Delhi Liquor Shops Close: ಈ ದಿನ ದೆಹಲಿಯಲ್ಲಿ ಡ್ರೈ ಡೇ: ಮದ್ಯದಂಗಡಿಗಳು ಬಂದ್
ದೆಹಲಿ, ಜನವರಿ 22: ರಾಷ್ಟ್ರ ರಾಜಧಾನಿಯಲ್ಲಿ ಮದ್ಯ ಪ್ರಿಯರಿಗೆ ಶಾಕಿಂಗ್ ಸುದ್ದಿ ಹೊರ ಬಿದ್ದಿದೆ. ಚುನಾವಣೆ ಆಯೋಗವು ದೆಹಲಿಯ ಎಲ್ಲ ಸ್ಥಾನಗಳಿಗೆ ವಿಧಾನಸಭಾ ಚುನಾವಣೆ ಘೋಷಣೆ ಮಾಡಿದೆ. ಇದರ ಬೆನ್ನಲ್ಲೆ ದೆಹಲಿ ರಾಜ್ಯ ಸರ್ಕಾರವು ಫೆಬ್ರವರಿ 3 ರಿಂದ 5 ರವರೆಗೆ ಮದ್ಯ ಮಾರಾಟ, ಮದ್ಯದಂಗಡಿಗಳನ್ನು ಬಂದ್ ಮಾಡಿ ಆದೇಶಿಸಿದೆ. ಮದ್ಯ ಮಾರಾಟ ಮಾಡುವ ಯಾವುದೇ ಸಂಸ್ಥೆಗಳು ಇದ್ದರು ಬಂದ್ ಮಾಡುವಂತೆ ಸೂಚನೆ ನೀಡಿದೆ.
ದೆಹಲಿಯಲ್ಲಿ ಸದ್ಯ ಚುನಾವಣೆ ಪ್ರಕ್ರಿಯೆಗಳು ಶುರುವಾಗಿವೆ. ದೆಹಲಿ 70 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಫೆಬ್ರವರಿ 5ರಂದು ಮತದಾನ ನಡೆಯಲಿದೆ. ಫೆಬ್ರವರಿ 8ರಂದು ಮತ ಎಣಿಕೆಗೆ ನಡೆಯಲಿದೆ. ಈ ಸಂಬಂಧ ಫೆಬ್ರವರಿ 3 ರಿಂದ 5 ರವರೆಗೆ ಮದ್ಯ ಮಾರಾಟ ಬಂದ್ ಮಾಡಿ ಆದೇಶಿಸಿದೆ. ನಿಯಮ ಉಲ್ಲಂಘಿಸಿದರೆ ಕ್ರಮ ಕೈಗೊಳ್ಳಲಾಗುತ್ತದೆ.

ದೆಹಲಿ ಅಬಕಾರಿ ಆಯುಕ್ತರು ಇತ್ತೀಚೆಗೆ ಗೆಜೆಟ್ ಅಧಿಸೂಚನೆ ಹೊರಡಿಸಿದೆ. ಅದರಲ್ಲಿ 70 ಸ್ಥಾನಗಳು ಇರುವ ದೆಹಲಿ ವಿಧಾನಸಭೆ ಚುನಾವಣೆ ವೇಳೆ ಮತದಾನದ ದಿನ ಮತ್ತು ಎಣಿಕೆಯ ದಿನದಂದು ವಿವಿಧ ಅಬಕಾರಿ ಪರವಾನಗಿಗಳಿಗಾಗಿ ಅಬಕಾರಿ ನಿಯಮಗಳು-2010 ರ ಅಡಿಯಲ್ಲಿ "ಡ್ರೈ ಡೇಸ್" ಘೋಷಣೆ ಮಾಡಿದೆ.
ಮದ್ಯ ಮಾರಾಟ ಬಂದ್ ಸಮಯ
ರಾಜಧಾನಿಯಲ್ಲಿ ಫೆಬ್ರವರಿ 3 ರ ಸಂಜೆ 6 ರಿಂದ ಫೆಬ್ರವರಿ 5 ರ ಸಂಜೆ 6 ರವರೆಗೆ (ಮತದಾನದ ಮುಕ್ತಾಯಕ್ಕೆ ನಿಗದಿಪಡಿಸಿದ ಸಮಯದೊಂದಿಗೆ ಕೊನೆಗೊಳ್ಳುವ 48 ಗಂಟೆಗಳ ಅವಧಿಯಲ್ಲಿ) ಮದ್ಯ ಮಾರಾಟ ನಿಷೇಧಿದಲಾಗಿದೆ. ಈ ವೇಳೆ ಲಿಕ್ಕರ್ ಅಂಗಡಿಗಳು ತೆರೆದಿರುವುದಿಲ್ಲ.
ಈ ಡ್ರೈ ಡೇ ವೇಳೆ ಹೋಟೆಲ್, ರೆಸ್ಟೋರೆಂಟ್, ಲಿಕ್ಕರ್ ಶಾಪ್, ಎಂಎಸ್ಐಎಲ್, ಮದ್ಯ ಪೂರೈಕೆ ಸಂಸ್ಥೆಗಳಿಂದ ಎಣ್ಣೆ ಮಾರಾಟಕ್ಕೆ ಬ್ರೇಕ್ ಹಾಕಲಾಗಿದೆ ಎಂದು ಅಧಿಸೂಚನೆಯಲ್ಲಿ ವಿವರಿಸಲಾಗಿದೆ. ಈ ಸಂಬಂಧ ಅಗತ್ಯ ಕಟ್ಟೆಚ್ಚರ ವಹಿಸಿರುವ ಪೊಲೀಸರು, ಕ್ಲಬ್ಗಳು, ಸ್ಟಾರ್ ಹೋಟೆಲ್ಗಳು, ರೆಸ್ಟೋರೆಂಟ್ ಗಳ ಮೇಲೆ ಕಣ್ಣಿಡಲಿದ್ದಾರೆ.
1040 ನಾಮಪತ್ರ ಸ್ವೀಕೃತಿ
ದೆಹಲಿಯಲ್ಲಿ ಚುನಾವಣೆ ಪ್ರಯುಕ್ತ ವಿವಿಧ ರಾಜಕೀಯ ಪಕ್ಷಗಳು, ಪಕ್ಷೇತರ ಅಭ್ಯರ್ಥಿಗಳಿಂದ ಒಟ್ಟು 1040 ನಾಮಪತ್ರಗಳು ಸಲ್ಲಿಕೆ ಆಗಿವೆ. ಒಟ್ಟು 477 ಉಮೇದುವಾರಿಕೆಗಳು ತಿರಸ್ಕೃತಗೊಂಡಿವೆ. ಉಳಿದವರು ಸ್ವೀಕರಿಸಲಾಗಿದೆ. ಒಟ್ಟು 1.55 ಕೋಟಿ ನೋಂದಾಯಿತ ಮತದಾರರು ಇಲ್ಲಿದ್ದಾರೆ. ಅವರೆಲ್ಲರು ಫೆಬ್ರವರಿ 05ರಂದು ಮತದಾನ ಮಾಡಲಿದ್ದಾರೆ.
ಸದ್ಯ ರಾಜಕೀಯ ಪಕ್ಷಗಳಿಂದ ಬಿರುಸಿನ ಚುನಾವಣಾ ಪ್ರಚಾರ ನಡೆಸಿದೆ. ಮೂರನೇ ಭಾರಿ ಅಧಿಕಾರ ಹಿಡಿಯಲು ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಸಜ್ಜಾಗಿದೆ. ಎಎಪಿಯನ್ನು ಅಧಿಕಾರದಿಂದ ದೂರ ಇಡಲು, ತಾನು ದೆಹಲಿಯಲ್ಲಿ ಸರ್ಕಾರ ರಚಿಸಿ ಕಾಂಗ್ರೆಸ್ ಮತ್ತು ಬಿಜೆಪಿ ರಣತಂತ್ರ ರೂಪಿಸಿವೆ.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications