Get Updates
Get notified of breaking news, exclusive insights, and must-see stories!

ಡೆಂಗ್ಯೂ ರೋಗಿಗೆ ಪ್ಲೇಟ್‌ಲೆಟ್‌ ಬದಲು ಮೋಸಂಬಿ ಜ್ಯೂಸ್ ಏರಿಸಿದ ವೈದ್ಯ! ರೋಗಿ ಸಾವು

ಲಕ್ನೋ ಕ್ಟೋಬರ್ 21: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ಖಾಸಗಿ ಆಸ್ಪತ್ರೆಯೊಂದರಲ್ಲಿ ರಕ್ತದ ಪ್ಲೇಟ್‌ಲೆಟ್‌ಗಳ ಬದಲಿಗೆ ಹಣ್ಣಿನ ರಸವನ್ನು ತುಂಬಿಸಿ ಡೆಂಗ್ಯೂ ರೋಗಿಯೊಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ. ಜಿಲ್ಲಾಡಳಿತದ ಪ್ರಾಥಮಿಕ ತನಿಖೆಯ ನಂತರ ಆಸ್ಪತ್ರೆಯ ಅಧಿಕಾರಿಗಳ ಲೋಪ ಬಹಿರಂಗಗೊಂಡಿದೆ. ನಂತರ ಆಸ್ಪತ್ರೆಯನ್ನು ಸೀಲ್ ಮಾಡಲಾಗಿದೆ. ಇದಕ್ಕೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ರೋಗಿಯ ಕುಟುಂಬ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದೆ.

32 ವರ್ಷದ ರೋಗಿಯ ಸಂಬಂಧಿಕರಿಗೆ ಪ್ರಯಾಗ್‌ರಾಜ್‌ನಲ್ಲಿರುವ (ಹಿಂದೆ ಅಲಹಾಬಾದ್) ಗ್ಲೋಬಲ್ ಆಸ್ಪತ್ರೆ ಮತ್ತು ಟ್ರಾಮಾ ಸೆಂಟರ್‌ನಲ್ಲಿ 'ಪ್ಲಾಸ್ಮಾ' ಎಂದು ಗುರುತಿಸಲಾದ ಚೀಲದಲ್ಲಿ ಮೋಸಂಬಿ ರಸವನ್ನು ಸರಬರಾಜು ಮಾಡಲಾಗಿದೆ. ರೋಗಿಯ ಕುಟುಂಬವು ಆಸ್ಪತ್ರೆಯಿಂದ ಸರಬರಾಜು ಮಾಡಿದ ಚೀಲಗಳಲ್ಲಿ ಒಂದನ್ನು ರೋಗಿಗೆ ನೀಡಿದ ಬಳಿಕ ಅವನ ಸ್ಥಿತಿ ಹದಗೆಟ್ಟಿದೆ ಎಂದು ಆರೋಪಿಸಿದ್ದಾರೆ. ರೋಗಿಯನ್ನು ಎರಡನೇ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಆಗ ಅಲ್ಲಿ ಅವರು ನಿಧನರಾದರು. ಈ ಎರಡನೇ ಆಸ್ಪತ್ರೆಯ ವೈದ್ಯರು ಈ 'ಪ್ಲೇಟ್‌ಲೆಟ್' ಬ್ಯಾಗ್ ನಕಲಿ. ಇದರಲ್ಲಿ ರಾಸಾಯನಿಕಗಳು ಮತ್ತು ಸಿಹಿ ಅಥವಾ ಮೋಸಂಬಿ ರಸದ ಮಿಶ್ರಣವನ್ನು ತುಂಬಿಸಲಾಗಿದೆ ಎಂದು ಹೇಳಿದರು ಎಂದು ಕುಟುಂಬ ತಿಳಿಸಿದೆ.

ಸಿಬ್ಬಂದಿ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ

ಸಿಬ್ಬಂದಿ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ

ಆಸ್ಪತ್ರೆ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕುಟುಂಬದವರು ಆಗ್ರಹಿಸಿದ್ದಾರೆ. "ನನ್ನ 26 ವರ್ಷದ ಸಹೋದರಿ ವಿಧವೆಯಾಗಿದ್ದಾಳೆ. ಯೋಗಿ ಆದಿತ್ಯನಾಥ್ ಸರ್ಕಾರವು ಲೋಪದೋಷಗಳಿಗಾಗಿ ಆಸ್ಪತ್ರೆಯ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ನಾನು ಬಯಸುತ್ತೇನೆ" ಎಂದು ರೋಗಿಯ ಸಂಬಂಧಿ ಸೌರಭ್ ತ್ರಿಪಾಠಿ ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್, ''ಆಸ್ಪತ್ರೆಯಲ್ಲಿ ಡೆಂಗ್ಯೂ ರೋಗಿಗೆ ಪ್ಲೇಟ್‌ಲೆಟ್ ಬದಲಿಗೆ ಸಿಹಿ ನಿಂಬೆ ರಸವನ್ನು ತುಂಬಿಸಿದ ವಿಡಿಯೋ ವೈರಲ್ ಆಗಿದ್ದು, ನನ್ನ ನಿರ್ದೇಶನದ ಮೇರೆಗೆ ಆಸ್ಪತ್ರೆಗೆ ಸೀಲ್ ಮಾಡಿ ಪ್ಲೇಟ್‌ಲೆಟ್ ಪ್ಯಾಕೆಟ್‌ಗಳನ್ನು ಪರೀಕ್ಷೆ ಕಳುಹಿಸಲಾಗಿದೆ" ತಪ್ಪಿತಸ್ಥರೆಂದು ಕಂಡುಬಂದರೆ ಆಸ್ಪತ್ರೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪಾಠಕ್ ಹೇಳಿದ್ದಾರೆ.

ನಮ್ಮದು ತಪ್ಪಿಲ್ಲ- ಆಸ್ಪತ್ರೆ ಸಮರ್ಥನೆ

ನಮ್ಮದು ತಪ್ಪಿಲ್ಲ- ಆಸ್ಪತ್ರೆ ಸಮರ್ಥನೆ

ಮುಖ್ಯ ವೈದ್ಯಾಧಿಕಾರಿಗಳ ಸೂಚನೆಯ ಮೇರೆಗೆ ಆಸ್ಪತ್ರೆಯನ್ನು ಸೀಲ್ ಮಾಡಲಾಗಿದ್ದು, ಮಾದರಿಯನ್ನು ಪರೀಕ್ಷಿಸುವವರೆಗೆ ಹಾಗೆಯೇ ಇರುತ್ತದೆ ಎಂದು ಪ್ರಯಾಗರಾಜ್‌ನ ಹೆಚ್ಚುವರಿ ಮುಖ್ಯ ವೈದ್ಯಾಧಿಕಾರಿ ಮಾಧ್ಯಮಗಳಿಗೆ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ರೋಗಿಗಳ ಸಂಬಂಧಿಕರಿಂದಲೇ ಪ್ಲೇಟ್‌ಲೆಟ್‌ಗಳನ್ನು ಖರೀದಿಸಲಾಗಿದೆ ಎಂದು ಆಸ್ಪತ್ರೆಯು ಆರೋಪಗಳನ್ನು ತಳ್ಳಿಹಾಕಿದೆ. ಆಸ್ಪತ್ರೆಯ ಮಾಲೀಕರು, ರೋಗಿಯ ಪ್ಲೇಟ್‌ಲೆಟ್ ಮಟ್ಟವು 17,000 ಕ್ಕೆ ಇಳಿದಿತ್ತು, ನಂತರ ಅವರ ಸಂಬಂಧಿಕರಿಗೆ ರಕ್ತದ ಪ್ಲೇಟ್‌ಲೆಟ್‌ಗಳನ್ನು ವ್ಯವಸ್ಥೆ ಮಾಡಲು ಕೇಳಲಾಯಿತು.

