ಕೌರ್ ಗೆ ಬೆದರಿಕೆ ಹಾಕಿದವರನ್ನು ಬಂಧಿಸಲು ದೆಹಲಿ ಪೊಲೀಸರಿಗೆ ಮಹಿಳಾ ಆಯೋಗ ಸೂಚನೆ
ಭಾರತೀಯ ಜನತಾ ಪಾರ್ಟಿಯ ವಿದ್ಯಾರ್ಥಿ ಸಂಘಟನೆಯಾದ ಅಖಿಲ ಭಾರತೀ ವಿದ್ಯಾರ್ಥಿ ಪರಿಷತ್ ವಿರುದ್ಧ ಆನ್ ಲೈನ್ ನಲ್ಲಿ ಆಂದೋಲನ ಆರಂಭಿಸಿದ್ದ ವಿದ್ಯಾರ್ಥಿನಿ ಗುರ್ಮೆಹರ್ ಕೌರ್.
ನವದೆಹಲಿ, ಫೆಬ್ರವರಿ 27: ಭಾರತೀಯ ಜನತಾ ಪಾರ್ಟಿಯ (ಎಬಿವಿಪಿ) ವಿದ್ಯಾರ್ಥಿ ಸಂಘಟನೆಯಾದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ವಿರುದ್ಧ ಅಂತರ್ಜಾಲದಲ್ಲಿ ಆಂದೋಲನ ನಡೆಸಿದ್ದ ನವದೆಹಲಿಯ ಲೇಡಿ ಶ್ರೀರಾಮ್ ಕಾಲೇಜಿನ ವಿದ್ಯಾರ್ಥಿನಿ ಗುರ್ಮೆಹರ್ ಕೌರ್ ಅತ್ಯಾಚಾರ ಬೆದರಿಕೆಯೊಡ್ಡಿದ್ದ ದುಷ್ಕರ್ಮಿಗಳನ್ನೂ ಕೂಡಲೇ ಬಂಧಿಸುವಂತೆ ದೆಹಲಿ ಮಹಿಳಾ ಆಯೋಗವು (ಡಿಡಬ್ಲ್ಯೂಸಿ), ದೆಹಲಿ ಪೊಲೀಸರಿಗೆ ಸೂಚನೆ ನೀಡಿದೆ.
ಇತ್ತೀಚೆಗೆ, ಸಾಮಾಜಿಕ ಜಾಲತಾಣವೊಂದರಲ್ಲಿ 'ಎಬಿವಿಪಿಗೆ ತಾನು ಹೆದರುವುದಿಲ್ಲ' ಎಂದು ಬರೆದುಕೊಂಡಿದ್ದ ಕಾರ್ಗಿಲ್ ಯುದ್ಧದ ಹುತಾತ್ಮ ಕ್ಯಾ.ಮನದೀಪ್ ಸಿಂಗ್ ಅವರ ಪುತ್ರಿ ಗುರ್ಮೆಹರ್ ಕೌರ್ ವಿವಾದಕ್ಕೆ ಕಾರಣವಾಗಿದ್ದಾರೆ. ಅವರ ಈ ನಡೆ ವಿರುದ್ಧ ಅಂತರ್ಜಾಲದಲ್ಲಿ ಅನೇಕರು ಟೀಕೆಗಳನ್ನು ಮಾಡಿದ್ದರೆ, ಮತ್ತೆ ಕೆಲವರು ಅತ್ಯಾಚಾರ ಮಾಡುವುದಾಗಿ ಕೌರ್ ಅವರಿಗೆ ಬೆದರಿಕೆ ಹಾಕಿದ್ದರು.[ಕಾರ್ಗಿಲ್ ಹುತಾತ್ಮ ಯೋಧನ ಪುತ್ರಿಗೆ ಅತ್ಯಾಚಾರದ ಬೆದರಿಕೆ!]

ಈ ಹಿನ್ನೆಲೆಯಲ್ಲಿ, ಕೌರ್ ಅವರು, ದೆಹಲಿ ಮಹಿಳಾ ಆಯೋಗದ ಮೊರೆ ಹೋಗಿದ್ದು, ತಮಗೆ ಸಾಮಾಜಿಕ ಜಾಲತಾಣದಲ್ಲಿ ಬಂದ ಬೆದರಿಕೆಗಳ ಬಗ್ಗೆ ದೂರು ನೀಡಿದ್ದು ಸಾಮಾಜಿಕ ಜಾಲತಾಣದಲ್ಲಿ ಬಂದ ಸ್ಕ್ರೀನ್ ಶಾಟ್ ಗಳನ್ನು ಸಾಕ್ಷ್ಯವಾಗಿ ನೀಡಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿರುವ ಆಯೋಗ, ದೆಹಲಿ ಪೊಲೀಸರಿಗೆ ಶೀಘ್ರವಾಗಿ ಆರೋಪಿಗಳನ್ನು ಬಂಧಿಸುವಂತೆ ಸೂಚಿಸಿದೆ.[ಗುರ್ಮೆಹರ್ ಕೌರ್, ಪಾಕಿಸ್ತಾನ ಎಷ್ಟು ಭಾರತೀಯರನ್ನು ಕೊಂದಿದೆ ಗೊತ್ತಾ?]
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications