ಹಿಂದಿಯಲ್ಲೇ ಭಾಷಣ: ರಾಷ್ಟ್ರಪತಿ ಆದೇಶ ಹುಟ್ಟುಹಾಕಿದ ಚರ್ಚೆ
ಭಾರತದ ಪ್ರಾಂತೀಯ ಭಾಷೆಗಳನ್ನು ನುಂಗಿಹಾಕುತ್ತದೆ ಎಂಬುದಾಗಿ ಹಬ್ಬಿದ್ದ ಕೆಲವಾರು ಭೀತಿ ಈಗ ನಿಜವಾಗುವ ಕಾಲ ಬಂದಿದೆಯೇ ಎಂದೂ ಆತಂಕ ವ್ಯಕ್ತಪಡಿಸಿದ್ದಾರೆ.
ನವದೆಹಲಿ, ಏಪ್ರಿಲ್ 18: ಕೇಂದ್ರ ಸರ್ಕಾರದ ಅಧೀನದಲ್ಲಿರುವ ಇಲಾಖಾ ಅಧಿಕಾರಿಗಳು ಹಾಗೂ ಕೇಂದ್ರ ಸಚಿವರು ಇನ್ನು ಹಿಂದಿಯಲ್ಲೇ ಭಾಷಣ ಮಾಡಬೇಕೆಂದು ರಾಷ್ಟ್ರಪತಿ ಪ್ರಣವ್ ಮುಖರ್ಜಿಯವರು ನಿರ್ದೇಶನ ನೀಡಿರುವುದು ಚಿಂತಕರ ಚಾವಡಿಯಲ್ಲಿ ಹೊಸ ಚರ್ಚೆಯನ್ನು ಹುಟ್ಟುಹಾಕಿದೆ.
ರಾಷ್ಟ್ರಪತಿಯವರ ಸೂಚನೆಯನ್ನು ಡೈಲಿ ಒ ಅಂತರ್ಜಾಲ ವೆಬ್ ಸೈಟ್ ತನ್ನ ಅಂಕಣವೊಂದರಲ್ಲಿ ಪ್ರಶ್ನಿಸಿದ್ದು, ರಾಷ್ಟ್ರಪತಿಯವರು ಈ ಸೂಚನೆ ನೀಡುವುದಕ್ಕೂ ಮುನ್ನ ಭಾರತದ ಭಾಷಾ ವೈವಿಧ್ಯತೆಯತ್ತ ಒಮ್ಮೆ ಯೋಚಿಸಬೇಕಿತ್ತು ಎಂದು ಹೇಳಿದೆ. ಹೀಗೆ, ಕೆಲವಾರು ಅಂತರ್ಜಾಲ ಮಾಧ್ಯಮಗಳು ತಮ್ಮದೇ ಆದ ಯೋಚನಾ ಲಹರಿ ಹರಿಯಬಿಟ್ಟಿವೆ.

ಕೆಲವಾರು ಬುದ್ಧಿಜೀವಿಗಳು ಹಿಂದಿ ಭಾಷೆಯು ಕಣ್ಮುಚ್ಚಿ ಕಣ್ಣು ತೆರೆಯುವುದರೊಳಗೆ ಭಾರತದ ಪ್ರಾಂತೀಯ ಭಾಷೆಗಳನ್ನು ನುಂಗಿಹಾಕುತ್ತದೆ ಎಂಬುದಾಗಿ ಹಬ್ಬಿದ್ದ ಕೆಲವಾರು ಭೀತಿ ಈಗ ನಿಜವಾಗುವ ಕಾಲ ಬಂದಿದೆಯೇ ಎಂದೂ ಆತಂಕ ವ್ಯಕ್ತಪಡಿಸಿದ್ದಾರೆ.
ಆದರೆ, ರಾಷ್ಟ್ರಪತಿಯವರ ಈ ಸೂಚನೆಯನ್ನು ತುಂಬಾ ಗೊಂದಲಮಯವಾಗಿಸಿಕೊಳ್ಳುವ ಅಗತ್ಯವಿಲ್ಲವೆಂದು ಕೆಲವರು ಸ್ಪಷ್ಟೀಕರಣ ನೀಡಿದ್ದಾರೆ. ಕೇಂದ್ರದ ಸಚಿವರು, ಅಧಿಕಾರಿಗಳಿಗೆ ಹಿಂದಿ ಬಂದರೆ ಮಾತ್ರ ಹಿಂದಿಯಲ್ಲಿ ಮಾತನಾಡಬೇಕೆಂದು ಸೂಚನೆಯಲ್ಲಿ ಸ್ಪಷ್ಟವಾಗಿ ಹೇಳಲಾಗಿದೆ. ಅಲ್ಲದೆ, ಇದು ರಾಜ್ಯ ಸರ್ಕಾರಗಳಿಗೆ ಅನ್ವಯವಾಗುವುದಿಲ್ಲ ಎಂದೂ ತಿಳಿಸಿದ್ದಾರೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications