚಾಂಡಿ ಅವರ ನಿಧನದ ಹಿನ್ನೆಲೆಯಲ್ಲಿ ಆ ಸಭೆ ರದ್ದಾಗಿತ್ತು. ಅದು ಈಗ ದೆಹಲಿಯಲ್ಲಿ ನಡೆಯುತ್ತಿದೆ. ಸಚಿವರ ಪ್ರತ್ಯೇಕ ಸಭೆ ಕೂಡ ನಡೆಯಲಿದೆ. ಲೋಕಸಭೆ ಚುನಾವಣೆ, ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಬಗ್ಗೆ ಚರ್ಚೆ ಆಗಲಿದೆ ಎಂದರು.

ಬೆಂಗಳೂರು ವಾಹನ ಸಂಚಾರ ದಟ್ಟಣೆ ನಿವಾರಣೆಗೆ ಸುರಂಗ ರಸ್ತೆ, ಮೇಲು ಸೇತುವೆ ರಸ್ತೆ ನಿರ್ಮಾಣ ಸಂಬಂಧ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ಜೊತೆ ಚರ್ಚೆ ಮಾಡುವುದಾಗಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಿಳಿಸಿದರು.
-
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
War Updates: ಇರಾನ್ಗೆ ಟ್ರಂಪ್ ವಾರ್ನಿಂಗ್: ತೈಲ ಮಾರ್ಗ ಬಂದ್ ಮಾಡಿದರೆ ದೇಶವೇ ಸರ್ವನಾಶ, ಇಂದಿನ ಪ್ರಮುಖಾಂಶಗಳು -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
ಮುದ್ದೇನಹಳ್ಳಿ ಸತ್ಯಸಾಯಿ ಗ್ರಾಮದಲ್ಲಿ CSR ರಾಷ್ಟ್ರೀಯ ಸಮಾವೇಶ: ವಿಕಸಿತ ಭಾರತ ಚರ್ಚೆ -
ಎಲ್ಪಿಜಿ ಸಿಲಿಂಡರ್ ಬೆಲೆ ಏರಿಕೆ ಬೆನ್ನಲ್ಲೇ ಬೆಂಗಳೂರಿನ ಹೋಟೆಲ್ಗಳಲ್ಲಿ ಆಹಾರ ದರ ಏರಿಸಲು ಚಿಂತನೆ -
ಇಸ್ರೇಲ್-ಯುಎಸ್ ಜಂಟಿ ದಾಳಿ ಅಬ್ಬರ: ಇರಾನ್ಗೆ ಉತ್ತರಾಧಿಕಾರಿ ನೇಮಕ, ಇಂದಿನ ಪ್ರಮುಖಾಂಶಗಳು ಇಲ್ಲಿವೆ -
ಐಪಿಎಲ್ 2026ಕ್ಕೆ ಮುಹೂರ್ತ ಫಿಕ್ಸ್: ಇಲ್ಲಿದೆ ಮಾಹಿತಿ












Click it and Unblock the Notifications