ಲಸಿಕೆ ಪಡೆದ ನಂತರದ ಮರಣಕ್ಕೆ ಲಸಿಕೆಯನ್ನು ಹೊಣೆ ಮಾಡಬೇಡಿ; ಕೇಂದ್ರ
ನವದೆಹಲಿ, ಜೂನ್ 15: ಕೊರೊನಾ ಲಸಿಕೆ ಹಾಕಿಸಿಕೊಂಡ ನಂತರದ ದಿನಗಳಲ್ಲಿ ವ್ಯಕ್ತಿಯು ಆಸ್ಪತ್ರೆ ಸೇರಿದರೆ ಅಥವಾ ಸಾವನ್ನಪ್ಪಿದರೆ ಅದಕ್ಕೆ ಲಸಿಕೆ ಕಾರಣ ಎಂದು ಊಹಿಸಿಕೊಳ್ಳಬಾರದು ಎಂದು ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಸಚಿವಾಲಯ ಮಂಗಳವಾರ ಹೇಳಿದೆ.
ಕೊರೊನಾ ಲಸಿಕೆ ಪಡೆದುಕೊಂಡ ನಂತರ ವ್ಯಕ್ತಿಯ ಆರೋಗ್ಯದಲ್ಲಿ ಏರುಪೇರಾಗುವ ಕುರಿತು ಹಾಗೂ ಲಸಿಕೆ ಪಡೆದ ನಂತರದ ಮರಣ ಪ್ರಮಾಣದ ಕುರಿತು ಕೆಲವು ಮಾಧ್ಯಮಗಳು ವರದಿ ಮಾಡಿವೆ. ಜನವರಿ 16, 2021 ಇಂದ ಜೂನ್ 7, 2021 ತವರೆಗೆ 488 ಸಾವುಗಳು ಕೊರೊನಾ ನಂತರದ ಸಮಸ್ಯೆಯಿಂದ ಸಂಭವಿಸಿದ್ದು, ಇವರೆಲ್ಲರೂ ಲಸಿಕೆ ಪಡೆದಿದ್ದರು ಎಂಬುದಾಗಿ ತಿಳಿಸಿವೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ನೀತಿ ಆಯೋಗ ಸದಸ್ಯ ವಿ.ಕೆ. ಪೌಲ್, "ಲಸಿಕೆ ಪಡೆದ ನಂತರ ದೇಹದಲ್ಲಿ ಕೆಲವು ಬದಲಾವಣೆಗಳಾಗುವುದು ಸಹಜ. ಹಾಗೆಂದು ಲಸಿಕೆ ಕುರಿತು ಸುಳ್ಳು ಮಾಹಿತಿಗಳನ್ನು ಹರಡಬೇಡಿ. ಅಪೂರ್ಣ ಮಾಹಿತಿ ಇಂಥ ವರದಿಗಳಿಗೆ ಆಧಾರ. ಲಸಿಕೆಗಳ ಕುರಿತು ಜ್ಞಾನವಿಲ್ಲದಿರುವುದು ಸುಳ್ಳು ಸುದ್ದಿ ಹರಡಲು ಕಾರಣ," ಎಂದು ಹೇಳಿದ್ದಾರೆ.

ಇದುವರೆಗೂ ದೇಶದಲ್ಲಿ 23.5 ಕೋಟಿ ಮಂದಿಗೆ ಕೊರೊನಾ ಲಸಿಕೆಗಳನ್ನು ನೀಡಲಾಗಿದ್ದು, ಲಸಿಕೆಯಿಂದ ಸಾವು ಸಂಭವಿಸಿರುವ ಸಾಧ್ಯತೆ 0.0002% ಮಾತ್ರ ಇದೆ ಎಂದು ಪೌಲ್ ಹೇಳಿದ್ದಾರೆ.
ಭಾರತದಲ್ಲಿ ಪ್ರತಿ ಗಂಟೆಗೆ 1.45 ಲಕ್ಷಕ್ಕೂ ಹೆಚ್ಚು ಜನರಿಗೆ ಕೊರೊನಾ ಲಸಿಕೆ ವಿತರಣೆ ಮಾಡಲಾಗುತ್ತಿದೆ. ಕೊರೊನಾ ಲಸಿಕೆ ವಿತರಣೆ ಅಭಿಯಾನ ಆರಂಭವಾಗಿ 150 ದಿನಗಳಲ್ಲಿ 25,87,13,321 ಫಲಾನುಭವಿಗಳಿಗೆ ಲಸಿಕೆ ನೀಡಲಾಗಿದೆ ಎಂದು ಸೋಮವಾರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ಸೋಮವಾರ ರಾತ್ರಿ 7 ಗಂಟೆ ವೇಳೆಗೆ 35,96,462 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಈ ಪೈಕಿ 31,84,503 ಜನರಿಗೆ ಮೊದಲ ಡೋಸ್ ಹಾಗೂ 4,11,959 ಫಲಾನುಭವಿಗಳಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ ಎಂದು ತಿಳಿಸಿದೆ.
ದೇಶದಲ್ಲಿ ಜನವರಿ 16ರಂದು ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಮಾರ್ಚ್ 1ರಂದು ಎರಡನೇ ಹಂತದಲ್ಲಿ ಆರೋಗ್ಯ ಸಮಸ್ಯೆ ಹೊಂದಿರುವ 45 ವರ್ಷ ಮೇಲ್ಪಟ್ಟ ಹಾಗೂ 60 ವರ್ಷದ ಮೇಲ್ಪಟ್ಟ ಪ್ರತಿಯೊಬ್ಬರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಏಪ್ರಿಲ್ 1ರಂದು 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊವಿಡ್-19 ಲಸಿಕೆ ವಿತರಣೆ ಶುರು ಮಾಡಲಾಗಿತ್ತು. ಮೂರನೇ ಹಂತದಲ್ಲಿ ಮೇ 1ರಿಂದ 18-44 ವಯೋಮಾನದವರಿಗೆ ಲಸಿಕೆ ನೀಡುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿತ್ತು.
-
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು -
Karnataka Weather: ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ಬೇಗೆ -
ದುಬೈ ವಿಮಾನ ನಿಲ್ದಾಣಕ್ಕೆ ನುಗ್ಗಿದ ಡ್ರೋನ್, ಎಲ್ಲಾ ವಿಮಾನ ಹಾರಾಟ ದಿಢೀರ್ ಸ್ಥಗಿತ | Operation Roaring Lion -
LPG Price Hike: ಗೃಹಬಳಕೆ ಎಲ್ಪಿಜಿ ಸಿಲಿಂಡರ್ ಬೆಲೆ 60 ರೂಪಾಯಿ ಏರಿಕೆ, ವಾಣಿಜ್ಯ ಸಿಲಿಂಡರ್ ದರ 115 ರೂಪಾಯಿ ಹೆಚ್ಚಳ -
SWR: ಬೆಂಗಳೂರಿನಿಂದ ಇಲ್ಲಿಗೆ ಮಾ.10ರಿಂದ ವಿಶೇಷ ರೈಲುಗಳ ಸಂಚಾರ, ವೇಳಾಪಟ್ಟಿ ಹೀಗಿದೆ












Click it and Unblock the Notifications