ಕೆನರಾ ಬ್ಯಾಂಕಿಗೆ ವಂಚನೆ, ಸಿಬಿಐ ವಶಕ್ಕೆ ಡೆಕ್ಕನ್ 'ಅಯ್ಯರ್'
ಭುವನೇಶ್ವರ್, ಜೂ.07: ಸಾಲದ ಸುಳಿಯಲ್ಲಿ ಸಿಲುಕಿರುವ ಡೆಕ್ಕನ್ ಕ್ರಾನಿಕಲ್ ನ ಮತ್ತೊಬ್ಬ ಹಿರಿಯ ಅಧಿಕಾರಿಯನ್ನು ಬಂಧಿಸಿ, ವಿಚಾರಣೆಗೊಳಪಡಿಸಲಾಗಿದೆ. ಕೆನರಾ ಬ್ಯಾಂಕಿಗೆ ವಂಚಿಸಿದ ಆರೋಪದ ಮೇಲೆ ಡೆಕ್ಕನ್ ಕ್ರಾನಿಕಲ್ ಹೋಲ್ಡಿಂಗ್ಸ್ ಲಿ (ಡಿಸಿಎಚ್ಎಲ್) ಸಂಸ್ಥೆ ಮುಖ್ಯಸ್ಥ ಟಿ ವೆಂಕಟರಾಮ ರೆಡ್ಡಿ ಈ ಹಿಂದೆ ಬಂಧನವಾಗಿದ್ದರು, ಈಗ ಉಪಾಧ್ಯಕ್ಷ ಪಿಕೆ ಅಯ್ಯರ್ ಸರದಿ.
ಹೈದರಾಬಾದ್ ಮೂಲದ 'ಡೆಕ್ಕನ್ ಕ್ರಾನಿಕಲ್' ಪತ್ರಿಕಾ ಸಮೂಹದ ಉಪಾಧ್ಯಕ್ಷ ಪಿ.ಕೆ. ಅಯ್ಯರ್ರನ್ನು ಒಡಿಶಾ ಪೊಲೀಸರು ಶನಿವಾರ ಭುವನೇಶ್ವರದಲ್ಲಿ ಬಂಧಿಸಲಾಗಿದೆ. ಕಳೆದ ಕೆಲ ತಿಂಗಳುಗಳಿಂದ ಇಲ್ಲಿನ ಪಂಚತಾರಾ ಹೋಟೆಲಿನಲ್ಲಿ ನಕಲಿ ಹೆಸರಿನಲ್ಲಿ ವಾಸಿಸುತ್ತಿದ್ದರು ಎಂದು ತಿಳಿದು ಬಂದಿದ್ದು, ಶನಿವಾರ ಬಲೆ ಬೀಸಿ ಹಿಡಿಯಲಾಯಿತು. ಹೆಚ್ಚಿನ ವಿಚಾರಣೆಗಾಗಿ ಸಿಬಿಐ ತಂಡದ ವಶಕ್ಕೆ ನೀಡಲಾಗಿದೆ ಎಂದು ಒಡಿಶಾದ ಉಪಪೊಲೀಸ್ ಆಯುಕ್ತ ಸತ್ಯೇಂದ್ರ ಭೋಯ್ ತಿಳಿಸಿದ್ದಾರೆ.

ಡೆಕ್ಕನ್ ಕ್ರಾನಿಕಲ್ ಹೋಲ್ಡಿಂಗ್ಸ್ನ ಚೇರ್ಮನ್ ಟಿ. ವೆಂಕಟ್ರಾಮ್ ರೆಡ್ಡಿ ಹಾಗೂ ಆಡಳಿತ ನಿರ್ದೇಶಕ ಟಿ.ವಿನಾಯಕ್ ರವಿ ರೆಡ್ಡಿಯವರನ್ನು ಈ ಹಿಂದೆ ಹೈದರಾಬಾದ್ ಪೊಲೀಸರು ಬಂಧಿಸಿದ್ದರು. ನಂತರ ಇಬ್ಬರಿಗೂ ಹೈದರಾಬಾದಿನ ಕೆಳನ್ಯಾಯಾಲಯದಿಂದ ಜಾಮೀನು ಸಿಕ್ಕಿತ್ತು.
ಕರ್ನಾಟಕ ಮೂಲದ ಕೆನರಾ ಬ್ಯಾಂಕಿನಿಂದ ಸುಮಾರು 357 ಕೋಟಿ ರು ಕಾರ್ಪೊರೇಟ್ ಸಾಲವನ್ನು ಪಡೆಯುವ ಉದ್ದೇಶದಿಂದ 2009-11ರ ಅವಧಿಯಲ್ಲಿ ನಕಲಿ ಹಣಕಾಸು ವಿವರಣೆ ದಾಖಲೆಗಳನ್ನು ಸಲ್ಲಿಸುವಲ್ಲಿ ಅಯ್ಯರ್ ಪಾತ್ರವಹಿಸಿದ್ದರು. ಒಂದೇ ಆಸ್ತಿಯನ್ನು ನಾಲ್ಕು ಬ್ಯಾಂಕ್ಗಳಲ್ಲಿ ಅಡವಿಟ್ಟು 1200 ಕೋಟಿ ರೂ. ಹಣ ಸಾಲ ಪಡೆದಿದ್ದರು ಎಂದು ಸಿಬಿಐ ಆರೋಪಿಸಿದೆ. [ಬೆಂಗಳೂರಿನ ಸಿಬಿಐನಿಂದ ಡೆಕ್ಕನ್ ಕ್ರಾನಿಕಲ್ ರೆಡ್ಡಿ ಬಂಧನ]

ಹೈದರಾಬಾದ್ ಮೂಲದ ಮಾಧ್ಯಮ ಸಂಸ್ಥೆ ಡೆಕ್ಕನ್ ಡೆಕ್ಕನ್ ಕ್ರಾನಿಕಲ್ ಹೋಲ್ಡಿಂಗ್ ಲಿ. (ಡಿಸಿಎಚ್ಎಲ್) ದಿವಾಳಿ ಅಂಚು ತಲುಪಿದ್ದು, ಕಂಪನಿಯ ಟ್ರೇಡ್ ಮಾರ್ಕ್ ಅನ್ನು ಐಡಿಬಿಐ ಬ್ಯಾಂಕ್ ಮತ್ತೊಮ್ಮೆ ಹರಾಜು ಹಾಕಲು ಸಿದ್ಧತೆ ನಡೆಸಿತ್ತು. ಡಿಸಿಎಚ್ ಎಲ್ ಪ್ರಕಟಣೆಯ ಡೆಕ್ಕನ್ ಕ್ರಾನಿಕಲ್, ದಿ ಏಷ್ಯನ್ ಏಜ್, ಆಂಧ್ರ ಭೂಮಿ ಹಾಗೂ ಫೈನಾನ್ಶಿಯಲ್ ಕ್ರಾನಿಕಲ್ ಟ್ರೇಡ್ ಮಾರ್ಕ್ ಗಳನ್ನು ಅಡಮಾನ ಇಟ್ಟಿದ್ದರು.
ಸಾಲದ ಕಾರಣ ಐಪಿಎಲ್ ನಲ್ಲಿ ಹೊಂದಿದ್ದ ತಂಡವನ್ನು ಮಾರಾಟ ಮಾಡಿದ್ದರು. ಡೆಕ್ಕನ್ ಚಾರ್ಜರ್ಸ್ ತಂಡ 2009ರಲ್ಲಿ ದಕ್ಷಿಣ ಆಫ್ರಿಕಾದಲ್ಲಿ ನಡೆದ ಐಪಿಎಲ್ ಟೂರ್ನಿಯಲ್ಲಿ ಪ್ರಶಸ್ತಿ ಗೆದ್ದಿದ್ದು ಬಿಟ್ಟರೆ ಉಳಿದಂತೆ ಕಳಪೆ ಸಾಧನೆ ಮುಂದುವರೆಸಿತ್ತು. ನಂತರ ತಂಡವನ್ನು ಸನ್ ನೆಟ್ವರ್ಕ್ ಖರೀದಿಸಿ ಸನ್ ರೈಸರ್ಸ್ ಹೆಸರಿನಲ್ಲಿ ಐಪಿಎಲ್ ನಲ್ಲಿ ಕಣಕ್ಕಿಳಿಸಿದ್ದನ್ನು ಇಲ್ಲಿ ಸ್ಮರಿಸಬಹುದು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications