Ayodhya: ಕ್ಷೀಣಿಸುತ್ತಿದೆ ರಾಮಮಂದಿರದ ಕ್ರೇಜ್; ರದ್ದಾಗುತ್ತಿವೆ ವಿಮಾನಗಳು, ರೈಲುಗಳು ಮತ್ತು ಬಸ್ಗಳು
ಅಯೋಧ್ಯೆ, ಜೂನ್. 27: ಭಗವಾನ್ ಶ್ರೀರಾಮನ ಊರು ಎಂದು ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ಕಟ್ಟಲಾಗಿದೆ. ವರ್ಷದ ಆರಂಭದಲ್ಲಿ ಅದ್ಧೂರಿಯಾಗಿ ಬಾಲ ರಾಮನ ಪ್ರಾಣಪ್ರತಿಷ್ಠಾಪನೆ ಮಾಡಲಾಗಿದೆ. ಆದರೆ, ಕೇವಲ ಐದು ತಿಂಗಳಲ್ಲೇ ರಾಮಮಂದಿರಕ್ಕೆ ಭೇಟಿ ನೀಡುವವರ ಸಂಖ್ಯೆ ಕುಸಿದಿದೆ.
ಇತ್ತೀಚೆಗೆ ಒಂದು ಮಳೆಗೂ ತಡೆಯದ ರಾಮಮಂದಿರದಲ್ಲಿ ಸೂರಿಕೆ ಆರಂಭವಾಗಿದೆ. ರಸ್ತೆಗಳಲ್ಲಿ ಗುಂಡಿಗಳು ಕಾಣಿಸಿಕೊಂಡಿವೆ. ಕೋಟ್ಯಾಂತರ ರೂಪಾಯಿ ಸುರಿದು ಕಟ್ಟಿದರೂ ಯಾವುದೇ ಉಪಯೋಗವಿಲ್ಲದಂತಾಗಿದೆ. ಇದರ ಬೆನ್ನಲ್ಲೇ ರಾಮನೂರಿಗೆ ಭೇಟಿ ನೀಡುವವರು ಕಡಿಮೆಯಾಗಿದ್ದು, ವಿಶೇಷ ವಿಮಾನಗಳು, ಬಸ್ಸುಗಳು ಮತ್ತು ಟ್ರೈನುಗಳನ್ನು ಕಡಿಮೆ ಮಾಡಲಾಗಿದೆ.

ರಾಮಮಂದಿರದ ಬಗ್ಗೆ ಜನರಲ್ಲಿ ಕುಸಿದ ಆಸಕ್ತಿ
ಅಯೋಧ್ಯೆಯ ರಾಮಮಂದಿರದ ಬಗ್ಗೆ ಒಮ್ಮೆ ಹೆಚ್ಚಾಗಿದ್ದ ಆಸಕ್ತಿಯು ಕ್ಷೀಣಿಸುತ್ತಿರುವಂತೆ ತೋರುತ್ತಿದೆ. ಕಳೆದ ಆರು ವಾರಗಳಲ್ಲಿ ನಗರಕ್ಕೆ ವಿಮಾನಗಳು, ರೈಲುಗಳು ಮತ್ತು ಬಸ್ ಸೇವೆಗಳಲ್ಲಿ ಗಮನಾರ್ಹ ಇಳಿಕೆ ಕಂಡುಬಂದಿದೆ. ವಿಶೇಷ ರೈಲುಗಳ ಕಾರ್ಯಾಚರಣೆಯನ್ನು ನಿಲ್ಲಿಸಲಾಗಿದೆ. ಇತರ ರಾಜ್ಯಗಳಿಂದ ಅಯೋಧ್ಯೆಗೆ ಬಸ್ಸುಗಳನ್ನು ಕಡಿತಗೊಳಿಸಲಾಗಿದೆ. ಇವೆಲ್ಲವೂ ಕೂಡ ನಗರಕ್ಕೆ ಬರುವ ಪ್ರವಾಸಿಗರ ಸಂಖ್ಯೆಯಲ್ಲಿ ಇಳಿಮುಖವಾಗಿರುವುದನ್ನು ಸೂಚಿಸುತ್ತದೆ.
ಅಯೋಧ್ಯೆಗೆ ಹೋಗಲು ಬೇಡಿಕೆ ಕಡಿಮೆಯಾಗಿರುವ ಕಾರಣ ಹೈದರಾಬಾದ್, ಬೆಂಗಳೂರು ಮತ್ತು ಪಾಟ್ನಾದಿಂದ ಅಯೋಧ್ಯೆಗೆ ನೇರ ವಿಮಾನಯಾನವನ್ನು ನಿಲ್ಲಿಸಿದ ಮೊದಲ ವಿಮಾನಯಾನ ಸಂಸ್ಥೆ ಸ್ಪೈಸ್ ಜೆಟ್. ಸೇವೆ ಪ್ರಾರಂಭವಾದ ಕೇವಲ ಎರಡು ತಿಂಗಳ ನಂತರ ಈ ನಿರ್ಧಾರವು ಬಂದಿದೆ. ಏಪ್ರಿಲ್ 2024 ರಲ್ಲಿ, ಸ್ಪೈಸ್ ಜೆಟ್ ಹೈದರಾಬಾದ್ನಿಂದ ಅಯೋಧ್ಯೆಗೆ ವಿಮಾನಗಳನ್ನು ಪ್ರಾರಂಭಿಸಿ, ವಾರಕ್ಕೆ ಮೂರು ಬಾರಿ ಕಾರ್ಯನಿರ್ವಹಿಸುತ್ತದೆ ಎಂದಿತ್ತು. ಜೂನ್ 1 ರಂದು ಕೊನೆಯ ವಿಮಾನ ಹೋಗಿದೆ.
ಸದ್ಯ ಇಂಡಿಗೋ ಮತ್ತು ಏರ್ ಇಂಡಿಯಾ ಹೈದರಾಬಾದ್ನಿಂದ ಅಯೋಧ್ಯೆಗೆ ವಿಮಾನಯಾನ ಸೇವೆಯನ್ನು ಮುಂದುವರೆಸಿದೆ. ಅಯೋಧ್ಯೆಗೆ ಪ್ರಯಾಣಿಸುವ ಪ್ರಯಾಣಿಕರ ಸಂಖ್ಯೆ ಕಡಿಮೆಯಾಗಿರುವುದೇ ಈ ಕಡಿತಕ್ಕೆ ಕಾರಣ ಎಂದು ಏರ್ಲೈನ್ ಕಂಪನಿ ಉದ್ಯೋಗಿಗಳು ಮಾಹಿತಿ ನೀಡಿದ್ದಾರೆ. ಇನ್ನು, ಹವಾಮಾನ ಪರಿಸ್ಥಿತಿ ಸರಿಯಾದ ಮೇಲೆ ವಿಮಾನಯಾನ ಆರಂಭವಾಗುವ ಲಕ್ಷಣಗಳಿವೆ.

ಅಯೋಧ್ಯೆಗೆ ವಿಶೇಷ ರೈಲುಗಳು ಇಲ್ಲ!
ಭಾರತೀಯ ರೈಲ್ವೆ ಕೂಡ ಅಯೋಧ್ಯೆಗೆ ವಿಶೇಷ ರೈಲುಗಳನ್ನು ನಿಲ್ಲಿಸಿದೆ. ಪವಿತ್ರಾಭಿಷೇಕದ ನಂತರ ಯಾತ್ರಾರ್ಥಿಗಳಿಗಾಗಿ ಪರಿಚಯಿಸಲಾದ ಆಸ್ತಾ ವಿಶೇಷ ರೈಲುಗಳನ್ನು ಬೇಡಿಕೆ ಕಡಿಮೆಯಾದ ಕಾರಣ ಸ್ಥಗಿತಗೊಳಿಸಲಾಗಿದೆ. ಇದರ ಹೊರತಾಗಿಯೂ, ಪ್ರತಿದಿನ 32 ರಿಂದ 35 ರೈಲುಗಳು 28,000 ಪ್ರಯಾಣಿಕರನ್ನು ಹೊತತ್ಉ ಅಯೋಧ್ಯಾ ಧಾಮ್ ಮತ್ತು ಅಯೋಧ್ಯಾ ಕ್ಯಾಂಟ್ ನಿಲ್ದಾಣಗಳಿಗೆ ಆಗಮಿಸುತ್ತಿವೆ.
ಮೇ 15 ರವರೆಗೆ ಅಯೋಧ್ಯೆಗೆ ರೈಲುಗಳಿಗೆ ಹೆಚ್ಚಿನ ಬೇಡಿಕೆಯಿದ್ದರೂ, ನಂತರ ಸ್ವಲ್ಪ ಕಡಿಮೆಯಾಗಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ಅದೇ ರೀತಿ ಇತರ ರಾಜ್ಯಗಳಿಂದ ಅಯೋಧ್ಯೆಗೆ ಬಸ್ ಸಂಚಾರವನ್ನು ಕಡಿತಗೊಳಿಸಲಾಗಿದೆ. ಪ್ರಸ್ತುತ, 396 ರಸ್ತೆಮಾರ್ಗದ ಬಸ್ಗಳು ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿವೆ.
ಇತರ ರಾಜ್ಯಗಳಿಂದ ಬರುವ ಬಸ್ಗಳ ಸಂಖ್ಯೆಯನ್ನು ಗಣನೀಯವಾಗಿ ಕಡಿತಗೊಳಿಸಲಾಗಿದೆ. ಸದ್ಯಕ್ಕೆ ಮಧ್ಯಪ್ರದೇಶ, ರಾಜಸ್ಥಾನ, ಹಿಮಾಚಲ ಪ್ರದೇಶ, ಉತ್ತರಾಖಂಡ ಮತ್ತು ದೆಹಲಿಯಿಂದ ತಲಾ ಒಂದು ಬಸ್ ಮಾತ್ರ ಕಾರ್ಯನಿರ್ವಹಿಸುತ್ತಿದೆ ಎಂದು ಫ್ರಿ ಪ್ರೆಸ್ ಜರ್ನಲ್ ವರದಿ ಮಾಡಿದೆ.
ಜನವರಿ 22 ರಂದು ಪ್ರಾಣ ಪ್ರತಿಷ್ಠಾ ಸಮಾರಂಭದ ನಂತರ ಅಯೋಧ್ಯೆಗೆ ಬರುವ ಭಕ್ತರ ಸಂಖ್ಯೆ ಹೆಚ್ಚಾಯಿತು. ಜನವರಿಯಿಂದ ಮಾರ್ಚ್ 2024 ರವರೆಗೆ ಪ್ರತಿದಿನ ಸುಮಾರು 1.5 ಲಕ್ಷ ಭಕ್ತರು ಭೇಟಿ ನೀಡುತ್ತಿದ್ದರು. ಆದರೆ, ಏಪ್ರಿಲ್ನಲ್ಲಿ ಈ ಸಂಖ್ಯೆ ಕಡಿಮೆಯಾಯಿತು ಮತ್ತು ಏಪ್ರಿಲ್ನಿಂದ ಮೇವರೆಗೆ ಸುಮಾರು 1 ಲಕ್ಷ ಭಕ್ತರು ಭೇಟಿ ನೀಡಿದ್ದರು. ಇತ್ತೀಚೆಗೆ, ಈ ಅಂಕಿ ಅಂಶವು 60,000 ಮತ್ತು 80,000 ಕ್ಕೆ ಇಳಿದಿದೆ. ಮಂಗಳವಾರ 83,000, ಶನಿವಾರ 70,000 ಮತ್ತು ಭಾನುವಾರ 78,000 ಭಕ್ತರು ಭೇಟಿ ನೀಡುತ್ತಿದ್ದಾರೆ.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications