ಡಿಡಿಸಿಎ ಭ್ರಷ್ಟಾಚಾರ: ವಿಡಿಯೋ ಸಾಕ್ಷ್ಯ ಬಹಿರಂಗ
ನವದೆಹಲಿ, ಡಿ. 20: ದಿಲ್ಲಿ ಮತ್ತು ಜಿಲ್ಲಾ ಕ್ರಿಕೆಟ್ ಸಂಸ್ಥೆ (ಡಿಡಿಸಿಎ) ಹಗರಣ ಸಂಬಂಧಿಸಿದಂತೆ ವಿಡಿಯೋ ಸಾಕ್ಷ್ಯವನ್ನು ಮಾಜಿ ಕ್ರಿಕೆಟರ್,ಬಿಜೆಪಿ ಸಂಸದ ಕೀರ್ತಿ ಅಜಾದ್ ಅವರು ಭಾನುವಾರ ಸಂಜೆ ಸುದ್ದಿಗೋಷ್ಠಿಯಲ್ಲಿ ಬಹಿರಂಗ ಪಡಿಸಿದ್ದಾರೆ. ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಡಿಡಿಸಿಎ ಅಧ್ಯಕ್ಷರಾಗಿದ್ದ ಕಾಲದಲ್ಲಿ ಭಾರಿ ಅವ್ಯವಹರ ನಡೆದಿದೆ ಎಂದು ಆರೋಪಿಸಿದ್ದಾರೆ.
ಬಿಜೆಪಿ ಸಂಸದ ಹಾಗೂ ಮಾಜಿ ಕ್ರಿಕೆಟಿಗ ಕೀರ್ತಿ ಆಜಾದ್ ಮತ್ತು ಬಿಷನ್ ಸಿಂಗ್ ಬೇಡಿ ಅವರು ಸುದ್ದಿಗೋಷ್ಠಿ ಉದ್ದೇಶ ಹಾಗೂ ಡಿಡಿಸಿಎ ಅವ್ಯವಹಾರದ ಬಗ್ಗೆ ವಿವರಿಸಿದರು. ನಂತರ ವಿಕಿಲೀಕ್ಸ್ ಇಂಡಿಯಾ ನೆರವಿನಿಂದ ಸಂಗ್ರಹಿಸಲಾದ ವಿಡಿಯೋ ಸಾಕ್ಷ್ಯವನ್ನು ಬಹಿರಂಗ ಪಡಿಸಲಾಯಿತು.

ಕೀರ್ತಿ ಅಜಾದ್ ಅವರ ಸುದ್ದಿಗೋಷ್ಠಿ ಮುಖ್ಯಾಂಶಗಳು:
* ಪ್ರಧಾನಿ ನರೇಂದ್ರ ಮೋದಿ ಅವರು ಭ್ರಷ್ಟಾಚಾರ ವಿರುದ್ಧವಾಗಿ ಕೈಗೊಂಡಿರುವ ಕ್ರಮಗಳನ್ನು ನಾನು ಶ್ಲಾಘಿಸುತ್ತೇನೆ. ಅದರಂತೆ ನಮ್ಮ ಸುದ್ದಿಗೋಷ್ಠಿ ಉದ್ದೇಶ ಕೂಡಾ ಭ್ರಷ್ಟಾಚಾರ ವಿರುದ್ಧವೇ ಆಗಿದ್ದು, ಯಾರೊಬ್ಬರ ವಿರುದ್ಧ ವೈಯಕ್ತಿಕ ದ್ವೇಷದಿಂದ ಮಾಹಿತಿ ಬಹಿರಂಗಪಡಿಸುತ್ತಿಲ್ಲ ಎಂದರು.
* ಸುಮಾರು 28 ನಿಮಿಷಗಳ ವಿಡಿಯೋ ಐದು ಭಾಗಗಳಲ್ಲಿದ್ದು, ಡಿಡಿಸಿಎ ಉಪ ಗುತ್ತಿಗೆ, ಅವ್ಯವಹಾರಗಳ ಬಗ್ಗೆ ವಿವರಣೆ ಇದೆ.
* ದಿನವೊಂದಕ್ಕೆ 16 ಸಾವಿರನಂತೆ ಲ್ಯಾಪ್ ಟಾಪ್ ಹಾಗೂ 3 ಸಾವಿರ ರು ನಂತೆ ಪ್ರಿಂಟರ್ ಗಳನ್ನು ಡಿಡಿಸಿಎ ಬಾಡಿಗೆಗೆ ಪಡೆದುಕೊಂಡಿತ್ತು.
* Wikileaks4India ನಿಂದ ಖಚಿತ ಮಾಹಿತಿ ಪಡೆದು ಈ ವಿಡಿಯೋ ತಯಾರಿಸಲಾಗಿದೆ. ಇದರಲ್ಲಿ ನಕಲಿ ಕಂಪನಿಗಳು, ಉಪ ಗುತ್ತಿಗೆ ಅಕ್ರಮದ ಬಗ್ಗೆ ಹೇಳಲಾಗಿದೆ.
DDCA gave money to a lot of companies and nature of work was never told: Kirti Azad pic.twitter.com/Y7neJ59LVu
— ANI (@ANI_news) ಡಿಸೆಂಬರ್ 20, 2015 * ಸ್ವಜನ ಪಕ್ಷಪಾತ, ಕೋರ್ಟ್ ಆದೇಶದ ಉಲ್ಲಂಘನೆ, ಟೆಂಡರ್ ನಲ್ಲಿ ಗೋಲ್ ಮಾಲ್, ಬೋಗಸ್ ಕಂಪನಿಗಳ ಸೃಷ್ಟಿ ಎಲ್ಲವೂ ಜೇಟ್ಲಿ ಅವರ ಕಾಲದಲ್ಲಿ ನಡೆದಿದೆ.
* ಕೋಟಿಗಟ್ಟಲೆ ಪಡೆದ ಕಂಪನಿಗಳಿಗೆ ಗುತ್ತಿಗೆ ಕೆಲಸ ನೀಡಿದ ಬಗ್ಗೆ ದಾಖಲೆಗಳೇ ಇಲ್ಲ
* ಸುಮಾರು 14 ನಕಲಿ ಕಂಪನಿಗಳ ವಿರುದ್ಧ ಭ್ರಷ್ಟಾಚಾರ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ್ದಾರೆ.
ಎಎಪಿಯಿಂದ ಸ್ವಾಗತ: ವಿತ್ತ ಸಚಿವ ಅರುಣ್ ಜೇಟ್ಲಿ ಅವರ ಕಾಲದಲ್ಲಿ ನಡೆದ ಭ್ರಷ್ಟಾಚಾರದ ಬಗ್ಗೆ ಸಾಕಷ್ಟು ದಾಖಲೆಯನ್ನು ಕೀರ್ತಿ ಅಜಾದ್ ಅವರು ಒದಗಿಸಿದ್ದಾರೆ. ಇದನ್ನು ನಾವು ಕ್ರಿಕೆಟ್ ನ 'ಕಾಮನ್ ವೆಲ್ತ್ ಗೇಮ್ಸ್' ಹಗರಣ ಎನ್ನಬಹುದು. ನೈತಿಕ ಹೊಣೆ ಹೊತ್ತು ಅರುಣ್ ಜೇಟ್ಲಿ ಅವರು ತಮ್ಮ ಹುದ್ದೆ ತೊರೆಯುವುದು ಒಳ್ಳೆಯದು ಎಂದು ಎಎಪಿ ಮುಖಂಡ ಕುಮಾರ್ ವಿಶ್ವಾಸ್ ಹೇಳಿದ್ದಾರೆ. (ಒನ್ ಇಂಡಿಯಾ ಸುದ್ದಿ)
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications