ಕ್ರೈಸ್ತ ಧರ್ಮ ಗುರುವಿನಿಂದ ವಿವಾದದ ಬಿರುಗಾಳಿ, ಶಾ ತೀವ್ರ ವಾಗ್ದಾಳಿ
ಭಾರತದಲ್ಲಿ ಪ್ರಜಾಪ್ರಭುತ್ವ ಮತ್ತು ಜಾತ್ಯತೀತತೆ ಸಂಕಷ್ಟದಲ್ಲಿದ್ದು, ರಾಜಕೀಯ ವಾತಾವರಣ ಪ್ರಕ್ಷುಬ್ದಮಯವಾಗಿದೆ. 2019ರ ಲೋಕಸಭೆ ಚುನಾವಣೆಯವರೆಗೆ ದೇಶಕ್ಕಾಗಿ ಪ್ರಾರ್ಥಿಸಿ ಎಂದು ಪತ್ರ ಬರೆದಿರುವ ದೆಹಲಿಯ ಕ್ರೈಸ್ತ ಧರ್ಮಗುರು ವಿವಾದದ ಬಿರುಗಾಳಿಯನ್ನೇ ಎಬ್ಬಿಸಿದ್ದಾರೆ.
2019ರ ಲೋಕಸಭೆ ಚುನಾವಣೆ ಬರುವವರೆಗೆ ಪ್ರತಿ ಶುಕ್ರವಾರ, ದೇಶದಲ್ಲಿರುವ ಎಲ್ಲ ಚರ್ಚ್ ಗಳಲ್ಲಿ ಪ್ರಾರ್ಥನೆ ಸಲ್ಲಿಸಬೇಕು, ಹೊಸ ಸರಕಾರದ ಉದಯವಾಗಬೇಕು ಎಂದು ಪತ್ರ ಬರೆದಿರುವ ದೆಹಲಿಯ ಅನಿಲ್ ಜೆಟಿ ಕೌಟೊ ಎಂಬುವವರು, ಜಾತ್ಯತೀತತೆ ಅಪಾಯದಲ್ಲಿದೆ ಎಂದು ಹೇಳುತ್ತಲೇ ಜಾತಿಯ ಕಿಡಿ ಹಚ್ಚಿದ್ದಾರೆ.
ಅವರು ಬರೆದಿರುವ ಪತ್ರದಲ್ಲಿ, ಹಿಂದೂ ರಾಷ್ಟ್ರೀಯ ಮೂಲಭೂತವಾದಿಗಳಿಂದ ದೇಶದಲ್ಲಿರುವ ಕ್ರಿಶ್ಚಿಯನ್ನರ ಮೇಲೆ ಮಾತ್ರವಲ್ಲ ಮತ್ತು ಮುಸ್ಲಿಂ ಧಾರ್ಮಿಕ ಅಲ್ಪಸಂಖ್ಯಾತರ ಮೇಲೆ ನಿರಂತರವಾಗಿ ದಾಳಿಗಳಾಗುತ್ತಿವೆ. ಬಡವರು, ಗುಡ್ಡಗಾಡು ಜನರು, ದಲಿತರನ್ನು ಗೌರವದಿಂದ ಕಾಣುವಂತಾಗಲು ನಿರಂತರವಾಗಿ ಪ್ರಾರ್ಥಿಸಿ ಎಂದು ಹೇಳಿರುವುದು ಭಾರೀ ಟೀಕೆಗೆ ಗ್ರಾಸವಾಗಿದೆ.
ಮೇ 8ರಂದು ಬರೆಯಲಾಗಿರುವ ಪತ್ರದಲ್ಲಿ, ದೇಶದ ಉನ್ನತಿಗಾಗಿ ವಾರಕ್ಕೊಂದು ಉಪವಾಸ ಮಾಡಿರಿ ಮತ್ತು ನಾನು ಬರೆದಿರುವ ಪತ್ರವನ್ನು ಪ್ರತಿ ಸಂಡೇ ಸರ್ವೀಸ್ ನಲ್ಲಿ ತಪ್ಪದೆ ಓದಬೇಕು ಎಂದು ಆಗ್ರಹಿಸಿದ್ದಾರೆ. ಆರ್ಚ್ ಬಿಷಪ್ ಬರೆದಿರುವ ಪತ್ರಕ್ಕೆ ಎಲ್ಲ ಕಡೆಯಿಂದ ಟೀಕೆಗಳು ಬರುತ್ತಿವೆ. ಆರ್ಚ್ ಬಿಷಪ್ ಅವರ ಕಚೇರಿ ಕೂಡ, ಇದು ಯಾವುದೇ ರಾಜಕೀಯ ಪಕ್ಷದ ಪರವಾಗಿ ಬರೆದಿಲ್ಲ ಎಂದು ಸ್ಪಷ್ಟೀಕರಣ ನೀಡಿದೆ.

ಆರ್ಚ್ ಬಿಷಪ್ ರನ್ನು ಝಾಡಿಸಿದ ಶಾ
ಧರ್ಮಕ್ಕೆ ಸಂಬಂಧಿಸಿದಂತೆ ಯಾರೂ ಈ ರೀತಿ ದ್ವೇಷದ ಕಿಡಿ ಹಚ್ಚುವಂಥ ಹೇಳಿಕೆಗಳನ್ನು ನೀಡಬಾರದು ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಆರ್ಚ್ ಬಿಷಪ್ ಅನಿಲ್ ಕೌಟೊ ಅವರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಆದರೆ, ದೇಶಕ್ಕೆ ಒಳಿತಾಗುವಂತಿದ್ದರೆ ಪ್ರಾರ್ಥನೆ ಮಾಡುವುದರಲ್ಲಿ, ಉಪವಾಸ ಮಾಡುವುದರಲ್ಲಿ ತಪ್ಪೇನಿದೆ ಎಂದು ಕೆಲ ಕ್ರಿಶ್ಚಿಯನ್ ಬೆಂಬಲಿಗರು ಪ್ರಶ್ನಿಸಿದ್ದಾರೆ.

ರಾಜನಾಥ್ ಸಿಂಗ್ ಹೇಳಿಕೆ
ಈ ಪತ್ರಕ್ಕೆ ಪ್ರತಿಕ್ರಿಯಿಸಿರುವ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು, ನಾನು ಅವರು ಬರೆದ ಆ ಪತ್ರವನ್ನು ಓದಿಲ್ಲ. ಆದರೆ, ಭಾರತದಲ್ಲಿ ಅಲ್ಪಸಂಖ್ಯಾತರು ಅತ್ಯಂತ ಸುರಕ್ಷಿತವಾಗಿದ್ದಾರೆ. ಜಾತಿ ಮತ್ತು ಧರ್ಮದ ಆಧಾರದ ಮೇಲೆ ಯಾರಿಗೂ ತಾರತಮ್ಯ ಮಾಡುವುದಿಲ್ಲ. ಇಂಥ ಅನಗತ್ಯ ಹೇಳಿಕೆಗಳನ್ನು ಸಹಿಸುವುದೂ ಇಲ್ಲ ಎಂದು ಎಚ್ಚರಿಕೆಯನ್ನು ನೀಡಿದ್ದಾರೆ.

ಅಂದು ಬಾಯಿಬಿಡದ ಆರ್ಚ್ ಬಿಷಪ್
ಫಾದರ್ ಟಾಮ್ ಅವರನ್ನು ಮತ್ತು ಸಿಸ್ಟರ್ ಸ್ಯಾಲಿ ಅವರನ್ನು ಯೆಮೆನ್ ನಲ್ಲಿ ಐಸಿಸ್ ಬಿಗಿಮುಷ್ಟಿಯಿಂದ ಪಾರು ಮಾಡಿದಾಗ ಬಾಯಿಬಿಡದ ದೆಹಲಿಯ ಆರ್ಚ್ ಬಿಷಪ್, 2019ರ ಲೋಕಸಭೆ ಚುನಾವಣೆ ಬರುತ್ತಿದ್ದಂತೆ ಏಕೆ ಇದ್ದಕ್ಕಿಂತೆ ದೇಶದ ಪ್ರಜಾಪ್ರಭುತ್ವಕ್ಕೆ, ಜಾತ್ಯತೀತತೆಗೆ ಅಪಾಯವಿದೆ ಎಂದು ಹೇಳುತ್ತಿದ್ದಾರೆ ಎಂದು ಟ್ವಿಟ್ಟಿಗರೊಬ್ಬರು ದೆಹಲಿಯ ಧರ್ಮಗುರುವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಹಿಂದೂಸ್ತಾನದಲ್ಲಿ ಹಿಂದೂಗಳೆಂದರೆ ಕೆಟ್ಟವರೆ?
ಗೋವಾದ ಮಾಜಿ ಕಾಂಗ್ರೆಸ್ ನಾಯಕರಾಗಿರುವ ಸೇವಿಯೋ ರೋಡ್ರಿಗ್ಸ್ ಅವರು, ದೆಹಲಿಯ ಆರ್ಚ್ ಬಿಷಪ್ ನೀಡಿರುವ ಈ ಕೋಮುವಾದಿ ಹೇಳಿಕೆಯನ್ನು ಯಾವ ಟಿವಿ ಚಾನಲ್ ಗಳೂ ಚರ್ಚೆಗೆ ತೆಗೆದುಕೊಳ್ಳುತ್ತಿಲ್ಲ. ಹಿಂದೂ ಶಕ್ತಿಯನ್ನು ಸೋಲಿಸಿ ಅಂದರೆ ಅರ್ಥವೇನು? ಅದರರ್ಥ ಹಿಂದೂಸ್ತಾನದಲ್ಲಿ ಹಿಂದೂಗಳೆಂದರೆ ಕೆಟ್ಟವರೆ? ಒಂದು ವೇಳೆ ಕ್ರಿಶ್ಚಿಯನ್ನರಿಂದ ಆಗುತ್ತಿರುವ ಮತಾಂತರವನ್ನು ನಿಲ್ಲಿಸಲು ಸೋಮವಾರ ಅಥವಾ ಗುರುವಾರ ಉಪವಾಸ ಮಾಡಿ ಎಂದು ಶ್ರೀಶ್ರೀ ರವಿಶಂಕರ್ ಗುರೂಜಿ ಹೇಳಿದ್ದರೆ ಏನಾಗುತ್ತಿತ್ತು? ಶೇಮ್ ಆನ್ ದೆಹಲಿ ಆರ್ಚ್ ಬಿಷಪ್ ಎಂದು ಟೀಕಿಸಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications