ಆರ್.ಎಸ್.ಎಸ್ ವಿರುದ್ಧ ಹೇಳಿಕೆ, ಕೋರ್ಟಿಗೆ ಹಾಜರಾಗಲಿದ್ದಾರೆ ರಾಹುಲ್
ಮಹಾತ್ಮಾ ಗಾಂಧಿ ಹತ್ಯೆಗೆ ಆರ್.ಎಸ್.ಎಸ್ ಕಾರಣ ಎಂದು ಹೇಳಿದ್ದಾರೆ ಎನ್ನಲಾದ ಪ್ರಕರಣದಲ್ಲಿ ರಾಹುಲ್ ಗಾಂಧಿ ಇಂದು ಕೋರ್ಟಿಗೆ ಹಾಜರಾಗಲಿದ್ದಾರೆ.
ಬೆಂಗಳೂರು, ಜನವರಿ 30: ನಾಳೆ (ಜನವರಿ 31) 'ಮಹಾತ್ಮಾ ಗಾಂಧಿ ಹತ್ಯೆಗೆ ಆರ್.ಎಸ್.ಎಸ್ ಕಾರಣ' ಎಂದು ಹೇಳಿದ್ದಾರೆ ಎನ್ನಲಾದ ಪ್ರಕರಣದಲ್ಲಿ ರಾಹುಲ್ ಗಾಂಧಿ ಇಂದು ಕೋರ್ಟಿಗೆ ಹಾಜರಾಗಲಿದ್ದಾರೆ. ಥಾಣೆಯ ಭಿವಾಂಡಿ ಕೋರ್ಟಿನಲ್ಲಿ ಈ ಸಂಬಂಧ ಸೋಮವಾರ ಮಾನನಷ್ಟ ಮೊಕದ್ದಮೆ ಪ್ರಕರಣದ ವಿಚಾರಣೆ ನಡೆಯಲಿದೆ.
ಕಳೆದ ವಿಚಾರಣೆ ವೇಳೆ ಭಿವಾಂಡಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ರಾಹುಲ್ ಗಾಂಧಿ ಹಾಜರಾಗಿದ್ದರಿಂದ ಅವರಿಗೆ ಜಾಮೀನು ನೀಡಲಾಗಿತ್ತು. ನಂತರ ವಿಚಾರಣೆಯನ್ನು ಇಂದಿಗೆ (ಜನವರಿ30) ಮುಂದೂಡಲಾಗಿತ್ತು.[ರಾಣೆಬೆನ್ನೂರಿನ ಬಿಜೆಪಿ ಯುವ ಮೋರ್ಚಾದಿಂದ ರಾಹುಲ್ ಗೆ ಹೊಸ ಅಂಗಿ ರವಾನೆ]

ಇಂದು ರಾಹುಲ್ ಗಾಂಧಿ ಕೋರ್ಟ್ ಮುಂದೆ ಹಾಜರಾಗಲಿದ್ದಾರೆ ಎಂದು ಅವರ ವಕೀಲ ನಾರಾಯಣ ಐಯರ್ ಸ್ಪಷ್ಟಪಡಿಸಿದ್ದಾರೆ. ರಾಹುಲ್ ಗಾಂಧಿ ಜತೆ ಮುಂಬೈ ಕಾಂಗ್ರೆಸ್ ಅಧ್ಯಕ್ಷ ಸಂಜಯ್ ನಿರುಪಮ್ ಕೂಡಾ ಹಾಜರಾಗಲಿದ್ದಾರೆ.
ಮಾರ್ಚ್ 6, 2014ರಂದು ಲೋಕಸಭಾ ಚುನಾವಣೆ ಸಂದರ್ಭ ರಾಹುಲ್ ಗಾಂಧಿ ಭಿವಾಂಡಿಯಲ್ಲಿ ಬಾಷಣ ಮಾಡಿದ್ದರು. ಈ ಸಂದರ್ಭ ಮಹಾತ್ಮಾ ಗಾಂಧಿ ಹತ್ಯೆಗೆ ಆರ್.ಎಸ್.ಎಸ್ ಕಾರಣ ಎಂದಿದ್ದಾರೆ ಎನ್ನಲಾಗಿದೆ. ಈ ಕುರಿತು ಸ್ಥಳೀಯ ಆರ್.ಎಸ್.ಎಸ್ ನಾಯಕ ರಾಜೇಶ್ ಕುಂಟೆ ಪ್ರಕರಣ ದಾಖಲಿಸಿದ್ದರು.[ರಾಹುಲ್ ಗಾಂಧಿಯನ್ನು ದಿನಾ ಶಾಲೆಗೆ ಬಿಡಲು ಸಿಧು ಕಾಂಗ್ರೆಸ್ಸಿಗೆ ಸೇರಿದ್ದಾ?]
ಈ ಹಿಂದೆ ಸುಪ್ರಿಮ ಕೋರ್ಟ್ ಭಿವಾಂಡಿಯಲ್ಲಿ ನಡೆಯುತ್ತಿರುವ ಕ್ರಿಮಿನಲ್ ವಿಚಾರಣೆಯಲ್ಲಿ ಮಧ್ಯ ಪ್ರವೇಶಿಸಬೇಕು ಎಂದು ರಾಹುಲ್ ಗಾಂಧಿ ಕೋರಿಕೊಂಡಿದ್ದರು. ಆದರೆ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಎಂದು ಸುಪ್ರಿಂ ಕೊರ್ಟ್ ಹೇಳಿದ ನಂತರ ತಾನು ವಿಚಾರಣೆಯನ್ನು ಎದುರಿಸುವುದಾಗಿ ರಾಹುಲ್ ಹೇಳಿದ್ದರು. ಅದೇ ರೀತಿ ಪ್ರಕರಣ ರದ್ದು ಪಡಿಸುವಂತೆ ಬಾಂಬೆ ಹೈಕೋರ್ಟಿನಲ್ಲಿ ಸಲ್ಲಿಸಿದ್ದ ಅರ್ಜಿಯನ್ನೂ ರಾಹುಲ್ ಹಿಂದಕ್ಕೆ ಪಡೆದುಕೊಂಡಿದ್ದರು.
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications