Delhi Assembly Election 2025: ಡಿಸಿಎಂ ಏಕನಾಥ ಶಿಂಧೆ ಮಹತ್ವದ ಘೋಷಣೆ
ನವದೆಹಲಿ, ಜನವರಿ 22: ದೆಹಲಿ ವಿಧಾನಸಭೆ ಚುನಾವಣೆ-2025ರ ಕಣ ಅಂತಿಗೊಂಡಿದೆ. 70 ಸದಸ್ಯ ಬಲದ ವಿಧಾನಸಭೆಗೆ ಫೆಬ್ರವರಿ 5ರಂದು ಮತದಾನ ನಡೆಯಲಿದ್ದು, ಫೆಬ್ರವರಿ 8ರಂದು ಮತ ಎಣಿಕೆ ನಡೆಯಲಿದೆ. 70 ಕ್ಷೇತ್ರದ ಚುನಾವಣಾ ಕಣದಲ್ಲಿ 699 ಅಭ್ಯರ್ಥಿಗಳಿದ್ದಾರೆ. ರಾಜ್ಯದಲ್ಲಿ ಸರ್ಕಾರ ರಚನೆ ಮಾಡಲು ಬೇಕಾದ ಮ್ಯಾಜಿಕ್ ನಂಬರ್ 36.
ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ, ಎಎಪಿ, ಕಾಂಗ್ರೆಸ್ ಪ್ರಮುಖ ಎದುರಾಳಿಗಳು. ಎನ್ಡಿಎ ಮೈತ್ರಿಕೂಟ ಮಿತ್ರಪಕ್ಷ ಜೆಡಿಯುಗೆ ಬಿಜೆಪಿ 2 ಸೀಟುಗಳನ್ನು ಬಿಟ್ಟುಕೊಟ್ಟಿದೆ. 'ಇಂಡಿಯಾ' ಮೈತ್ರಿಕೂಟದ ಭಾಗವಾಗಿದ್ದರೂ ಎಎಪಿ, ಕಾಂಗ್ರೆಸ್ ಪ್ರತ್ಯೇಕವಾಗಿ ಚುನಾವಣೆಯನ್ನು ಎದುರಿಸುತ್ತಿವೆ.

ಆಮ್ ಆದ್ಮಿ ಪಕ್ಷದ ವಿರುದ್ಧ ಆಡಳಿತ ವಿರೋಧಿ ಅಲೆ ಇದೆ ಎಂದು ಬಿಜೆಪಿ, ಕಾಂಗ್ರೆಸ್ ಹೇಳುತ್ತಿವೆ. ಆದ್ದರಿಂದ ಚುನಾವಣೆಯಲ್ಲಿ ಗೆದ್ದು ರಾಷ್ಟ್ರ ರಾಜಧಾನಿಯಲ್ಲಿ ಅಧಿಕಾರ ಹಿಡಿಯಬೇಕು ಎಂದು ತಂತ್ರ ರೂಪಿಸಿ ಚುನಾವಣಾ ಪ್ರಚಾರವನ್ನು ನಡೆಸುತ್ತಿದೆ. ಎನ್ಡಿಎ ಮಿತ್ರಪಕ್ಷಗಳು ಬಿಜೆಪಿ ಬೆಂಬಲಿಸಿವೆ.
ಏಕನಾಥ ಶಿಂಧೆ ಘೋಷಣೆ: ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಏಕನಾಥ ಶಿಂಧೆ ದೆಹಲಿ ಚುನಾವಣೆಯಲ್ಲಿ ಮಹತ್ವದ ಘೋಷಣೆ ಮಾಡಿದ್ದಾರೆ. ರಾಜ್ಯದ ಎಲ್ಲಾ ಕ್ಷೇತ್ರಗಳಲ್ಲೂ ತಮ್ಮ ಪಕ್ಷ ಬಿಜೆಪಿ ಅಭ್ಯರ್ಥಿಗಳನ್ನು ಬೆಂಬಲಿಸಲಿದೆ ಎಂದು ಹೇಳಿದ್ದಾರೆ. ಶಿವಸೇನೆಯಲ್ಲಿ ಎರಡು ಬಣವಿದೆ. ಉದ್ಧವ್ ಠಾಕ್ರೆ ಮತ್ತು ಏಕನಾಥ ಶಿಂಧೆ. ಮಹಾರಾಷ್ಟ್ರದ 'ಮಹಾಯತಿ' ಮೈತ್ರಿಕೂಟದಲ್ಲಿ ಏಕನಾಥ ಶಿಂಧೆ ಇದ್ದು, ಅವರು ಬಿಜೆಪಿ ಜೊತೆ ಸೇರಿ ಸರ್ಕಾರ ರಚನೆ ಮಾಡಿದ್ದಾರೆ.
ದೆಹಲಿಯ 70 ಸೀಟುಗಳ ಪೈಕಿ 68 ಸೀಟುಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಕಣಕ್ಕಿಳಿದಿದ್ದಾರೆ. ಎರಡು ಕ್ಷೇತ್ರಗಳನ್ನು ಪಕ್ಷ ಜೆಡಿಯುಗೆ ಬಿಟ್ಟುಕೊಟ್ಟಿದೆ. 2020ರ ಚುನಾವಣೆಯಲ್ಲಿ ಬಿಜೆಪಿ ರಾಜ್ಯದಲ್ಲಿ 8 ಸೀಟುಗಳಲ್ಲಿ ಜಯಗಳಿಸಿತ್ತು. ಈ ಬಾರಿ ರಾಜ್ಯದಲ್ಲಿ ಸ್ಪಷ್ಟ ಬಹುಮತ ಪಡೆದು ಅಧಿಕಾರ ಹಿಡಿಯಬೇಕು ಎಂದು ಬಿಜೆಪಿ ಬಯಸಿದೆ.
2024ರ ಲೋಕಸಭೆ ಚುನಾವಣೆಯಲ್ಲಿ ಗೆದ್ದು ಕೇಂದ್ರದಲ್ಲಿ ಅಧಿಕಾರ ಪಡೆದ ನಂತರ ಬಿಜೆಪಿ ನೇತೃತ್ವದ ಎನ್ಡಿಎ ರಾಷ್ಟ್ರ ರಾಜಧಾನಿಯಲ್ಲಿ ಅಧಿಕಾರ ಹಿಡಿಯುವ ಉತ್ಸಾಹದಲ್ಲಿದೆ. ಬಿಜೆಪಿ ಕಲ್ಕಾಜಿ ಕ್ಷೇತ್ರದಲ್ಲಿ ದೆಹಲಿ ಸಿಎಂ ಅತಿಶಿ ವಿರುದ್ಧ ರಮೇಶ್ ಬಿಧೂರಿ ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ. ಅರವಿಂದ ಕೇಜ್ರಿವಾಲ್ ವಿರುದ್ಧ ನವದೆಹಲಿ ಕ್ಷೇತ್ರದಲ್ಲಿ ಬಿಜೆಪಿ ಪರ್ವೇಶ್ ವರ್ಮಾ ಕಣಕ್ಕಿಳಿಸಿದೆ, ಇವರು ಮಾಜಿ ಸಿಎಂ ಸಾಹಿಬ್ ಸಿಂಗ್ ವರ್ಮಾ ಪುತ್ರ.
ದೆಹಲಿ ವಿಧಾನಸಭೆ ಚುನಾವಣೆಗೆ ಬಿಜೆಪಿ ಎರಡು ಪ್ರಣಾಳಿಕೆ ಬಿಡುಗಡೆ ಮಾಡಿದೆ. 2ನೇ ಪ್ರಣಾಳಿಕೆಯಲ್ಲಿ ಪಕ್ಷ ಯುವಕರು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಾಗಲು ಒಂದು ಬಾರಿ 15 ಸಾವಿರ ರೂ. ಸಹಾಯಧನ ನೀಡಲಾಗುತ್ತದೆ ಎಂದು ಭರವಸೆ ಕೊಟ್ಟಿದೆ. ಅಲ್ಲದೇ ಕೆಜಿ ಯಿಂದ ಪಿಜಿ ತನಕ ಉಚಿತ ಶಿಕ್ಷಣವನ್ನು ನೀಡಲಾಗುತ್ತದೆ ಎಂದು ಹೇಳಿದೆ.
ಕಳೆದ ವಾರ ಬಿಜೆಪಿ ದೆಹಲಿ ಚುನಾವಣೆಗೆ ಮೊದಲ ಪ್ರಣಾಳಿಕೆ ಬಿಡುಗಡೆ ಮಾಡಿತ್ತು. ಮಹಿಳೆಯನ್ನು ಗುರಿಯಾಗಿಸಿಕೊಂಡು ಹಲವು ಭರವಸೆ ನೀಡಿತ್ತು. 2500 ರೂ. ಮಾಸಿಕ ಹಣಕಾಸಿನ ನೆರವು ನೀಡಲಾಗುತ್ತದೆ ಎಂದು ಭರವಸೆ ಕೊಟ್ಟಿತ್ತು. 500 ರೂ.ಗಳಿಗೆ ಎಲ್ಪಿಜಿ ಸಿಲಿಂಡರ್, ಗರ್ಭಿಣಿ ಮಹಿಳಯರಿಗೆ 21,000 ರೂ. ಆರ್ಥಿಕ ನೆರವು ಘೋಷಣೆ ಮಾಡಿತ್ತು.
-
"ಬೆಂಗಳೂರು: 370 ಎಕ್ರೆ ಜಕ್ಕೂರು ವೈಮಾನಿಕ ಶಾಲೆ ಜಾಗದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ಗೆ ಪ್ಲ್ಯಾನ್'' -
ಬೆಂಗಳೂರು ಬಂಗಲೆ ವಿವಾದ: ರಾಜೀವ್ ಚಂದ್ರಶೇಖರ್ ನಾಮಪತ್ರ ಅಂಗೀಕರಿಸಿದ ಚುನಾವಣಾ ಆಯೋಗ -
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral












Click it and Unblock the Notifications