RSS ಕೌರವರು ಎಂದು ಟೀಕೆ: ರಾಹುಲ್ ಗಾಂಧಿ ವಿರುದ್ಧ ದಾಖಲಾಯ್ತು ಮಾನನಷ್ಟ ಮೊಕದ್ದಮೆ, ಪ್ರಕರಣವೇನು? ತಿಳಿಯಿರಿ
ನವದೆಹಲಿ, ಮಾರ್ಚ್ 31: 'ಮೋದಿ' ಉಪನಾಮ ಕುರಿತು ಟೀಕೆ ವಿಚಾರವಾಗಿ ಇತ್ತೀಚೆಗಷ್ಟೇ ಸೂರತ್ ಕೋರ್ಟ್ನಿಂದ ಶಿಕ್ಷೆಗೆ ಗುರಿಯಾಗಿ ಲೋಕಸಭೆ ಸದಸ್ಯತ್ವದಿಂದ ಅನರ್ಹಗೊಂಡ ಕಾಂಗ್ರೆಸ್ ರಾಹುಲ್ ಗಾಂಧಿ ವಿರುದ್ಧ ಮತ್ತೊಂದು ಮಾನನಷ್ಟ ಮೊಕದ್ದಮೆ ದಾಖಲಾಗಿದೆ.
ಭಾರತ್ ಜೋಡೋ ಯಾತ್ರೆಯ ನೇತೃತ್ವ ವಹಿಸಿದ್ದ ರಾಹುಲ್ ಗಾಂಧಿಯವರು ಯಾತ್ರೆ ವೇಳೆ ಸಾರ್ವಜನಿಕವಾಗಿ ನೀಡಿದ್ದ ಹೇಳಿಕೆಯಿಂದ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಜನವರಿಯಲ್ಲಿ ನಡೆದ ಭಾರತ್ ಜೋಡೋ ಯಾತ್ರೆಯ ವೇದಿಕೆ ಕಾರ್ಯಕ್ರಮವೊಂದರಲ್ಲಿ 'ರಾಷ್ಟ್ರೀಯ ಸ್ವಯಂಸೇವಕ ಸಂಘ' (RSS) ಅನ್ನು 21 ನೇ ಶತಮಾನದ ಕೌರವರೊಂದಿಗೆ ರಾಹುಲ್ ಗಾಂಧಿ ಅವರು ಹೋಲಿಕೆ ಮಾಡಿ ಮಾತನಾಡಿದ್ದರು. ಆರ್ಎಸ್ಎಸ್ ನವರು ಈಗ ಖಾಕಿ ಹಾಫ್ ಪ್ಯಾಂಟ್ ಧರಿಸಿದ್ದಾರೆ. ಕೈಯಲ್ಲಿ ಲಾಠಿ ಹಿಡಿದು ಶಾಖಾಗಳಲ್ಲಿದ್ದಾರೆ. ಭಾರತದ 2-3 ಬಿಲಿಯನೇರ್ಗಳು ಕೌರವರ ಜೊತೆ ನಿಂತಿದ್ದಾರೆ ಎಂದು ರಾಹುಲ್ ಗಾಂಧಿ ಟೀಕಿಸಿದ್ದರು.
ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮೇಲಿನ 'ಕೌರವರು' ಎಂಬ ಟೀಕೆಗೆಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ವಿರುದ್ಧ ಹರಿದ್ವಾರದ ನ್ಯಾಯಾಲಯದಲ್ಲಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಾಗಿದೆ. RSS ಸ್ವಯಂಸೇವಕ ಎಂದು ಹೇಳಿಕೊಂಡಿರುವ ಕಮಲ್ ಭಡೋರಿಯಾ ಎಂಬುವವರು ದೂರು ಸಲ್ಲಿಸಿರುವುದಾಗಿ ವಕೀಲ ಅರುಣ್ ಭಡೋರಿಯಾ ಹೇಳಿದ್ದಾರೆ ಎಂದು ತಿಳಿದು ಬಂದಿದೆ.
ಏಪ್ರಿಲ್ 12ರಂದು ದೂರಿನ ವಿಚಾರಣೆ
ಈ ಪ್ರಕರಣ ಕುರಿತ ದೂರನ್ನು ನ್ಯಾಯಾಲಯವು ಏಪ್ರಿಲ್ 12 ರಂದು ಕೈಗೆತ್ತಿಕೊಳ್ಳಲಿದೆ. ಭಾರತೀಯ ದಂಡ ಸಂಹಿತೆಯ (IPC) 499 ಮತ್ತು 500 ಸೆಕ್ಷನ್ಗಳ ಅಡಿಯಲ್ಲಿ ದೂರು ದಾಖಲಾಗಿದೆ. ಎರಡು ನಿಬಂಧನೆಗಳು ಕ್ರಿಮಿನಲ್ ಮಾನನಷ್ಟಕ್ಕೆ ಸಂಬಂಧಿಸಿವೆ ಮತ್ತು ಗರಿಷ್ಠ ಎರಡು ವರ್ಷಗಳ ಜೈಲು ಶಿಕ್ಷೆಯನ್ನು ಸೂಚಿಸುತ್ತವೆ ಎಂದು ವಕೀಲರು ತಿಳಿಸಿದ್ದಾರೆ.

ಆರ್ಎಸ್ಎಸ್ 21 ನೇ ಶತಮಾನದಲ್ಲಿ ಖಾಕಿ ಹಾಫ್ ಪ್ಯಾಂಟ್ ಧರಿಸಿದ್ದಾರೆ. ಕೈಯಲ್ಲಿ ಲಾಠಿ ಹಿಡಿದು ಶಾಖಾಗಳಲ್ಲಿದ್ದಾರೆ. ಭಾರತದ 2-3 ಬಿಲಿಯನೇರ್ಗಳು ಕೌರವರ ಜೊತೆ ನಿಂತಿದ್ದಾರೆ ಎಂದು ರಾಹುಲ್ ಗಾಂಧಿ ಟೀಕಿಸಿದ್ದರು. ಈ ಸಂಬಂ ಧ ಕಳೆದ ಜನವರಿ 11 ರಂದು ಕಮಲ್ ಭಡೋರಿಯಾ ಅವರು ರಾಹು್ಲ ಗಾಂಧಿಯವರಿಗೆ ಲೀಗಲ್ ನೋಟಿಸ್ ಕಳುಹಿಸಿದ್ದರೂ ಅವರು ಉತ್ತರಿಸಲಿಲ್ಲ ಎನ್ನಲಾಗಿದೆ. ಹೀಗಾಗಿ ಅವರ ಮೇಲೆ ದೂರು ದಾಖಲಿಸಲಾಗಿದೆ ಎಂದು ವಕೀಲರು ತಿಳಿಸಿದ್ದಾರೆ.
ರಾಹುಲ್ ಗಾಂಧಿಗೆ ಲಲಿತ್ ಮೋದಿ ಎಚ್ಚರಿಕೆ
ಮೋದಿ ಉಪನಾಮ ಪ್ರಕರಣ ಸಂಬಂದ, ಇದೇ ಮಾರ್ಚ್ 23 ರಂದು ಸೂರತ್ನ ನ್ಯಾಯಾಲಯವು ಮಾನನಷ್ಟ ಮೊಕದ್ದಮೆಯಲ್ಲಿ ಗಾಂಧಿಯನ್ನು ದೋಷಿ ಎಂದು ಘೋಷಿಸಿತ್ತು. ಅವರಿಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿತು. ಇದಾಗಿ ಒಂದು ದಿನದ ನಂತರ ಅವರನ್ನು ಸಂಸತ್ತಿನ ಸದಸ್ಯತ್ವ ಸ್ಥಾನದಿಂದ ಸಚಿವಾಲಯವ ಅನರ್ಹ ಮಾಡಿ ಅಧಿಸೂಚನೆ ಹೊರಡಿಸಿತ್ತು.
ಅಷ್ಟೇ ಅಲ್ಲದೇ ಲಂಡನ್ ನಲ್ಲಿರುವ ಐಪಿಎಲ್ ಸಂಸ್ಥಾಪಕ ಲಲಿತ್ ಮೋದಿ ಅವರು ಸಹ ರಾಹುಲ್ ಗಾಂಧಿ ವಿರುದ್ಧ ಕೆಂಡ ಕಾರಿದ್ದಾರೆ. 'ಮೋದಿ' ಉಪನಾಮ ವಿವಾದ ಕುರಿತಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಬ್ರಿಟನ್ ಕೋರ್ಟ್ ನಲ್ಲಿ ದೂರು ದಾಖಲಿಸುವುದಾಗಿ ಅವರು ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ಟ್ವಿಟ್ ಮಾಡಿ ಲಲಿತ್ ಮೋದಿಯವರು ರಾಹುಲ್ ಗಾಂಧಿಯವರಿಗೆ ಎಚ್ಚರಿಕೆ ನೀಡಿದ್ದರು.
-
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ: 13,712 ಪುಟಗಳ ಚಾರ್ಜ್ಶೀಟ್ ಸಲ್ಲಿಸಿದ ಎಸ್ಐಟಿ -
Viral Video: 'ಓಂಕಾರ' ಚಿತ್ರದ ಬೀಡಿ ಜಲೈಲೆ ಹಾಡಿಗೆ ಸಖತ್ ಸ್ಟೆಪ್ಸ್ ಹಾಕಿದ ಬ್ರೆಜಿಲ್ ಬೆಡಗಿಯರು -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ












Click it and Unblock the Notifications