ಕೊನೆಗೂ ಪ್ರತಿಭಟನೆ ಹಿಂಪಡೆದ ಅರವಿಂದ ಕೇಜ್ರಿವಾಲ್
ನವದೆಹಲಿ, ಜೂನ್ 19: ದೆಹಲಿ ಉಪ ರಾಜ್ಯಪಾಲ ಅನಿಲ್ ಬೈಜಾಲ್ ಅವರ ನಿವಾಸದಲ್ಲಿ ನಡೆಸುತ್ತಿದ್ದ ಪ್ರತಿಭಟನೆಯನ್ನು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಕೈ ಬಿಟ್ಟಿದ್ದಾರೆ. ಜೂನ್ 11 ರಿಂದ ಅವರು ಬೈಜಾಲ್ ನಿವಾಸದ ವೇಯ್ಟಿಂಗ್ ರೂಂ ನಲ್ಲಿ ಪ್ರತಿಭಟನೆ ಕೂತಿದ್ದರು.
ಇಂದು ದೆಹಲಿ ಲೆಫ್ಟಿನೆಂಟ್ ಗವರ್ನರ್ ಅರವಿಂದ ಕೇಜ್ರಿವಾಲ್ ಅವರಿಗೆ ಪತ್ರವೊಂದನ್ನು ಬರೆದಿದ್ದರು. ಪತ್ರದಲ್ಲಿ ತಕ್ಷಣ ಅಧಿಕಾರಿಗಳನ್ನು ಸಚಿವಾಲಯದಲ್ಲಿ ಭೇಟಿಯಾಗುವಂತೆ ಸಿಎಂಗೆ ಅವರು ಮನವಿ ಮಾಡಿಕೊಂಡಿದ್ದರು. ಇದರಿಂದ ಎರಡೂ ಕಡೆಯವರ ಅಸಮಧಾನ ಮತ್ತು ಕಾಳಜಿಯನ್ನು ಮಾತುಕತೆ ಮೂಲಕ ಪರಿಹರಿಸಲು ಸಾಧ್ಯವಾಗುತ್ತದೆ. ದೆಹಲಿ ಜನರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಭೇಟಿಯಾಗುವಂತೆ ಅವರು ಪತ್ರ ಬರೆದಿದ್ದರು.
ಇದಕ್ಕೂ ಮೊದಲು ಬೈಜಾಲ್ ಅವರನ್ನು ಭೇಟಿಯಾಗಲು ಕೇಜ್ರಿವಾಲ್, ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಮತ್ತು ಇತರ ಸಚಿವರು ಕಳೆದ ಸೋಮವಾರದಿಂದ ಯತ್ನಿಸುತ್ತಿದ್ದರು. ಆದರೆ ಭೇಟಿಗೆ ಅನುಮತಿ ನೀಡಿರಲಿಲ್ಲ. 'ಅಧಿಕಾರಿಗಳ ಪ್ರತಿಭಟನೆ ಕೊನೆಗೊಳಿಸಲು ಲೆಫ್ಟಿನೆಂಟ್ ಗವರ್ನರ್ ಮಧ್ಯ ಪ್ರವೇಶ ಮಾಡಬೇಕು. ಇದಲ್ಲದೆ ಮನೆ ಬಾಗಿಲಿಗೆ ಪಡಿತರ ವಿತರಣೆ ಯೋಜನೆಗೆ ಅನುಮತಿ ನೀಡಬೇಕು' ಎಂಬುದು ಕೇಜ್ರಿವಾಲ್ ಸರಕಾರದ ಬೇಡಿಕೆಯಾಗಿತ್ತು.

ಬೈಜಾಲ್ ಭೇಟಿಗೆ ಅವಕಾಶ ನೀಡದೇ ಇದ್ದ ಹಿನ್ನೆಲೆಯಲ್ಲಿ, ಅವರೆಲ್ಲಾ ಬೈಜಾಲ್ ಕಚೇರಿಯ ವೇಯ್ಟಿಂಗ್ ರೂಂನಲ್ಲೇ ಜೂನ್ 11ರಿಂದ ಪ್ರತಿಭಟನೆ ನಡೆಸುತ್ತಿದ್ದರು. ಈ ಸಂಬಂಧ ಮಧ್ಯ ಪ್ರವೇಶ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿಯವರಿಗೂ ಕೇಜ್ರಿವಾಲ್ ಮನವಿ ಮಾಡಿಕೊಂಡಿದ್ದಾರೆ. ಆದರೆ ಇದಕ್ಕೆ ಮೋದಿ ಸ್ಪಂದಿಸಿಲ್ಲ.
ಕೇಜ್ರಿವಾಲ್ ಜೊತೆಗೆ ಧರಣಿ ಕೂತಿದ್ದ ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಮತ್ತು ಆರೋಗ್ಯ ಸಚಿವ ಸತ್ಯೇಂದ್ರನಾಥ್ ಉಪವಾಸ ಧರಣಿಯನ್ನೂ ನಡೆಸುತ್ತಿದ್ದರು. ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಅವರಿಬ್ಬರೂ ಕ್ರಮವಾಗಿ ಸೋಮವಾರ ಮತ್ತು ಭಾನುವಾರ ಆಸ್ಪತ್ರೆ ಸೇರಿದ್ದರು.
ಕೊನೆಗೆ ಅನಿಲ್ ಬೈಜಾಲ್ ಅವರ ನಿವಾಸದ ವೇಯ್ಟಿಂಗ್ ರೂಂನಲ್ಲಿ ಉಳಿದಿದ್ದ ಅರವಿಂದ ಕೇಜ್ರಿವಾಲ್ ಮತ್ತು ಗೋಪಾಲ್ ರೈ ತಮ್ಮ ಪ್ರತಿಭಟನೆ ಮುಂದುವರಿಸಿದ್ದರು. ಇದೀಗ ಅವರೂ ತಮ್ಮ ಪ್ರತಿಭಟನೆ ಹಿಂದಕ್ಕೆ ಪಡೆದಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications