'ಪಠಾನ್' ಚಿತ್ರಕ್ಕೆ ಬ್ಯಾನ್ ಬಿಸಿ: ಕೇಸರಿ ಉಡುಪು ತೊಟ್ಟ ನಟಿ ದೀಪಿಕಾ ವಿರುದ್ಧ ಬಿಜೆಪಿ ಸಚಿವನ ವಾಗ್ದಾಳಿ
ನವದೆಹಲಿ, ಡಿಸೆಂಬರ್ 14: ಶಾರುಖ್ ಖಾನ್ ಮತ್ತು ದೀಪಿಕಾ ಪಡುಕೋಣೆ ನಟನೆಯ 'ಪಠಾನ್' ಚಿತ್ರದ ಹಾಡು ಭಾರೀ ವಿವಾದವನ್ನು ಹುಟ್ಟುಹಾಕಿದೆ.
ಹೊಸ ಹಾಡು 'ಬೇಷರಂ ರಂಗ್'ಗೆ ಬಿಜೆಪಿಯ ಮುಖಂಡರು ಖ್ಯಾತೆ ತೆಗೆದಿದ್ದಾರೆ.
ಬಿಡುಗಡೆಯಾದಾಗಿನಿಂದಲೂ ಪಠಾನ್ ಚಿತ್ರದ ಮೊದಲ ಹಾಡು ಟ್ರೆಂಡಿಂಗ್ ಆಗಿದೆ. ಇದು ಒಂದಿಲ್ಲೊಂದು ವಿವಾದಕ್ಕೆ ಕಾರಣವಾಗುತ್ತಿದೆ.
ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ 'ಬೇಷರಂ ರಂಗ್' ಹಾಡಿನ ಆಕ್ಷೇಪಗಳನ್ನು ವ್ಯಕ್ತಪಡಿಸಿದ್ದಾರೆ.

ಸ್ಥಳೀಯ ಮಾಧ್ಯಮಗಳೊಂದಿಗೆ ಮಾತನಾಡಿರುವ ವಿಡಿಯೋವನ್ನು ಹಂಚಿಕೊಂಡಿರುವ ಸಚಿವ ನರೋತ್ತಮ್ ಮಿಶ್ರಾ, 'ಮಧ್ಯಪ್ರದೇಶದಲ್ಲಿ ಚಿತ್ರವನ್ನು ಬಿಡುಗಡೆ ಮಾಡಲು ಅನುಮತಿ ನೀಡಬೇಕೇ ಅಥವಾ ಬೇಡವೇ ಎಂಬುದರ ಬಗ್ಗೆ ಚಿಂತಿಸಲಾಗುತ್ತಿದೆ' ಎಂದು ಟ್ವೀಟ್ ಮಾಡಿದ್ದಾರೆ.
ಹಾಡಿನಲ್ಲಿ ಉಡುಗೆಗಳ ಆಯ್ಕೆ ಮತ್ತು ಕೆಲವು ಹಾಡಿನ ಸೀಕ್ವೆನ್ಸ್ಗಳಲ್ಲಿ ದೀಪಿಕಾ ಧರಿಸಿರುವ ವೇಷಭೂಷಣಗಳ ಬಣ್ಣ ಕೇಸರಿ ಇದೆ ಎಂದು ಅವರು ಆಕ್ಷೇಪಿಸಿದ್ದಾರೆ.
In #BeshramRang song #DeepikaPadukone is shown wearing saffron clothes & doing cheap vulgar acts. Bollywood is deliberately making fun of divine color of Hinduism. while #Pathaan SRK is wearing green clothes. This is also hidden agenda of #LoveJihad.
— Shanavi (@ShinyGirl111) December 12, 2022
Boycott #BollywoodKiGandagi pic.twitter.com/VZak4uQnxd
ಹಿಂದಿಯಲ್ಲಿ ಟ್ವೀಟ್ ಮಾಡಿರುವ ನರೋತ್ತಮ್ ಮಿಶ್ರಾ, 'ಮೊದಲ ನೋಟದಲ್ಲಿ ಹಾಡಿನಲ್ಲಿರುವ ವೇಷಭೂಷಣಗಳು ಆಕ್ಷೇಪಾರ್ಹವಾಗಿವೆ. 'ತುಕ್ಡೆ ತುಕ್ಡೆ ಗ್ಯಾಂಗ್' ಅನ್ನು ಬೆಂಬಲಿಸುವ ನಟಿ ದೀಪಿಕಾ ಪಡುಕೋಣೆ ಪಠಾಣ್ ಚಿತ್ರದ ಹಾಡಿನಲ್ಲಿದ್ದಾರೆ. ವೇಷಭೂಷಣಗಳು ಹೆಚ್ಚು ಆಕ್ಷೇಪಾರ್ಹವಾಗಿದ್ದು, ಇಂತಹ ಹಾಡನ್ನು ಚಿತ್ರೀಕರಿಸಲಾಗಿದೆ. ಇದೊಂದು ಕೊಳಕು ಮನಸ್ಥಿತಿ. ಹಾಡುಗಳ ದೃಶ್ಯಗಳು ಮತ್ತು ವೇಷಭೂಷಣಗಳನ್ನು ಸರಿಪಡಿಸಬೇಕು. ಇಲ್ಲದಿದ್ದರೆ, ಮಧ್ಯಪ್ರದೇಶದಲ್ಲಿ ಚಿತ್ರವನ್ನು ಬಿಡುಗಡೆ ಮಾಡಲು ಅನುಮತಿಸಬೇಕೇ ಅಥವಾ ಬೇಡವೇ ಎಂದು ನಾವು ಪರಿಗಣಿಸುತ್ತೇವೆ' ಎಂದು ತಿಳಿಸಿದ್ದಾರೆ.

ಕುಮಾರ್ ಅವರ ಸಾಹಿತ್ಯದೊಂದಿಗೆ ವಿಶಾಲ್-ಶೇಖರ್ ಸಂಯೋಜಿಸಿದ ಪೆಪ್ಪಿ ಹಾಡು ಶಾರುಖ್ ಖಾನ್ ಮತ್ತು ದೀಪಿಕಾ ಪಡುಕೋಣೆ ನಡುವಿನ ಹಾಟ್ ಕೆಮಿಸ್ಟ್ರಿಯನ್ನು ತೋರಿಸುತ್ತದೆ.
ದೀಪಿಕಾ ಅವರ ನೃತ್ಯ, ಶಾರುಖ್ರ ಹಾಟ್ ಲುಕ್ ಅನೇಕ ಪಡ್ಡೆ ಹುಡುಗರ ಮನಸ್ಸು ಗೆದ್ದಿದೆ. ಟ್ವಿಟ್ಟರ್ನಲ್ಲಿ ಟ್ರೆಂಡ್ ಆಗಿರುವ ಹಾಡಿಕೆ ಕೋಟ್ಯಂತರ ಅಭಿಮಾನಿಗಳು ಭೇಷ್ ಎಂದಿದ್ದಾರೆ. ಆದರೆ, ಈಗ ವಿವಾದ ಹುಟ್ಟಿಕೊಂಡಿದೆ. ಇದಕ್ಕೆ ಚಿತ್ರದ ತಯಾರಕರು ಹೇಗೆ ಪ್ರತಿಕ್ರಯಿಸುತ್ತಾರೆಂದು ಕಾದು ನೋಡಬೇಕಿದೆ.
'ಪಠಾನ್' ಜನವರಿ 25, 2023 ರಂದು ಥಿಯೇಟರ್ಗಳಿಗೆ ಅಪ್ಪಳಿಸಲಿದೆ.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications