ಪಠಾಣ್ ಕೋಟ್ ದಾಳಿ : ಚೀನಾ ಸಹಾಯ ಕೇಳಲಿದೆ ಭಾರತ
ಬೆಂಗಳೂರು, ಜನವರಿ 13 : ಪಠಾಣ್ ಕೋಟ್ ವಾಯುನೆಲೆ ಮೇಲೆ ದಾಳಿ ನಡೆಸಿದ ಜೈಷ್-ಏ-ಮೊಹಮ್ಮದ್ ಉಗ್ರ ಸಂಘಟನೆ ಮುಖ್ಯಸ್ಥ ಮೌಲಾನಾ ಮಸೂದ್ ಅಜರ್ ಮತ್ತು ಆತನ ಸಹೋದರನನ್ನು ಅಂತರಾಷ್ಟ್ರೀಯ ಭಯೋತ್ಪಾದಕರೆಂದು ಘೋಷಣೆ ಮಾಡುವಂತೆ ಭಾರತ ಚೀನಾವನ್ನು ಒತ್ತಾಯಿಸಲಿದೆ.
ವಾಯುನೆಲೆ ಮೇಲಿನ ದಾಳಿಯ ಸಂಚು ರೂಪಿಸಿದ ಮೌಲಾನಾ ಮಸೂದ್ ಅಜರ್ ಮತ್ತು ಅಬ್ದುಲ್ ರಫಲ್ ಅಸರ್ ಮೇಲೆ ಪಾಕಿಸ್ತಾನ ಕೈಗೊಂಡ ಕ್ರಮಗಳು ತೃಪ್ತಿದಾಯಕವಾಗಿಲ್ಲ. ಈ ಇಬ್ಬರು ಉಗ್ರರು ಪಾಕಿಸ್ತಾನದಲ್ಲಿದ್ದು, ಅಲ್ಲಿಂದಲೇ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಭಾರತ ಮನವರಿಕೆ ಮಾಡಿಕೊಡಲಿದೆ. [ಉಗ್ರರು ಕರೆ ಮಾಡಿದ 3 ನಂಬರ್ ಪಾಕಿಸ್ತಾನದ್ದು]

ಮೊದಲು ಮೌಲಾನಾ ಮಸೂದ್ ಅಜರ್ ಭಾರತದ ವಶದಲ್ಲಿದ್ದ. ಕಂದಹಾರ್ ವಿಮಾನ ಅಪಹರಣವಾದಾಗ ಆತನನ್ನು ಭಾರತ ಬಿಡುಗಡೆ ಮಾಡಿತ್ತು. ಪಾಕಿಸ್ತಾನಕ್ಕೆ ಹೋದ ಆತ ಜೈಷ್-ಏ-ಮೊಹಮ್ಮದ್ ಉಗ್ರ ಸಂಘಟನೆ ಆರಂಭಿಸಿದ. ಸಂಘಟನೆಗೆ ಆತನೇ ಮುಖ್ಯಸ್ಥನಾಗಿದ್ದು, ಅಬ್ದುಲ್ ರಫಲ್ ಕಾರ್ಯಚರಣೆಯ ನೇತೃತ್ವವನ್ನು ವಹಿಸಿಕೊಂಡಿದ್ದಾನೆ. [ಪಠಾಣ್ ಕೋಟ್ ದಾಳಿ : ಭಾರತವನ್ನು ಲೇವಡಿ ಮಾಡಿದ ಮಸೂದ್]
ಚೀನಾ ಮೇಲೆ ಒತ್ತಡವೇಕೆ? : ಮೌಲಾನಾ ಮಸೂದ್ ಅಜರ್ ಮತ್ತು ಆತನ ಸಹೋದರನ ಮೇಲೆ ಕ್ರಮ ಕೈಗೊಳ್ಳುವಂತೆ ಚೀನಾ ಮೇಲೆ ಒತ್ತಡ ಹೇರುವುದು ಮಹತ್ವದ ಬೆಳವಣಿಗೆಯಾಗಲಿದೆ. ಭಾರತ ಪಠಾಣ್ ಕೋಟ್ ದಾಳಿಯಲ್ಲಿ ಮಸೂದ್ ಕೈವಾಡವಿರುವ ಬಗ್ಗೆ ಮಾಹಿತಿ ಸಂಗ್ರಹಣೆ ಮಾಡುತ್ತಿದ್ದು, ಅದನ್ನು ಚೀನಾಗೆ ಸಲ್ಲಿಸಲಿದೆ.
ಪಠಾಣ್ ಕೋಟ್ ವಾಯುನೆಲೆ ಮೇಲಿನ ದಾಳಿಯನ್ನು ಚೀನಾ ಖಂಡಿಸಿತ್ತು. ದಾಳಿಯ ಕುರಿತು ಸಾಕ್ಷಿ ನೀಡಿ, ಮಸೂದ್ ವಿರುದ್ಧ ಕ್ರಮ ಕೈಗೊಳ್ಳಲು ಪಾಕ್ಗೆ ಸೂಚಿಸುವಂತೆ ಚೀನಾಗೆ ಮನವಿ ಮಾಡಲಿದೆ. ಮಸೂದ್ ವಿರುದ್ಧ ಕ್ರಮ ಕೈಗೊಳ್ಳುವ ಜೊತೆಗೆ ಅಲ್-ರೆಹಮತ್ ಟ್ರಸ್ಟ್ ವಿರುದ್ಧವೂ ಕ್ರಮಕೈಗೊಳ್ಳುವಂತೆ ಒತ್ತಾಯಿಸಲಿದೆ. ಈ ಟ್ರಸ್ಟ್ ಜೈಷ್-ಏ-ಮೊಹಮ್ಮದ್ ಸಂಘಟನೆಗೆ ಹಣಕಾಸಿನ ನೆರವನ್ನು ನೀಡುತ್ತಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications