'ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ, ಜನರ ಜೀವವೂ ಉಳಿಸಿ'
ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿಬಿಡಿ. ಹೀಗೆ ಮಾಡುವುದರಿಂದ ಗೋರಕ್ಷಕರಿಂದ ನಡೆಯುತ್ತಿರುವ ಹಿಂಸಾಚಾರವೂ ನಿಲ್ಲುತ್ತದೆ ಎಂದು ಜಮಾಯಿತ್ ಉಲೆಮಾ-ಇ-ಹಿಂದ್ ನ ಅಧ್ಯಕ್ಷ ಮೌಲಾನಾ ಸೈಯದ್ ಅರ್ಶದ್ ಮದನಿ ಹೇಳಿದ್ದಾರೆ
ನವದೆಹಲಿ, ಮೇ 11: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸುವುದರ ಬಗ್ಗೆ ಸರಕಾರ ಚಿಂತಿಸಬೇಕು- ಈ ಮಾತನ್ನು ಹೇಳಿರುವುದು ಜಮಾಯಿತ್ ಉಲೆಮಾ-ಇ-ಹಿಂದ್ ನ ಅಧ್ಯಕ್ಷರಾದ ಮೌಲಾನಾ ಸೈಯದ್ ಅರ್ಶದ್ ಮದನಿ. ಗೋ ರಕ್ಷಕರ ದಾಳಿಯಿಂದ ಭಯದ ವಾತಾವರಣ ಸೃಷ್ಟಿಯಾಗಿರುವ ಬಗ್ಗೆ ಅವರು ಕಳವಳ ವ್ಯಕ್ತಪಡಿಸಿದ್ದಾರೆ.
ಸರಕಾರವು ಗೋವಿಗೆ ರಾಷ್ಟ್ರೀಯ ಪ್ರಾಣಿ ಸ್ಥಾನಮಾನ ನೀಡಿದರೆ ನಾವದನ್ನು ಬೆಂಬಲಿಸುತ್ತೇವೆ ಎಂದು ಹೇಳಿದ್ದಾರೆ. ಗೋರಕ್ಷಕರಿಂದ ದೇಶದಲ್ಲಿ ಹಲವೆಡೆ ಹಿಂಸಾಕೃತ್ಯಗಳು ನಡೆದಿವೆ. "ಈ ಗೋರಕ್ಷಕರು ಒಂದು ನಿರ್ದಿಷ್ಟ ಧರ್ಮದ ಮೇಲೆ ಶೋಷಣೆ ಮಾಡಿ, ಜನರನ್ನು ಕೊಲ್ಲುತ್ತಿದ್ದಾರೆ, ಲೂಟಿ ಮಾಡುತ್ತಿದ್ದಾರೆ. ಹಿಂದೂಗಳ ಧಾರ್ಮಿಕ ಭಾವನೆಯನ್ನು ನಾವು ಗೌರವಿಸುತ್ತೇವೆ.[ದೊರೆಗಂತೂ ಮನಸಿಲ್ಲ, ನಾವೂ ಹೃದಯ ಕಳ್ಕೊಂಡರೆ ಗೋವು ಬದ್ಕೋದು ಹೇಗೆ]

"ಅದರೆ, ಕಾನೂನು ಕೈಗೆತ್ತಿಕೊಳ್ಳಲು ಯಾರಿಗೂ ಅವಕಾಶ ನೀಡಬಾರದು" ಎಂದು ಅವರು ಹೇಳಿದ್ದಾರೆ. ಸರಕಾರ ಗೋವಿನ ರಕ್ಷಣೆಗೆ ಕಾನೂನು ತರಲಿ. ಆ ಮೂಲಕ ಜನರ ಪ್ರಾಣವನ್ನು ಕೂಡ ಉಳಿಸಿಕೊಳ್ಳಬಹುದು ಎಂದು ಮದನಿ ಹೇಳಿದ್ದಾರೆ.[ಗೋರಕ್ಷಕರ ರಕ್ಷಣೆಗೆ ಪಣ ತೊಟ್ಟ ಸಿದ್ದರಾಮಯ್ಯ ಸರ್ಕಾರ!]
ತ್ರಿವಳಿ ತಲಾಖ್ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಇದು ಧಾರ್ಮಿಕ ವಿಚಾರ. ಇದಕ್ಕೆ ಪರಿಹಾರವನ್ನು ಧಾರ್ಮಿಕವಾಗಿಯೇ ಕಂಡುಕೊಳ್ಳಬೇಕು. ಅಂಥ ಒಪ್ಪಿಕೊಳ್ಳಬಹುದಾದ ಸಲಹೆಯನ್ನು ಸುಪ್ರೀಂ ಕೋರ್ಟ್ ನೀಡಿದರೆ ಅದನ್ನು ಖಂಡಿತಾ ಸ್ವಾಗತಿಸುತ್ತೇವೆ ಎಂದು ಅವರು ಹೇಳಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications