ಮಲ್ಯ ಮಾಡಿದ್ದ 9 ಸಾವಿರ ಕೋಟಿ ಸಾಲ ವಸೂಲಿಗೆ ಹಸಿರು ನಿಶಾನೆ
ದೀರ್ಘಕಾಲದಿಂದಲೂ ನೆನೆಗುದಿಗೆ ಬಿದ್ದಿದ್ದ ಮದ್ಯದ ದೊರೆಯ ಸಾಲ ವಸೂಲಾತಿ ಪ್ರಕ್ರಿಯೆಗೆ ಬಂದಿದೆ ಕಾನೂನಿನ ಬಲ.
ನವದೆಹಲಿ, ಜನವರಿ 19: ಭಾರತೀಯ ಬ್ಯಾಂಕುಗಳಿಗೆ ಮದ್ಯದ ದೊರೆ ವಿಜಯ್ ಮಲ್ಯ ಅವರಿಂದ ಬರಬೇಕಿದ್ದ ಸುಮಾರು 9 ಸಾವಿರ ಕೋಟಿ ರು. ಹಣದ ಸಾಲವನ್ನು ವಸೂಲಿ ಮಾಡುವಂತೆ ಸಾಲ ವಸೂಲಾತಿ ನ್ಯಾಯಾಧೀಕರಣ (ಡಿಆರ್ ಟಿ) ಸಂಬಂಧಪಟ್ಟ ಬ್ಯಾಂಕುಗಳಿಗೆ ಹಸಿರು ನಿಶಾನೆ ನೀಡಿದೆ.
ಮಲ್ಯ ಅವರಿಗೆ ಕೋಟ್ಯಾನುಕೋಟಿ ಮೌಲ್ಯದ ಸಾಲ ನೀಡಿದ್ದ ಬ್ಯಾಂಕುಗಳ ವೃಂದವು ಭಾರತೀಯ ಸ್ಟೇಟ್ ಬ್ಯಾಂಕ್ ನೇತೃತ್ವದಲ್ಲಿ ಡಿಆರ್ ಟಿಗೆ ಮೊರೆ ಹೋಗಿದ್ದವು. ಕಿಂಗ್ ಫಿಶರ್ ಏರ್ ಲೈನ್ ಮೇಲೆ ಮಲ್ಯ ಅವರು ವಿವಿಧ ಬ್ಯಾಂಕ್ ಗಳಿಂದ ಪಡೆದಿರುವ ಸುಮಾರು 9 ಸಾವಿರ ಕೋಟಿ ರು.ಗಳನ್ನು ವಸೂಲಿ ಮಾಡಲು ಅನುಮತಿ ನೀಡಬೇಕೆಂದು ಈ ಬ್ಯಾಂಕುಗಳು ಡಿಆರ್ ಟಿಗೆ ಮನವಿ ಸಲ್ಲಿಸಿದ್ದವು.

ಮನವಿಗೆ ಸ್ಪಂದಿಸಿರುವ ಡಿಆರ್ ಟಿ ಮುಖ್ಯಸ್ಥ ಕೆ. ಶ್ರೀನಿವಾಸನ್, ಬ್ಯಾಂಕುಗಳಿಗೆ ಸಾಲ ವಸೂಲಾತಿಗೆ ಅನುಮತಿ ನೀಡಿದ್ದಾರೆ. ಇದರಿಂದಾಗಿ, ಸಾಲ ವಸೂಲಿಗೆ ಬ್ಯಾಂಕುಗಳಿಗೆ ಕಾನೂನಾತ್ಮಕ ಅವಕಾಶ ಸಿಕ್ಕಂತಾಗಿದೆ. ಹಾಗಾಗಿ, ಶೀಘ್ರದಲ್ಲೇ ವಸೂಲಿ ಕಾರ್ಯಾಚರಣೆ ಆರಂಭವಾಗಲಿದೆ ಎಂದು ಮೂಲಗಳು ತಿಳಿಸಿವೆ.
More From
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
B Khata: ಬಿ ಖಾತಾದಿಂದ ಎ ಖಾತಾ: ಹಳೆಯ ಗೈಡ್ಲೈನ್ ವ್ಯಾಲ್ಯೂ ವಿಧಿಸಲು ವಿಧಾನಸಭೆಯಲ್ಲಿ ಚರ್ಚೆ









Click it and Unblock the Notifications