ಮೊದಲ ಅಧಿವೇಶನದಲ್ಲೇ ಎಡವಟ್ಟು ಮಾಡಿಕೊಂಡ ದೆಹಲಿ ಸಿ.ಎಂ ರೇಖಾಗುಪ್ತಾ: ಎಎಪಿ ಫೂಲ್ ಟ್ರೋಲ್!
ದೆಹಲಿಯಲ್ಲಿ ಅಧಿಕಾರಕ್ಕೇರಿದ 10 ದಿನಗಳ ಅವಧಿಯಲ್ಲೇ ದೆಹಲಿಯ ನೂತನ ಮುಖ್ಯಮಂತ್ರಿ ರೇಖಾಗುಪ್ತಾ ಅವರು ಫೂಲ್ ಟ್ರೋಲ್ ಆಗುತ್ತಿದ್ದಾರೆ. ದೆಹಲಿ ವಿಧಾನಸಭೆಯಲ್ಲಿ ಅವರು ಪ್ರಮುಖ ಚರ್ಚೆ ನಡೆಯುವಾಗ ಅವರ ಮಾಡಿರುವ ಕೆಲಸ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. ಹೌದು ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ದಾಖಲಿಸಿರುವ ಬಿಜೆಪಿಯು ಚುನಾವಣೆ ಸಮಯದಲ್ಲಿ ನೀಡಿರುವ ಭರವಸೆಗಳನ್ನು ಈಡೇರಿಸುವ ಸವಾಲಿನಲ್ಲಿ ಇದೆ. ಅಲ್ಲದೆ ಮುಖ್ಯಮಂತ್ರಿ ಕಚೇರಿಯಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಹಾಗೂ ಭಗತ್ಸಿಂಗ್ ಅವರ ಭಾವಚಿತ್ರಗಳನ್ನು ಬದಲಾಯಿಸಲಾಗಿದೆ ಎನ್ನುವ ವಿಚಾರವೂ ತೀವ್ರ ಟೀಕೆಗೆ ಕಾರಣವಾಗಿತ್ತು. ಇದೀಗ ವಿಧಾನಸಭೆಯಲ್ಲಿ ಅವರು ನಿದ್ದೆ ಮಾಡುತ್ತಿರುವ ವಿಡಿಯೋ ಟ್ರೋಲ್ ಆಗಿದೆ.
ರೇಖಾಗುಪ್ತಾ ಅವರು ಇದೇ ಮೊದಲ ಬಾರಿ ಶಾಸಕಿಯಾಗಿ ಆಯ್ಕೆಯಾಗಿದ್ದಾರೆ. ಅಲ್ಲದೆ ಅವರಿಗೆ ಸಚಿವರಾಗಿ ಇಲ್ಲವೇ ಶಾಸಕಿಯಾಗಿಯೂ ಅಧಿಕಾರ ನಿರ್ವಹಿಸಿರುವ ಜವಾಬ್ದಾರಿ ಇಲ್ಲ. ಹೀಗಾಗಿ ಎಲ್ಲರ ಕಣ್ಣು ಅವರ ಮೇಲೆಯೇ ಇದೆ. ಅವರು ಮೊದಲ ಅವಧಿಯಲ್ಲಿ ಯಾವ ರೀತಿ ಆಡಳಿತ ನಡೆಸಲಿದ್ದಾರೆ ಎನ್ನುವ ಬಗ್ಗೆ ಸಣ್ಣ ಆತಂಕ ಬಿಜೆಪಿ ಹೈಕಮಾಂಡ್ನಲ್ಲಿಯೂ ಇದೆ. ಈ ರೀತಿ ಇರುವಾಗಲೇ ದೆಹಲಿ ವಿಧಾನಸಭೆಯ ಮೊದಲ ಅಧಿವೇಶನ ನಡೆಯುತ್ತಿದೆ.

ದೆಹಲಿಯ ಮೊದಲ ಅಧಿವೇಶದಲ್ಲಿ ಎಲ್ಲಾ ಪಕ್ಷಗಳ ಶಾಸಕರು ಪ್ರಮಾಣವಚನ ಸ್ವೀಕರಿಸುತ್ತಿದ್ದಾರೆ. ಅಲ್ಲದೆ ದೆಹಲಿಯ ಆರ್ಥಿಕ ವಿಷಯ ಹಾಗೂ ವಿವಿಧ ಪ್ರಮುಖ ವಿಷಯಗಳ ಬಗ್ಗೆ ಚರ್ಚೆ ನಡೆಯುತ್ತಿದೆ. ಈ ರೀತಿ ಇರುವಾಗಲೇ ದೆಹಲಿಯ ನೂತನ ಮುಖ್ಯಮಂತ್ರಿ ರೇಖಾಗುಪ್ತಾ ಅವರು ನಿದ್ರೆಗೆ ಜಾರಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ. ಇದೀಗ ಈ ವಿಡಿಯೋವನ್ನು ಆಮ್ ಆದ್ಮಿ ಪಾರ್ಟಿಯು ಸೋಷಿಯಲ್ ಮೀಡಿಯಾಗಳಲ್ಲಿ ಶೇರ್ ಮಾಡಿಕೊಂಡು ವ್ಯಂಗ್ಯವಾಡಿದೆ.
ಇವರೇ ನೋಡಿ ದೆಹಲಿ ಮುಖ್ಯಮಂತ್ರಿ ಎಂದ ಎಎಪಿ: ಇನ್ನು ದೆಹಲಿಯ ನೂತನ ಮುಖ್ಯಮಂತ್ರಿ ರೇಖಾಗುಪ್ತಾ ಅವರು ಮೊದಲ ಅಧಿವೇಶನದಲ್ಲೇ ನಿದ್ದೆ ಮಾಡಿರುವುದಕ್ಕೆ ದೆಹಲಿಯ ವಿರೋಧ ಪಕ್ಷ ಆಮ್ ಆದ್ಮಿ ಪಾರ್ಟಿಯು ವ್ಯಂಗ್ಯವಾಡಿದೆ. ಇವರೇ ನೋಡಿ ದೆಹಲಿಯ ಮುಖ್ಯಮಂತ್ರಿ ರೇಖಾ ಗುಪ್ತಾ ಜಿ. ದೆಹಲಿಯ ಜನರು ಇವರನ್ನು ದೆಹಲಿಯ ಕೆಲಸ ಮಾಡುವುದಕ್ಕೆ ಆಯ್ಕೆ ಮಾಡಿ ಕಳುಹಿಸಿದ್ದಾರೆ. ಆದರೆ, ಸಿಎಂ ಮೇಡಂ ಅವರು ಸದನದಲ್ಲಿ ಚರ್ಚೆಯುವ ಸಮಯದಲ್ಲೇ ನಿದ್ರಿಗೆ ಜಾರಿದ್ದಾರೆ.
ರೇಖಾ ಗುಪ್ತಾ ಅವರೇ, ಡಾ.ಬಿ ಆರ್ ಅಂಬೇಡ್ಕರ್ ಮತ್ತು ಭಗತ್ ಸಿಂಗ್ ಅವರನ್ನು ಅವಮಾನಿಸಿದ್ದೀರಿ. ನಿಮಗೆ ಸ್ವಲ್ಪ ಬಿಡುವು ಸಿಕ್ಕರೆ, ದಯವಿಟ್ಟು ಸದನದಲ್ಲಿ ನಡೆಯುವ ಚರ್ಚೆಯತ್ತ ಗಮನ ಕೊಡಿ ಎಂದು ರೇಖಾ ಗುಪ್ತಾ ಅವರ ಬಗ್ಗೆ ಎಎಪಿ ವ್ಯಂಗ್ಯವಾಡಿದೆ.
ये हैं दिल्ली की मुख्यमंत्री रेखा गुप्ता जी, जिन्हें दिल्लीवालों ने सदन में दिल्ली का काम करने भेजा है लेकिन CM साहिबा सदन में चर्चा के दौरान नींद फ़रमा रहीं हैं‼️
— AAP (@AamAadmiParty) February 26, 2025
रेखा गुप्ता जी, बाबा साहब और शहीद भगत सिंह का अपमान करने से फ़ुरसत मिल जाये तो थोड़ा ध्यान सदन की चर्चा पर भी दे… pic.twitter.com/HRknjLTx6K
ಗ್ಯಾರಂಟಿ ಚರ್ಚೆ: ಇನ್ನು ಇಷ್ಟು ದಿನ ದೇಶದ ವಿವಿಧ ಭಾಗದಲ್ಲಿ ಗ್ಯಾರಂಟಿ ಯೋಜನೆಗಳ ಜಾರಿಗೆ ಪಟ್ಟು ಹಿಡಿದಿದ್ದ ಬಿಜೆಪಿಗೆ ಇದೀಗ ದೆಹಲಿಯಲ್ಲಿ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಲೇಬೇಕಾದ ಪರಿಸ್ಥಿತಿಯಲ್ಲಿ ಇದೆ. ಮೊದಲ ಅಧಿವೇಶನದಲ್ಲೇ ಬಿಜೆಪಿಯ ಭರವಸೆಗಳಿಗೆ ಅನುಮೋದನೆ ಸಿಗದೆ ಇರುವುದಕ್ಕೆ ಎಎಪಿ ಹಾಗೂ ಕಾಂಗ್ರೆಸ್ ಪಕ್ಷಗಳು ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದು. ಬಿಜೆಪಿಗೆ ನುಂಗಲಾರದ ಬಿಸಿ ತುಪ್ಪವಾಗಿ ಬದಲಾಗಿದೆ.
-
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಎಲೆಕ್ಷನ್ ಇವತ್ತೇ ನಡೆದರೆ ತಮಿಳುನಾಡು, ಕೇರಳಂ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಗೆಲುವು? ಸಮೀಕ್ಷೆ ನೀಡಿದ ಮಾಹಿತಿ ಇಲ್ಲಿದೆ -
ಟೀಂ ಇಂಡಿಯಾ ಕ್ರಿಕೆಟರ್ ಕುಲದೀಪ್ ಯಾದವ್ ಕೈಹಿಡಿದ ವಂಶಿಕಾ ಚಡ್ಡಾ ಯಾರು? -
Bengaluru: 1 ತಿಂಗಳು ಬದುಕೋಕೆ ಇಷ್ಟೊಂದು ಖರ್ಚಾಗುತ್ತಾ? ಯುವತಿಯ ಪೋಸ್ಟ್ ಕಂಡು ಬೆಚ್ಚಿಬಿದ್ದ ನೆಟ್ಟಿಗರು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
Oscars 2026: ಮೈಕಲ್ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ: ಪ್ರಶಸ್ತಿ ವಿಜೇತರ ಪಟ್ಟಿ ಇಲ್ಲಿದೆ -
SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಹಾಲ್ ಟಿಕೆಟ್ ತೋರಿಸಿದ್ರೆ KSRTC ಬಸ್ಸುಗಳಲ್ಲಿ ಉಚಿತ ಪ್ರಯಾಣ












Click it and Unblock the Notifications