ದೆಹಲಿಯಲ್ಲಿ ಶೀತದ ಅಲೆ: 6 ದಿನಗಳವರೆಗೆ ಹಳದಿ ಎಚ್ಚರಿಕೆ!
ಉತ್ತರ ಭಾರತದಲ್ಲಿ ಶೀತದ ಅಲೆ ಹೆಚ್ಚಾಗಿದ್ದು ಜನ ಬೆಳಗಿನ ಜಾವ ಮತ್ತು ಸಂಜೆಯಾಗುತ್ತಿದ್ದಂತೆ ಮನೆಬಿಟ್ಟು ಹೊರಬಾರದಂತ ಸ್ಥಿತಿ ನಿರ್ಮಾಣವಾಗಿದೆ. ಮೈಕೊರೆಯುವ ಚಳಿಗೆ ಜನ ಹೈರಾಣಾಗಿದ್ದಾರೆ. ರಾಷ್ಟ್ರ ರಾಜಧಾನಿಯಲ್ಲಿ ಇಂದು ತಾಪಮಾನ (1.4°C) ಅತ್ಯಂತ ಕಡಿಮೆ ದಾಖಲಾಗಿದೆ. ಹೀಗಾಗಿ ಇಂದಿನಿಂದ ದೆಹಲಿಯಲ್ಲಿ ಮುಂದಿನ ಆರು ದಿನಗಳವರೆಗೆ ತೀವ್ರ ಶೀತಗಾಳಿಯಿಂದಾಗಿ ಹಳದಿ ಎಚ್ಚರಿಕೆಯನ್ನು ಭಾರತ ಹವಾಮಾನ ಇಲಾಖೆ (IMD) ನೀಡಿದೆ. ಮೊದಲ ಮೂರು ದಿನಗಳಲ್ಲಿ ತಾಪಮಾನವು 2-3 ಡಿಗ್ರಿ ಸೆಲ್ಸಿಯಸ್ಗೆ ಇಳಿಯುವುದರೊಂದಿಗೆ ಮತ್ತೆ ಮೈ ಕೊರೆಯುವ ಚಳಿ ಹೆಚ್ಚಾಗಲಿದೆ. ದೆಹಲಿಯ ಜನರು ಮುಂದಿನ ಮೂರು ದಿನಗಳವರೆಗೆ ದಟ್ಟವಾದ ಮಂಜಿನ ಸ್ಥಿತಿಯನ್ನು ಕಾಣಲಿದ್ದಾರೆ.
ಬುಧವಾರದವರೆಗೆ ದೆಹಲಿ ಮತ್ತು ರಾಷ್ಟ್ರೀಯ ರಾಜಧಾನಿ ಪ್ರದೇಶ ಸೇರಿದಂತೆ ಉತ್ತರ ಭಾರತದ ಕೆಲವು ಭಾಗಗಳಲ್ಲಿ ತೀವ್ರವಾದ ಶೀತ ಅಲೆಯು ಹಿಡಿತ ಸಾಧಿಸುವ ಸಾಧ್ಯತೆಯಿದೆ ಎಂದು IMD ಭಾನುವಾರ ತಿಳಿಸಿದೆ. ಇದರೊಂದಿಗೆ IMD ಪ್ರಕಾರ ದೆಹಲಿ-NCR ನಲ್ಲಿ ಸೋಮವಾರ ಮತ್ತು ಮಂಗಳವಾರ ತಾಪಮಾನ 2 ಡಿಗ್ರಿ ಸೆಲ್ಸಿಯಸ್ಗೆ ಕುಸಿಯಬಹುದು.
ಹವಾಮಾನ ಇಲಾಖೆಯು ಬುಧವಾರದಂದು ತಾಪಮಾನ 4 ಡಿಗ್ರಿ ಸೆಲ್ಸಿಯಸ್ ಆಗಿರಬಹುದು. ಇದರ ಪರಿಣಾಮವಾಗಿ ದೆಹಲಿ ನಾಗರಿಕರಿಗೆ ಸ್ವಲ್ಪ ವಿರಾಮದ ನಂತರ ಕೋಲ್ಡ್ವೇವ್ ಪರಿಸ್ಥಿತಿಗಳು ಉಂಟಾಗಬಹುದು ಎಂದು ಹೇಳಿದರು. ಮುಂದಿನ ಐದು ದಿನಗಳವರೆಗೆ ದೆಹಲಿಯಲ್ಲಿ ಭಾರೀ ಮಂಜು ಮತ್ತು ಕಡಿಮೆ ಗೋಚರತೆ ಇರಲಿದೆ ಎಂದು IMD ಮುನ್ಸೂಚನೆ ನೀಡಿದೆ.