"ಅವರು ಸರ್ಕಾರಿ ಆಸ್ಪತ್ರೆಯಿಂದ ಐದು ಯೂನಿಟ್ ಪ್ಲೇಟ್‌ಲೆಟ್‌ಗಳನ್ನು ತಂದರು. ಮೂರು ಯುನಿಟ್ ಪ್ಲೇಟ್‌ಲೆಟ್‌ ನೀಡಿದ ನಂತರ ರೋಗಿಗೆ ರಿಯಾಕ್ಷನ್ ಆಗಿದೆ. ಆದ್ದರಿಂದ ನಾವು ಅದನ್ನು ನಿಲ್ಲಿಸಿದ್ದೇವೆ" ಎಂದು ಆಸ್ಪತ್ರೆಯ ಮಾಲೀಕರು ಹೇಳಿಕೆಯಲ್ಲಿ ತಿಳಿಸಿದ್ದಾರೆ, ಅವರು ತನಿಖೆಯನ್ನು ಬೆಂಬಲಿಸುವುದಾಗಿ ಹೇಳಿದ್ದಾರೆ. ಪ್ರಯಾಗ್‌ರಾಜ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಸಂಜಯ್ ಕುಮಾರ್ ಖತ್ರಿ, "ವಿಚಾರಣೆ ನಡೆಯುತ್ತಿದೆ ಮತ್ತು ಪ್ಲೇಟ್‌ಲೆಟ್‌ಗಳನ್ನು ಸಹ ಪರೀಕ್ಷಿಸಲಾಗುವುದು" ಎಂದು ಹೇಳಿದ್ದಾರೆ.

ವೈದ್ಯರಿಗೆ ರಜೆ ರದ್ದು

ವೈದ್ಯರಿಗೆ ರಜೆ ರದ್ದು

ಉತ್ತರ ಪ್ರದೇಶದ ಹಲವು ನಗರಗಳಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ರಾಜ್ಯದ ಸರ್ಕಾರಿ ಆಸ್ಪತ್ರೆಗಳಿಗೆ ಸಂಬಂಧಿಸಿದ ವೈದ್ಯರು ಮತ್ತು ಅರೆವೈದ್ಯಕೀಯ ಸಿಬ್ಬಂದಿ ರಜೆಯನ್ನು ಅನುಮೋದಿಸದಿರಲು ಸೂಚಿಸಲಾಗಿದೆ. ಡೆಂಗ್ಯೂ ಹಾವಳಿ ಮತ್ತು ಮುಂಬರುವ ಹಬ್ಬ ಹರಿದಿನಗಳ ಹಿನ್ನೆಲೆಯಲ್ಲಿ ವೈದ್ಯಕೀಯ ಆರೋಗ್ಯ ಕಚೇರಿಯ ಮಹಾನಿರ್ದೇಶಕರು (ಡಿಜಿ) ಈ ಆದೇಶ ಹೊರಡಿಸಿದ್ದಾರೆ.

ಡೆಂಗ್ಯೂ ಪ್ರಕರಣಗಳು ಮತ್ತು ಮುಂಬರುವ ಹಬ್ಬಗಳನ್ನು ಗಮನದಲ್ಲಿಟ್ಟುಕೊಂಡು ಅನಿವಾರ್ಯವಲ್ಲದ ಹೊರತು ವೈದ್ಯರು ಮತ್ತು ಅರೆವೈದ್ಯಕೀಯ ಸಿಬ್ಬಂದಿಗೆ ರಜೆ ನೀಡಬಾರದು ಎಂದು ಮುಖ್ಯ ವೈದ್ಯಾಧಿಕಾರಿಗಳು, ಹೆಚ್ಚುವರಿ ನಿರ್ದೇಶಕರು ಮತ್ತು ಎಲ್ಲಾ ಸರ್ಕಾರಿ ಆಸ್ಪತ್ರೆಗಳ ಮುಖ್ಯಸ್ಥರಿಗೆ ಡಿಜಿ ಸೂಚನೆಯನ್ನು ನೀಡಿದ್ದಾರೆ.

ಮಾತ್ರವಲ್ಲದೆ ಆರೋಗ್ಯ ಖಾತೆಯನ್ನು ಹೊಂದಿರುವ ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಅವರು ಜ್ವರದ ಬಗ್ಗೆ ದೂರು ನೀಡುವ ರೋಗಿಗಳನ್ನು ನಿರ್ವಹಿಸಲು ಮೀಸಲಾದ ಡೆಸ್ಕ್‌ಗಳನ್ನು ಸ್ಥಾಪಿಸಲು ಆರೋಗ್ಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಜ್ವರದ ಪ್ರಕರಣಗಳನ್ನು ಪ್ರತ್ಯೇಕವಾಗಿ ಹಾಜರುಪಡಿಸಬೇಕು. ಅಂತಹ ರೋಗಿಗಳನ್ನು ದೀರ್ಘ ಸರತಿಯಲ್ಲಿ ಕಾಯುವಂತೆ ಮಾಡಬಾರದು ಎಂದು ಅವರು ಹೇಳಿದ್ದಾರೆ.

ಕೇಂದ್ರದ ತಂಡದಿಂದ ಸಹಕಾರ

ಕೇಂದ್ರದ ತಂಡದಿಂದ ಸಹಕಾರ

ಜ್ವರ ಪ್ರಕರಣಗಳ ನೋಂದಣಿ ಮತ್ತು ತಪಾಸಣೆಗೆ ಅನುಕೂಲವಾಗುವಂತೆ ಮತ್ತು ಅಂತಹ ರೋಗಿಗಳಿಗೆ ಅವರ ಅಗತ್ಯಕ್ಕೆ ಅನುಗುಣವಾಗಿ ಏಳರಿಂದ 15 ದಿನಗಳ ಔಷಧಿಗಳನ್ನು ಒದಗಿಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ರಾಜ್ಯದಲ್ಲಿ ಕಡಿಮೆ ಪ್ರಮಾಣದಲ್ಲಿ ಡೆಂಗ್ಯೂ ಪ್ರಕರಣಗಳು ವರದಿಯಾಗುತ್ತಿವೆ ಎಂದು ತಿಳಿಸಿದರು. ಆದರೆ ಇದನ್ನು ನಿರ್ಲಕ್ಷಿಸಿದರೆ ಪ್ರಕರಣಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಇದರಿಂದಾಗಿ ಡೆಂಗ್ಯೂ ಹೆಚ್ಚಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಆಸ್ಪತ್ರೆಗಳಲ್ಲಿ ಡೆಂಗ್ಯೂ ಪ್ರಕರಣಗಳಿಗೆ ಬೆಡ್‌ಗಳನ್ನು ಮೀಸಲಿಟ್ಟಿದ್ದು, ಸೊಳ್ಳೆಗಳಿಂದ ಹರಡುವ ರೋಗ ಹರಡದಂತೆ ಎಲ್ಲ ಕ್ರಮಗಳನ್ನು ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.

ಇದಕ್ಕೂ ಮೊದಲು, ಫಿರೋಜಾಬಾದ್, ಆಗ್ರಾ ಮತ್ತು ಇಟಾವಾ ಜಿಲ್ಲೆಗಳಲ್ಲಿ ಡೆಂಗ್ಯೂ ನಿರ್ವಹಣೆಗೆ ಸಂಬಂಧಿಸಿದಂತೆ ಕ್ರಮಗಳನ್ನು ಕೈಗೊಳ್ಳಲು ಕೇಂದ್ರ ಆರೋಗ್ಯ ಸಚಿವಾಲಯದ ಉನ್ನತ ಮಟ್ಟದ ತಂಡವನ್ನು ಉತ್ತರ ಪ್ರದೇಶಕ್ಕೆ ಕಳುಹಿಸಲಾಗಿತ್ತು. ಡೆಂಗ್ಯೂ ಪ್ರಕರಣಗಳನ್ನು ಪರಿಶೀಲಿಸಲು ಸಾರ್ವಜನಿಕ ಆರೋಗ್ಯ ಕ್ರಮಗಳನ್ನು ಸ್ಥಾಪಿಸುವಲ್ಲಿ ಕೇಂದ್ರದ ತಂಡವು ರಾಜ್ಯ ಆರೋಗ್ಯ ಅಧಿಕಾರಿಗಳೊಂದಿಗೆ ಸಹಕರಿಸುತ್ತಿರುವುದು ತಿಳಿದು ಬಂದಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+