ತ್ರಿಪಲ್ ತಲಾಖ್ ವಿರುದ್ಧ ಹೋರಾಟ ಮಾಡಿದ್ದ ಶಯರಾ ಬನೋ ಬಿಜೆಪಿ ಪಕ್ಷ ಸೇರ್ಪಡೆ
ಡೆಹರಾಡೂನ್, ಅಕ್ಟೋಬರ್ 11: ಸುಪ್ರೀಂ ಕೋರ್ಟ್ ನಲ್ಲಿ ತ್ರಿಪಲ್ ತಲಾಖ್ ವಿರುದ್ಧ ಧ್ವನಿ ಎತ್ತಿದ್ದ ಶಯರಾ ಬನೋ ಎಂಬ ಮಹಿಳೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಶನಿವಾರ ಉತ್ತರಖಾಂಡ್ ರಾಜ್ಯದ ಡೆಹರಾಡೂನ್ ನಗರದ ಬಿಜೆಪಿ ಪಕ್ಷದ ಕಚೇರಿಯಲ್ಲಿ ಶಯರಾ ಬನೋ ಕಮಲದ ಬಾವುಟ ಹಿಡಿದು ಸೇರ್ಪಡೆಗೊಂಡರು. ಉತ್ತರಾಖಂಡ ರಾಜ್ಯದ ಬಿಜೆಪಿ ಅಧ್ಯಕ್ಷ ಬಸೀಂಧರ್ ಭಗತ್ ಮತ್ತು ಸಂಘಟನಾ ಕಾರ್ಯದರ್ಶಿ ಅಜಯ್ ಕುಮಾರ್ ಸಮ್ಮುಖದಲ್ಲಿ ಕಾರ್ಯಕ್ರಮ ನಡೆಯಿತು.
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ತ್ರಿಪಲ್ ತಲಾಖ್ ಗೆ ರದ್ದು ಮಾಡಿತ್ತು. ಈ ಹಿಂದೆ ತ್ರಿಪಲ್ ತಲಾಖ್ ವಿರುದ್ಧ ಶಯರಾ ಬನೋ ಹೋರಾಟ ಮಾಡಿದ್ದರು. ಅದೇ ರೀತಿ ಬಿಜೆಪಿ ಪಕ್ಷದ ಸಿದ್ಧಾಂತಗಳನ್ನು ಜನರ ಮುಂದೆ ತೆಗೆದುಕೊಂಡು ಹೋಗಲಿದ್ದಾರೆ ಎಂದು ಉತ್ತರಾಖಂಡ ರಾಜ್ಯದ ಬಿಜೆಪಿ ಅಧ್ಯಕ್ಷ ತಿಳಿಸಿದರು.

ಅಲ್ಪಸಂಖ್ಯಾತ ಸಮುದಾಯದ ಮಹಿಳೆಯವರೆಗೂ ಬಿಜೆಪಿಯ ಸಿದ್ಧಾಂತಗಳನ್ನು ತಲುಪಿಸುವಲ್ಲಿ ಶಯರಾ ಬನೋ ಅವರು ಕೆಲಸ ಮಾಡಲಿದ್ದಾರೆ ಎಂದು ಉತ್ತರಾಖಂಡ ರಾಜ್ಯದ ಬಿಜೆಪಿ ಅಧ್ಯಕ್ಷ ಬಸೀಂಧರ್ ಭಗತ್ ಹೇಳಿದ್ದಾರೆ.
ಬಿಜೆಪಿ ಪಕ್ಷ ಸೇರ್ಪಡೆ ಬಳಿಕ ಮಾತನಾಡಿರುವ ಶಯರಾ ಬನೋ, ""ಪಕ್ಷ ನನ್ನನ್ನು ಎತ್ತರಕ್ಕೆ ಬೆಳೆಸಿದಲ್ಲಿ ಜನರನ್ನು ಬಿಜೆಪಿಯತ್ತ ಕರೆತರುವ ಕೆಲಸ ಮಾಡುತ್ತೇನೆ. ನನ್ನನ್ನು ಬಿಜೆಪಿಗೆ ಸೇರುವಂತೆ ಪ್ರೇರಿಪಿಸಿದ ವಿಚಾರಧಾರೆಗಳನ್ನು ಜನರಿಗೆ ತಿಳಿ ಹೇಳುತ್ತೇನೆ. ವಿಶೇಷವಾಗಿ ಮುಸ್ಲಿಂ ಮಹಿಳೆಯರಿಗೆ ಬಿಜೆಪಿ ಪಕ್ಷದ ಸಿದ್ಧಾಂತಗಳ ಮನವರಿಕೆ ಮಾಡುವ ಕೆಲಸ ಮಾಡುತ್ತೇನೆ. ಪಕ್ಷ ನೀಡಿದ ಜವಾಬ್ದಾರಿಯನ್ನು ಶ್ರದ್ಧೆಯಿಂದ ಮಾಡುತ್ತೇನೆ ಎಂದರು.
तीन तलाक के खिलाफ आवाज उठाने वाली बहादुर महिला सायरा बानो जी ने आज प्रदेश कार्यालय देहरादून में प्रदेश अध्यक्ष श्री @bansidharbhagat जी एवं प्रदेश महामंत्री संगठन श्री @ajaeybjp जी की उपस्थिति में भाजपा की सदस्यता ग्रहण की। pic.twitter.com/1yxMbnG8pj
— BJP Uttarakhand (@BJP4UK) October 10, 2020
ಬಿಜೆಪಿ ಪ್ರಾಥಮಿಕ ಸದಸ್ಯತ್ವ ಪಡೆದಿರುವ ಶಯರಾ ಬನೋ ಅವರಿಗೆ ಪಕ್ಷ ಇನ್ನು ಯಾವುದೇ ಜವಾಬ್ದಾರಿಗಳನ್ನು ನೀಡಿಲ್ಲ. ಆದರೆ ಶಯರಾ ಬನೋ 2022ರ ಉತ್ತರಾಖಂಡ್ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಮಹಾದಾಸೆ ಹೊಂದಿದ್ದಾರೆ ಎಂದು ತಿಳಿದುಬಂದಿದೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ..












Click it and Unblock the Notifications