ಸೋಮವಾರ ಬೆಳಗ್ಗೆ ಮಂಜಿನಿಂದಾಗಿ ಉತ್ತರ ರೈಲ್ವೆ ಪ್ರದೇಶದಲ್ಲಿ 13 ರೈಲುಗಳು ತಡವಾಗಿ ಚಲಿಸಿವೆ ಎಂದು ಭಾರತೀಯ ರೈಲ್ವೆ ತಿಳಿಸಿದೆ. ಇದೆಲ್ಲದರ ನಡುವೆ ಜನವರಿ 26ರಂದು ನಡೆಯಲಿರುವ ಗಣರಾಜ್ಯೋತ್ಸವ ಪರೇಡ್ಗೆ ದೆಹಲಿಯಲ್ಲಿ ತಾಲೀಮು ನಡೆಯುತ್ತಿದ್ದು ತೀವ್ತ ಮಂಜು ಪರೇಡ್ಗೆ ಅಡ್ಡಿಯನ್ನುಂಟು ಮಾಡಿದೆ.
ಇಂದು ದೆಹಲಿಯಲ್ಲಿ ತಾಪಮಾನ
IMD ಪ್ರಕಾರ ದೆಹಲಿಯು ಇಂದು ಕನಿಷ್ಠ ತಾಪಮಾನ 4.7 ° Cರಷ್ಟಿದೆ. ಸಫ್ದರ್ಜಂಗ್ ವೀಕ್ಷಣಾಲಯದಲ್ಲಿ ವರದಿಯಾದ ಕನಿಷ್ಠ ತಾಪಮಾನ 1.4 ° C ಮತ್ತು ಲೋಧಿ ರಸ್ತೆಯಲ್ಲಿ ಪಾದರಸವು ಸೋಮವಾರ ಬೆಳಿಗ್ಗೆ 1.6 ° C ಗೆ ಇಳಿದಿದೆ.
ದೆಹಲಿಯಲ್ಲಿ ತಾಪಮಾನ ಸಾಮಾನ್ಯಕ್ಕಿಂತ ಆರು ಡಿಗ್ರಿ ಕಡಿಮೆಯಾಗಿದೆ. IMD ಪ್ರಕಾರ, "ಆಕಾಶ ಸ್ಪಷ್ಟವಾಗಿರುವುದರಿಂದ ಮತ್ತು ಸೂರ್ಯನ ಬೆಳಕು ಉತ್ತಮವಾಗಿರುವುದರಿಂದ ದೈನಂದಿನ ತಾಪಮಾನದಲ್ಲಿ ಯಾವುದೇ ಪ್ರಮುಖ ಕುಸಿತವಿಲ್ಲ. ರಾತ್ರಿ ಮತ್ತು ಮುಂಜಾನೆ ತಾಪಮಾನವು ತುಂಬಾ ಕಡಿಮೆ ಇರುತ್ತದೆ.

ಹವಾಮಾನ ಕಚೇರಿಯ ಪ್ರಕಾರ, ಹಿಮಾಲಯದಿಂದ ವಾಯುವ್ಯ ಭಾರತದ ಬಯಲು ಪ್ರದೇಶದ ಮೇಲೆ ವಾಯುವ್ಯ ಮಾರುತಗಳಿಂದ ಮುಂದಿನ ಎರಡು ದಿನಗಳಲ್ಲಿ ಕನಿಷ್ಠ ತಾಪಮಾನವು 2-4 ಡಿಗ್ರಿಗಳಷ್ಟು ಕುಸಿಯುವ ಸಾಧ್ಯತೆಯಿದೆ.
-
Summer Health Tips: ಬೇಸಿಗೆಯಲ್ಲಿ ಆರೋಗ್ಯ ಕಾಪಾಡಿಕೊಳ್ಳಲು ಬೇಕಾದ ಸಲಹೆಗಳು ಇಲ್ಲಿವೆ, ಪಾಲಿಸಿ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ












Click it and Unblock the Notifications