ದೆಹಲಿ ಚುನಾವಣೆ: ನಾಮಪತ್ರ ಸಲ್ಲಿಸಿದ ಅರವಿಂದ್ ಕೇಜ್ರಿವಾಲ್, ಯಾವ ಕ್ಷೇತ್ರ? ಎದುರಾಳಿಗಳು ಯಾರ್ಯಾರು?
ಬೆಂಗಳೂರು, ಜನವರಿ 15: ದೆಹಲಿ ವಿಧಾನಸಭಾ ಚುನಾವಣೆ ಕಣ ರಂಗೇರುತ್ತಿದ್ದು, ಘಟಾನುಘಟಿ ನಾಯಕರ ನಾಮಪತ್ರ ಸಲ್ಲಿಕೆ ಭರಾಟೆ ಜೋರಾಗಿದೆ. ದೆಹಲಿ ಮಾಜಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಬುಧವಾರ ನಾಮಪತ್ರ ಸಲ್ಲಿಸಿದರು. ಫೆಬ್ರವರಿ 5 ರಂದು ನಡೆಯಲಿರುವ ದೆಹಲಿ ಚುನಾವಣೆಗೆ ಈಗಾಗಲೇ ಸಿದ್ಧತೆ ಆರಂಭಸಿರುವ ಅವರು ದೇವರ ಪೂಜೆ ನೆರವೇರಿಸಿ ಉಮೇರದುವಾರಿಕೆ ಸಲ್ಲಿಸಿದರು.
ಇಂದು ಬೆಳಗ್ಗೆ ನಾಮಪತ್ರ ಸಲ್ಲಿಕೆಗೂ ಮೊದಲು ಅರವಿಂದ್ ಕೇಜ್ರಿವಾಲ್ ಅವರು ವಾಲ್ಮೀಕಿ ಮತ್ತು ಹನುಮಾನ್ ದೇವಾಲಯಗಳಲ್ಲಿ ಪೂಜೆ ಸಲ್ಲಿಸಿದರು. ಅಲ್ಲಿಂದ ನೇರವಾಗಿ ಚುನವಣಾಧಿಕಾರಿಗಳ ಕಚೇರಿಗೆ ಪತ್ನಿ, ಪಕ್ಷದ ಬೆಂಬಲಿಗರ ಸಮೇತರಾಗಿ ಬಂದು ನಾಮಪತ್ರ ಫೈಲ್ ಮಾಡಿದರು.

ನಂತರ ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಅಧಿಕೃತಿ ಮಾಹಿತಿ ನೀಡಿದ ಅವರು, ನವದೆಹಲಿ ಕ್ಷೇತ್ರದಿಂದ ಸ್ಪರ್ಧೆಗೆ ಇಳಿದಿದ್ದೇನೆ. ಕಳೆದ ಎರಡು ಭಾರಿ ಎಎಪಿ ದೆಹಲಿಯಲ್ಲಿ ಅಧಿಕಾರಕ್ಕೆ ಬಂದಿದೆ. ಕಳೆದೊಂದು ದಶಕದಲ್ಲಿ ರಾಜಧಾನಿ ಜನರು ನನಗೆ ನೀಡಿರುವ ಪ್ರೀತಿ ಹಾಗೂ ಆಶೀರ್ವಾದಗಳು ನನಗೆ ಪೂರ್ಣ ಸಮರ್ಪಣೆ ಮತ್ತು ಸೇವಾ ಮನೋಭಾವದಿಂದ ಕೆಲಸ ಮಾಡಲು ಶಕ್ತಿ ತುಂಬಿದೆ. ಅವರ ನಂಬಿಕೆಯೇ ನನಗೆ ಸ್ಫೂರ್ತಿ ಎಂದರು.
ದೆಹಲಿಯ ಜನರು ಈ ಬಾರಿಯೂ ಕೆಲಸದ ರಾಜಕೀಯ ಆಯ್ಕೆ ಮಾಡುತ್ತಾರೆ ಎಂಬ ಸಂಪೂರ್ಣ ನಂಬಿಕೆ ನನಗಿದೆ. ಎಎಪಿಗೆ ಮತ್ತೊಮ್ಮೆ ಆಶೀರ್ವಾದ ಮಾಡಲಿದ್ದಾರೆ. ನಮ್ಮ ಪಕ್ಷ ಮೂರನೇ ಬಾರಿಗೆ ಅಧಿಕಾರಕ್ಕೆ ಬರಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ರಾಜ್ಯದ ತಾಯಂದಿರು, ಅಕ್ಕ ತಮ್ಮಂದಿರ ಆಯ್ಕೆ ಎಎಪಿ ಆಗಿರಲಿದೆ ಎಂಬ ನಂಬಿಕೆ ನನ್ನಲ್ಲಿದೆ ಎಂದರು. ಅವರು ನವದೆಹಲಿ ಕ್ಷೇತ್ರದಿಂದ ಬಿಜೆಪಿಯ ಪರ್ವೇಶ್ ವರ್ಮಾ ಮತ್ತು ಕಾಂಗ್ರೆಸ್ನ ಸಂದೀಪ್ ದೀಕ್ಷಿತ್ ವಿರುದ್ಧ ಕಣಕ್ಕಿಳಿದಿದ್ದಾರೆ. ದೇಶದಲ್ಲಿ ನವದೆಹಲಿಯತ್ತ ಜನರ ಚಿತ್ತ ನೆಟ್ಟಿದೆ. ಇದೀಗ ನವದೆಹಲಿ ಕ್ಷೇತ್ರವು ರಾಜಕೀಯ ಗಮನ ಸೆಳೆಯಲು ಸಜ್ಜಾಗಿದೆ.
ಪ್ರಸಕ್ತ ಸಾಲಿನ ದೆಹಲಿ ವಿಧಾನಸಭಾ ಚುನಾವಣೆ ಫೆಬ್ರವರಿ 5 ರಂದು ಎಲ್ಲ 70 ಕ್ಷೇತ್ರಗಳಿಗೆ ಒಂದೇ ಭಾರಿಯಲ್ಲಿ ಮತದಾನ ನಡೆಯಲಿದೆ. ಅಂದು ಬೆಳಗ್ಗೆಯಿಂದ ಸಂಜೆವರೆಗೆ ಮತದಾರರು ಮತದಾನ ಮಾಡಲಿದ್ದಾರೆ. ಅದಾಗಿ ಮೂರು ದಿನದ ಬಳಿಕ ಫೆಬ್ರವರಿ 8 ರಂದು ಮತ ಎಣಿಕೆ ನಡೆದು, ಫಲಿತಾಂಶ ಹೊರ ಬೀಳಲಿದೆ.
ಇಂಡಿಯಾ ಮೈತ್ರಿಕೂಟದ ಭಾಗವಾಗಿರುವ ಎಎಪಿ ಮತ್ತು ಕಾಂಗ್ರೆಸ್ ದೆಹಲಿಯಲ್ಲಿ ಪ್ರತ್ಯೇಕವಾಗಿ ಸ್ಪರ್ಧಿಸಲು ನಿರ್ಧರಿಸಿವೆ. ಇದೇ ರೀತಿ ಮಾಯಾವತಿ ನೇತೃತ್ವದ ಬಿಎಸ್ಪಿ ಸಹ ಸ್ವತಂತ್ರವಾಗಿ ಸ್ಪರ್ಧಿಸಲಿದೆ. ಇಂಡಿಯಾ ಮೈತ್ರಿಕೂಟದ ಪಕ್ಷಗಳು ಹೀಗೆ ಪ್ರತ್ಯೇಕವಾಗಿ ಕಣಕ್ಕಳಿದಿರುವುದಕ್ಕೆ ಅಮಿತ್ ಶಾ ಅವರು ವಾಗ್ದಾಳಿ ನಡೆಸಿದ್ದರು.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications